ಕೋವಿಡ್: ಒಡಿಶಾ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಾಪಾತ್ರ ನಿಧನ
Team Udayavani, May 20, 2021, 12:39 AM IST
ಭುವನೇಶ್ವರ: ಒಡಿಶಾ ಕ್ರಿಕೆಟ್ ತಂಡದ ಮಾಜಿ ನಾಯಕ ಪ್ರಶಾಂತ್ ಮೊಹಾಪಾತ್ರ (47) ಬುಧವಾರ ಬೆಳಗ್ಗೆ ಇಲ್ಲಿನ ಎಐಐಎಂಎಸ್ ಆಸ್ಪತ್ರೆಯಲ್ಲಿ ಕೋವಿಡ್ನಿಂದ ಕೊನೆಯುಸಿರೆಳೆದರು.
ಇದರೊಂದಿಗೆ ಹತ್ತೇ ದಿನಗಳ ಅಂತರದಲ್ಲಿ ತಂದೆ ಹಾಗೂ ಮಗ ಇಬ್ಬರೂ ಕೋವಿಡ್ಗೆ ಬಲಿಯಾದಂತಾಯಿತು. ಪ್ರಶಾಂತ್ ಮೊಹಾಪಾತ್ರ ಅವರ ತಂದೆ, ರಾಜ್ಯಸಭಾ ಎಂಪಿ, ಪದ್ಮಭೂಷಣ ಪುರಸ್ಕೃತ ರಘುನಾಥ್ ಮೊಹಾಪಾತ್ರ ಮೇ 9ರಂದು ಇದೇ ಸೋಂಕಿನಿಂದ ಸಾವನ್ನಪ್ಪಿದ್ದರು.
ಪ್ರಶಾಂತ್ ಸ್ಥಿತಿ ಗಂಭೀರವಾದ್ದರಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಆಸ್ಪತ್ರೆಯ ತಜ್ಞ ವೈದ್ಯರ ತಂಡವೊಂದು ಇವರ ಆರೋಗ್ಯದ ಮೇಲೆ ವಿಶೇಷ ನಿಗಾ ಇರಿಸಿತ್ತು. ಆದರೆ ಇದು ಫಲಕಾರಿಯಾಗಲಿಲ್ಲ ಎಂದು ಆಸ್ಪತ್ರೆಯ ಸುಪರಿಂಟೆಂಡೆಂಟ್ ಡಾ| ಎಸ್.ಎನ್. ಮೊಹಂತಿ ಹೇಳಿದರು.
ಪ್ರಶಾಂತ್ ಅವರ ಸಹೋದರ ಜಸೋಬಂತ್ ಕೂಡ ಕೋವಿಡ್ ಪಾಸಿಟಿವ್ ಫಲಿತಾಂಶ ಹೊಂದಿದ್ದು, ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಲಗೈ ಓಪನರ್
1973ರ ಸೆ. ಒಂದರಂದು ಜನಿಸಿದ ಪ್ರಶಾಂತ್ ಮೊಹಾಪಾತ್ರ ಆತ್ಮೀಯರ ವಲಯದಲ್ಲಿ “ಮುನ್ನಾ’ ಎಂದೇ ಜನಪ್ರಿಯರಾಗಿದ್ದರು. ಬಲಗೈ ಓಪನರ್ ಆಗಿದ್ದ ಅವರು ಮೊದಲು ಅಂಡರ್-19, ಬಳಿಕ 1990ರಲ್ಲಿ ಒಡಿಶಾ ರಣಜಿ ತಂಡವನ್ನು ಪ್ರವೇಶಿಸಿದರು. ದುಲೀಪ್ ಟ್ರೋಫಿ ಹಾಗೂ ದೇವಧರ್ ಟ್ರೋಫಿ ಕ್ರಿಕೆಟ್ನಲ್ಲಿ ಪೂರ್ವ ವಲಯವನ್ನು ಪ್ರತಿನಿಧಿಸಿದ್ದರು. 45 ಪ್ರಥಮ ದರ್ಜೆ ಪಂದ್ಯಗಳಿಂದ 2,196 ರನ್ ಗಳಿಸಿದ್ದರು. ಇದರಲ್ಲಿ 5 ಶತಕ ಸೇರಿತ್ತು. ನಿವೃತ್ತಿ ಬಳಿಕ ಬಿಸಿಸಿಐ ಮ್ಯಾಚ್ ರೆಫ್ರಿಯಾಗಿಯೂ ಕರ್ತವ್ಯ ನಿಭಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ