ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ : ಸಿಎಂ
Team Udayavani, Aug 13, 2019, 8:36 PM IST
ಶಿವಮೊಗ್ಗ :ಜಿಲ್ಲೆಯಾದ್ಯಂತ ಭೀಕರ ಮಳೆಗೆ ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲೆಯಲ್ಲಿ ಸಂಭವಿಸಿದ ಸಾವು ನೋವುಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ನೆರೆಯಿಂದ ಸಾವನಪ್ಪಿದವರಿಗೆ ನಾಳೆಯೊಳಗೆ ೫ ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಜಿಲ್ಲೆಯ ನೆರೆಪೀಡಿತ ಪ್ರದೇಶಗಳ ಭೇಟಿ ನೀಡಿದ ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ಸೂಚನೆಯನ್ನು ಹೊರಡಿಸಲಾಯಿತು.
ಜಿಲ್ಲೆಯಾದ್ಯಂತ ಹಾನಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ವರದಿಯನ್ನು ಪಡೆದ ಮುಖ್ಯಮಂತ್ರಿ ಜಿಲ್ಲೆಯಲ್ಲಿ ಈವರೆಗೆ, ನೆರೆಯಿಂದಾಗಿ 7 ಜನರ ಸಾವನಪ್ಪಿದ್ದಾರೆ ಹಾಗೂ ಸುಮಾರು 87 ರಾಸುಗಳ ಸಾವನಪ್ಪಿರುವ ವರದಿ ಪಡೆದುಕೊಂಡರು.
ಒಂದು ಹಸು ಸಾವಿಗೆ 30 ಸಾವಿರ ರೂ. ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ನಾಳೆಯೊಳಗೆ ನೆರೆಯಿಂದಾಗಿ ಸಾವು ಕಂಡಿರುವವರಿಗೆ 5 ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಒಂದು ಕಡೆ ನೆರೆ ವೀಕ್ಷಿಸುತ್ತಿದ್ದವರು ಅಪಘಾತದಲ್ಲಿ ಸಾವನ್ನಪ್ಪಿದ್ದು ಇದನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಪರಿಹಾರ ನೀಡಲು ಆದೇಶ ನೀಡಿದ್ದಾರೆ.
ಅದೇ ರೀತಿ ನೆರೆ ಬಂದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸಾವನಪ್ಪಿರುವವರಿಗೆ ತಕ್ಷಣವೇ ಮೆಸ್ಕಾಂನಿಂದ ಪರಿಹಾರ ಕೂಡಲೇ ನೀಡಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ತುರ್ತು ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ ಎಂದ ಅಧಿಕಾರಿಯನ್ನು ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ