ಕೆಸಿಆರ್ ವಿರುದ್ಧ ಪ್ರತಿಭಟನೆ; ಕತ್ತೆ ಕದ್ದ ಆರೋಪದಡಿ NSUI ಅಧ್ಯಕ್ಷನ ಬಂಧನ, “ಕೈ” ಆಕ್ರೋಶ
ಸಿಎಂ ಕೆಸಿಆರ್ ಅವರ ಫೋಟೊವನ್ನು ಕತ್ತೆಯ ಕೊರಳಿಗೆ ಕಟ್ಟಿ, ಕೇಕ್ ಪೀಸ್ ಅನ್ನು ತಿನ್ನುವಂತೆ ಮಾಡಿದ್ದರು.
Team Udayavani, Feb 19, 2022, 3:53 PM IST
ಕರೀಂನಗರ್(ತೆಲಂಗಾಣ): ಕತ್ತೆಯನ್ನು ಕದ್ದ ಆರೋಪದ ಮೇಲೆ ಎನ್ ಎಸ್ ಯುಐ(ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ)ನ ಅಧ್ಯಕ್ಷ ಬಲಮುರಿ ವೆಂಕಟ್ ನರಸಿಂಗ ರಾವ್ ಎಂಬಾತನನ್ನು ತೆಲಂಗಾಣದ ಜಮ್ಮೈಕುಂಟಾ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರಿಗಾಗಿ 3 ಎಕರೆ ಜಾಗ: ಸಿಎಂ ಭರವಸೆ
ಶುಕ್ರವಾರ (ಫೆ.18) ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹುಟ್ಟುಹಬ್ಬವಾಗಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವೆಂಕಟ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಎಂ ಕೆಸಿಆರ್ ಅವರ ಫೋಟೊವನ್ನು ಕತ್ತೆಯ ಕೊರಳಿಗೆ ಕಟ್ಟಿ, ಕೇಕ್ ಪೀಸ್ ಅನ್ನು ತಿನ್ನುವಂತೆ ಮಾಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಂತರ ಟಿಆರ್ ಎಸ್ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ಕುರಿತು ಕೆಲವರು ಜಮೈಕುಂಟಾ ಪೊಲೀಸರಿಗೆ ದೂರು ನೀಡಿರುವುದಾಗಿ ವರದಿ ವಿವರಿಸಿದೆ.
ಜಮೈಕುಂಟಾ ಪೊಲೀಸರು, ಕತ್ತೆಯನ್ನು ಕದ್ದ ಆರೋಪದಡಿ ವೆಂಕಟ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಾಣಿಯ ಜತೆ ಅಮಾನವೀಯ ರೀತಿಯಲ್ಲಿ ನಡೆದುಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಗುರುವಾರ ರಾತ್ರಿ ವೆಂಕಟ್ ಸಮ್ಮಕ್ಕಾ ಸರಳಮ್ಮ ಜಾತ್ರೆಗೆ ಹೋಗಿ ಮನೆಗೆ ಬಂದಾಗ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ಕತ್ತೆಯನ್ನು ಎಲ್ಲಿಂದ ತರಲಾಗಿದೆ ಎಂಬುದನ್ನು ವೆಂಕಟ್ ಬಹಿರಂಗಪಡಿಸಿಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಕಾಂಗ್ರೆಸ್ ಆಕ್ರೋಶ: ಕೆಸಿಆರ್ ಆಡಳಿತದಲ್ಲಿ ತೆಲಂಗಾಣ ಪೊಲೀಸರಿಂದ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ವೆಂಕಟ್ ಬಂಧನದ ಬಳಿಕ ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿಯ ತೆಲಂಗಾಣ ಪ್ರಭಾರಿ ಮಾಣಿಕಂ ಠಾಗೋರ್ ಕೂಡಾ ಟ್ವೀಟ್ ಮಾಡಿದ್ದು, ತೆಲಂಗಾಣ ಸಿಎಂ ಕೆಸಿಆರ್ ಗಾರು ಇದನ್ನು ನಂಬಲು ಸಾಧ್ಯವಿಲ್ಲ. ಅಧಿಕಾರ ನಿಮ್ಮ ಕೈಯಲ್ಲಿ ಹೇಗೆ ಉಪಯೋಗವಾಗುತ್ತಿದೆ, ವಿದ್ಯಾರ್ಥಿ ಮುಖಂಡನ ಮೇಲೆ ಸುಳ್ಳು ಕೇಸ್ ದಾಖಲಿಸುತ್ತೀರಾ? ಹಿಟ್ಲರ್ ರೀತಿ ವರ್ತಿಸುವ ನಿಮ್ಮನ್ನು ಖಂಡಿಸಲು ಪದಗಳೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ