ನೋಟು ನಿಮ್ಮದು, ಓಟು ನಿಮ್ಮದು


Team Udayavani, Feb 4, 2023, 5:50 AM IST

ನೋಟು ನಿಮ್ಮದು, ಓಟು ನಿಮ್ಮದು

ಎಸ್‌.ಎ. ರಾಮದಾಸ್‌, ಶಾಸಕರು
ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ನನ್ನ ಮೊದಲ ಚುನಾವ ಣೆಯ ನೆನಪು ಸದಾ ಹಸುರು. ಅದು 1994ರಲ್ಲಿ ನಡೆದ ವಿಧಾನಸಭಾ ಚುನಾವಣೆ. ಆಗ ರಾಜ್ಯದಲ್ಲಿ ಜನತಾದಳದ ಅಲೆ. ಜನತಾದಳ ಅಬ್ಬರದ ಪ್ರಚಾರ ನಡೆ ಸಿತ್ತು. ಆಗೆಲ್ಲ ಚುನಾವಣೆಗಳಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು, ಬಂಟಿಂಗ್ಸ್‌ ಗಳು ಹೆಚ್ಚು.

ಜನತಾದಳದವರ ಬ್ಯಾನರ್‌ಗಳು, ಕಟೌಟ್‌ಗಳು ಉಳಿದ ಪಕ್ಷದವರಿ ಗಿಂತ ಹೆಚ್ಚಾಗಿತ್ತು.ನಮ್ಮ ಪಕ್ಷದವರೂ ಬ್ಯಾನರ್‌ಗಳು, ಕಟೌಟ್‌ಗಳು, ಬಂಟಿಂಗ್ಸ್‌ಗಳನ್ನು ಹಾಕಿದ್ದೆವು. ನಾನು ಆಗ ಯುವಕ. ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ನನ್ನ ಎದುರು ಜನತಾದಳದಿಂದ ಹಿರಿಯರಾದ ವೇದಾಂತ ಹೆಮ್ಮಿಗೆ ಸ್ಪರ್ಧಿಸಿದ್ದರು. ಒಮ್ಮೆ ಅವರು ಶಾಸಕರಾಗಿದ್ದರು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರ ಪಡೆಯನ್ನು ಕಟ್ಟಿಕೊಂಡು ಪ್ರಚಾರ ನಡೆಸಿದ್ದೆ. ಮನೆಮನೆ ಪ್ರಚಾರವೇ ನಮಗೆ ಮುಖ್ಯವಾಗಿತ್ತು. ನೋಟು ನಿಮ್ಮದು, ಓಟು ನಿಮ್ಮದು ಶಾಸಕ ನಿಮ್ಮವ- ಇದು ಕ್ಷೇತ್ರದಲ್ಲಿ ನಮ್ಮ ಸ್ಲೋಗನ್‌ ಆಗಿತ್ತು. ಪ್ರಚಾರದ ಸಮಯದಲ್ಲಿ ಜನರೇ ನನಗೆ ಹಣ ಕೊಟ್ಟರು.

ಹೀಗೆ ಸಂಗ್ರಹವಾಗಿದ್ದ ಹಣ 7.28 ಲಕ್ಷ ರೂಪಾಯಿಗಳು. ಚುನಾವಣ ಕಣದಲ್ಲಿ ಎದುರಾಳಿಗಳು ನನ್ನನ್ನು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದೆ. ಚುನಾವಣೆಗೆ ಏಳು ಲಕ್ಷ ರೂಪಾಯಿ ಖರ್ಚಾಯಿತು. ಉಳಿದ 28 ಸಾವಿರ ರೂಪಾಯಿಯನ್ನು ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಸಿಹಿ ತಿನಿಸುಗಳನ್ನು ಖರೀದಿಸಿ ಮನೆಮನೆಗೆ ವಿತರಿಸಿದೆವು. ನಾನು ಮೊದಲ ಸಲ ಚುನಾವಣೆಯಲ್ಲಿ ನಿಂತಾಗ ನನ್ನ ತಾಯಿ ನನಗೊಂದು ಮಾತು ಹೇಳಿದ್ದರು. ಯಾವುದೇ ಕಾರಣಕ್ಕೂ ಮತದಾರರಿಗೆ ಹೆಂಡ ಹಂಚಬಾರದು ಎಂದಿದ್ದರು.

ಮೊದಲ ಚುನಾವಣೆಯಿಂದ ಈವರೆಗೂ ನನ್ನ ಯಾವುದೇ ಚುನಾವಣೆಯಲ್ಲಿ ಮತದಾರರಿಗೆ ಹೆಂಡ ಹಂಚಿಲ್ಲ. ಅಂದಿನ ಚುನಾವಣೆಗೂ ಇವತ್ತಿನ ಚುನಾವಣೆಗೂ ಹೋಲಿಸುವ ಹಾಗೆಯೇ ಇಲ್ಲ. ಆಗಿನ ರಾಜಕಾರಣ, ಚುನಾವಣೆಗಳಲ್ಲಿ ಮೌಲ್ಯಗಳು ತುಂಬಾ ಇತ್ತು.

ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸಿದರು. ನಾನು ಯುವಕ ಎಂಬುದು ಆಗ ನನಗೆ ಪ್ಲಸ್‌ ಪಾಯಿಂಟ್‌ ಆಗಿತ್ತು. ನನ್ನ ಎದುರಾಳಿಯಾಗಿದ್ದ ಜನತಾದಳದ ವೇದಾಂತ ಹೆಮ್ಮಿಗೆ ಪರಾಭವಗೊಂಡರು. ಮುಂದೆ ಅವರು ನನಗೆ ಆತ್ಮೀಯರಾದರು.

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಮನಸ್ಸಿದ್ದರಷ್ಟೇ ಸಾಲದು, ಓಡ್ತಾ ಇರಬೇಕು; ಬಾಲ ಇರ್ಬೇಕು, ಅಲ್ಲಾಡಿಸುತ್ತಿರಬೇಕು !

ಮನಸ್ಸಿದ್ದರಷ್ಟೇ ಸಾಲದು, ಓಡ್ತಾ ಇರಬೇಕು; ಬಾಲ ಇರ್ಬೇಕು, ಅಲ್ಲಾಡಿಸುತ್ತಿರಬೇಕು !

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್

ಶಿವಮೊಗ್ಗದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್; ಈಶ್ವರಪ್ಪಗೆ ಆಯನೂರು ಮಂಜುನಾಥ್ ಟಾಂಗ್

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.