
ಮಾಜಿ ಸಚಿವ ಎಸ್.ಆರ್. ಪಾಟೀಲ ಭಾವಚಿತ್ರ ಇರುವ ಟಿ-ಶರ್ಟ್, ಗಡಿಯಾರಗಳು ಪತ್ತೆ
Team Udayavani, Mar 28, 2023, 12:35 AM IST

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸಕ್ಕರೆ ಕಾರ್ಖಾನೆ ಗೋದಾಮಿನಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ ಭಾವಚಿತ್ರ ಇರುವ ಅಪಾರ ಪ್ರಮಾಣದ ಟಿ-ಶರ್ಟ್ ಹಾಗೂ ಗೋಡೆ ಗಡಿಯಾರಗಳು ಇರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮುದ್ದೇಬಿಹಾಳ ತಾಲೂಕಿನ ಯರಗಲ್-ಮದರಿ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಟಿ-ಶರ್ಟ್, ಗೋಡೆ ಗಡಿಯಾರಗಳು ಸೇರಿದಂತೆ ಚುನಾವಣೆಯಲ್ಲಿ ಜನರಿಗೆ ಹಂಚಲು ಇತರೆ ವಸ್ತುಗಳನ್ನು ದಾಸ್ತಾನು ಮಾಡಿದ್ದಾಗಿ ಕಂದಾಯ, ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.
ಕೂಡಲೇ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಟಿ-ಶರ್ಟ್, ಗಡಿಯಾರಗಳು, ಕೈಚೀಲಗಳು ಪರಿಶೀಲನೆ ವೇಳೆ ಪತ್ತೆಯಾಗಿವೆ. ಹೀಗೆ ಪತ್ತೆಯಾದ ವಸ್ತುಗಳ ಮೇಲೆ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರ ಭಾವಚಿತ್ರ ಇರುವುದು ಕಂಡುಬಂದಿದೆ.
ದಾಸ್ತಾನು ಮಾಡಿದವರು ಯಾರು, ಎಲ್ಲಿಗೆ ಸಾಗಿಸಲು ಯೋಜಿಸಿದ್ದರು, ಪತ್ತೆಯಾಗಿರುವ ವಸ್ತುಗಳ ಮೌಲ್ಯ ಎಷ್ಟು ಎಂದೆಲ್ಲಾ ಸಮಗ್ರ ಮಾಹಿತಿ ಸಂಗ್ರಹಿಸಿ, ಲೆಕ್ಕ ಹಾಕುವಲ್ಲಿ ನಿರತರಾಗಿದ್ದಾರೆ.
ಹೀಗಾಗಿ ಅಧಿಕಾರಿಗಳು ಪ್ರಕರಣದ ಕುರಿತು ಮಾಧ್ಯಮಗಳಿಗೆ ಹೆಚ್ಚಿನ ವಿವರ ನೀಡುತ್ತಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Cauvery issue; ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳದ ನಟ-ನಟಿಯರ ಚಿತ್ರ ಬಹಿಷ್ಕರಿಸಿ: ಯತ್ನಾಳ

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ
MUST WATCH
ಹೊಸ ಸೇರ್ಪಡೆ

Congress ಸರಕಾರ ವರ್ಚಸ್ಸು ಕಳೆದುಕೊಂದು ಆಪರೇಷನ್ ಗೆ ಮುಂದಾಗಿದೆ: ಬೊಮ್ಮಾಯಿ ಕಿಡಿ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್