ನೋಟು ನಿಮ್ಮದು, ಓಟು ನಿಮ್ಮದು


Team Udayavani, Feb 4, 2023, 5:50 AM IST

ನೋಟು ನಿಮ್ಮದು, ಓಟು ನಿಮ್ಮದು

ಎಸ್‌.ಎ. ರಾಮದಾಸ್‌, ಶಾಸಕರು
ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ನನ್ನ ಮೊದಲ ಚುನಾವ ಣೆಯ ನೆನಪು ಸದಾ ಹಸುರು. ಅದು 1994ರಲ್ಲಿ ನಡೆದ ವಿಧಾನಸಭಾ ಚುನಾವಣೆ. ಆಗ ರಾಜ್ಯದಲ್ಲಿ ಜನತಾದಳದ ಅಲೆ. ಜನತಾದಳ ಅಬ್ಬರದ ಪ್ರಚಾರ ನಡೆ ಸಿತ್ತು. ಆಗೆಲ್ಲ ಚುನಾವಣೆಗಳಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು, ಬಂಟಿಂಗ್ಸ್‌ ಗಳು ಹೆಚ್ಚು.

ಜನತಾದಳದವರ ಬ್ಯಾನರ್‌ಗಳು, ಕಟೌಟ್‌ಗಳು ಉಳಿದ ಪಕ್ಷದವರಿ ಗಿಂತ ಹೆಚ್ಚಾಗಿತ್ತು.ನಮ್ಮ ಪಕ್ಷದವರೂ ಬ್ಯಾನರ್‌ಗಳು, ಕಟೌಟ್‌ಗಳು, ಬಂಟಿಂಗ್ಸ್‌ಗಳನ್ನು ಹಾಕಿದ್ದೆವು. ನಾನು ಆಗ ಯುವಕ. ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ನನ್ನ ಎದುರು ಜನತಾದಳದಿಂದ ಹಿರಿಯರಾದ ವೇದಾಂತ ಹೆಮ್ಮಿಗೆ ಸ್ಪರ್ಧಿಸಿದ್ದರು. ಒಮ್ಮೆ ಅವರು ಶಾಸಕರಾಗಿದ್ದರು. ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರ ಪಡೆಯನ್ನು ಕಟ್ಟಿಕೊಂಡು ಪ್ರಚಾರ ನಡೆಸಿದ್ದೆ. ಮನೆಮನೆ ಪ್ರಚಾರವೇ ನಮಗೆ ಮುಖ್ಯವಾಗಿತ್ತು. ನೋಟು ನಿಮ್ಮದು, ಓಟು ನಿಮ್ಮದು ಶಾಸಕ ನಿಮ್ಮವ- ಇದು ಕ್ಷೇತ್ರದಲ್ಲಿ ನಮ್ಮ ಸ್ಲೋಗನ್‌ ಆಗಿತ್ತು. ಪ್ರಚಾರದ ಸಮಯದಲ್ಲಿ ಜನರೇ ನನಗೆ ಹಣ ಕೊಟ್ಟರು.

ಹೀಗೆ ಸಂಗ್ರಹವಾಗಿದ್ದ ಹಣ 7.28 ಲಕ್ಷ ರೂಪಾಯಿಗಳು. ಚುನಾವಣ ಕಣದಲ್ಲಿ ಎದುರಾಳಿಗಳು ನನ್ನನ್ನು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದೆ. ಚುನಾವಣೆಗೆ ಏಳು ಲಕ್ಷ ರೂಪಾಯಿ ಖರ್ಚಾಯಿತು. ಉಳಿದ 28 ಸಾವಿರ ರೂಪಾಯಿಯನ್ನು ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಸಿಹಿ ತಿನಿಸುಗಳನ್ನು ಖರೀದಿಸಿ ಮನೆಮನೆಗೆ ವಿತರಿಸಿದೆವು. ನಾನು ಮೊದಲ ಸಲ ಚುನಾವಣೆಯಲ್ಲಿ ನಿಂತಾಗ ನನ್ನ ತಾಯಿ ನನಗೊಂದು ಮಾತು ಹೇಳಿದ್ದರು. ಯಾವುದೇ ಕಾರಣಕ್ಕೂ ಮತದಾರರಿಗೆ ಹೆಂಡ ಹಂಚಬಾರದು ಎಂದಿದ್ದರು.

ಮೊದಲ ಚುನಾವಣೆಯಿಂದ ಈವರೆಗೂ ನನ್ನ ಯಾವುದೇ ಚುನಾವಣೆಯಲ್ಲಿ ಮತದಾರರಿಗೆ ಹೆಂಡ ಹಂಚಿಲ್ಲ. ಅಂದಿನ ಚುನಾವಣೆಗೂ ಇವತ್ತಿನ ಚುನಾವಣೆಗೂ ಹೋಲಿಸುವ ಹಾಗೆಯೇ ಇಲ್ಲ. ಆಗಿನ ರಾಜಕಾರಣ, ಚುನಾವಣೆಗಳಲ್ಲಿ ಮೌಲ್ಯಗಳು ತುಂಬಾ ಇತ್ತು.

ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸಿದರು. ನಾನು ಯುವಕ ಎಂಬುದು ಆಗ ನನಗೆ ಪ್ಲಸ್‌ ಪಾಯಿಂಟ್‌ ಆಗಿತ್ತು. ನನ್ನ ಎದುರಾಳಿಯಾಗಿದ್ದ ಜನತಾದಳದ ವೇದಾಂತ ಹೆಮ್ಮಿಗೆ ಪರಾಭವಗೊಂಡರು. ಮುಂದೆ ಅವರು ನನಗೆ ಆತ್ಮೀಯರಾದರು.

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.