ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ


Team Udayavani, Jul 23, 2021, 11:09 PM IST

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಟೋಕಿಯೊ : ಒಲಿಂಪಿಕ್ಸ್‌ ಹಾಕಿಯಲ್ಲಿ ಭಾರತವೇ ಸಾಮ್ರಾಟನಾಗಿ ಮೆರೆಯುತ್ತಿದ್ದ ಕಾಲವೊಂದಿತ್ತು. ಸತತ 6 ಚಿನ್ನ ಗೆದ್ದು ಬೀಗಿದ ಹಿರಿಮೆ ನಮ್ಮದು. ಆಗ ಧ್ಯಾನ್‌ಚಂದ್‌ ಎಂಬ ಮಾಂತ್ರಿಕನಿದ್ದರು. ಇವರಷ್ಟೇ ಪ್ರಭಾವಶಾಲಿ ಹಾಕಿಪಟುಗಳಿದ್ದರು. ಯುರೋಪಿಯನ್‌ ಶೈಲಿ ಇನ್ನೂ ಪ್ರವರ್ಧಮಾನಕ್ಕೆ ಬಂದಿರಲಿಲ್ಲ. ಏಶ್ಯ ಖಂಡ ಜಾಗತಿಕ ಹಾಕಿಯ ದೊಡ್ಡ ಶಕ್ತಿಯಾಗಿತ್ತು.
ಆದರೆ ಕಾಲ ಬದಲಾಯಿತು. ಏಶ್ಯನ್‌ ಶೈಲಿ ಮೂಲೆಗುಂಪಾಯಿತು. ಭಾರತವೂ ಹಿನ್ನಡೆ ಅನುಭವಿಸುತ್ತ ಹೋಯಿತು. 1928ರಿಂದ 1980ರ ಅವಧಿಯಲ್ಲಿ 7 ಚಿನ್ನ, ಒಂದು ಬೆಳ್ಳಿ, 2 ಕಂಚಿನ ಪದಕ ಗೆದ್ದು ಮೆರೆದಿದ್ದ ಭಾರತ, 1980ರ ಬಳಿಕ ಒಂದೂ ಒಲಿಂಪಿಕ್ಸ್‌ ಪದಕ ಗೆದ್ದಿಲ್ಲ. ಇದು ಹಾಕಿ ತವರಿಗೆ ಒಂದೊದಗಿದ ದುರ್ಗತಿ.

ಈ ಬರಗಾಲವನ್ನು ನೀಗಿಸುವ ಸಾಮರ್ಥ್ಯ ಟೋಕಿಯೊಗೆ ಬಂದಿಳಿದಿರುವ ಮನ್‌ಪ್ರೀತ್‌ ಸಿಂಗ್‌ ಬಳಗಕ್ಕಿದೆ ಎಂಬುದು ಬಲವಾದ ನಿರೀಕ್ಷೆ. ಶನಿವಾರ ಗ್ರೂಪ್‌ “ಎ’ ಮೊದಲ ಪಂದ್ಯದಲ್ಲಿ 8ನೇ ರ್‍ಯಾಂಕಿಂಗ್‌ನ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಸೆಣಸಲಿದೆ. ಇಲ್ಲಿ ಒಲಿಂಪಿಕ್‌ ಚಾಂಪಿಯನ್‌ ಆರ್ಜೆಂಟೀನಾ, ಬಲಿಷ್ಠ ಆಸ್ಟ್ರೇಲಿಯ, ಆತಿಥೇಯ ಜಪಾನ್‌ ಮತ್ತು ಸ್ಪೇನ್‌ ತಂಡಗಳಿವೆ.

“ಬಿ’ ವಿಭಾಗದಲ್ಲಿ ವಿಶ್ವ ಚಾಂಪಿಯನ್‌ ಬೆಲ್ಜಿಯಂ, ಕೆನಡಾ, ಜರ್ಮನಿ, ಗ್ರೇಟ್‌ ಬ್ರಿಟನ್‌, ನೆದರ್ಲೆಂಡ್ಸ್‌ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸ್ಥಾನ ಪಡೆದಿವೆ. ಪ್ರತೀ ವಿಭಾಗದ ಅಗ್ರ 4 ತಂಡಗಳು ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುತ್ತವೆ.
ರಿಯೋದಲ್ಲಿ 8ನೇ ಸ್ಥಾನಕ್ಕೆ ಕುಸಿದ ಭಾರತವನ್ನು ಮೇಲೆತ್ತಿ ನಿಲ್ಲಿಸಬೇಕಾದ ಮಹತ್ವದ ಹೊಣೆಗಾರಿಕೆ ಮನ್‌ಪ್ರೀತ್‌ ಪಡೆಯ ಮೇಲಿದೆ.

ಇದನ್ನೂ ಓದಿ :ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಭಾರತವೇ ಫೇವರಿಟ್‌
ಅಷ್ಟೇನೂ ಬಲಿಷ್ಠವಲ್ಲದ ನ್ಯೂಜಿಲ್ಯಾಂಡ್‌ ಮೊದಲ ಎದುರಾಳಿಯಾಗಿ ಸಿಕ್ಕಿರುವುದು ಭಾರತದ ಅದೃಷ್ಟವೇ ಸರಿ. ಇಲ್ಲಿ ದೊಡ್ಡ ಅಂತರದ ಜಯ ಸಾಧಿಸಿದರೆ ಮನ್‌ಪ್ರೀತ್‌ ಪಡೆಯ ಆತ್ಮವಿಶ್ವಾಸ ಸಹಜವಾಗಿಯೇ ಹೆಚ್ಚಲಿದೆ.

ಬ್ಲ್ಯಾಕ್‌ ಸ್ಟಿಕ್ಸ್‌ ವಿರುದ್ಧ ಭಾರತವೇ ಫೇವರಿಟ್‌ ಎಂಬುದರಲ್ಲಿ ಅನುಮಾನವಿಲ್ಲ. ರಿಯೋ ಒಲಿಂಪಿಕ್ಸ್‌ ಬಳಿಕ ನ್ಯೂಜಿಲ್ಯಾಂಡ್‌ ವಿರುದ್ಧ ಆಡಿದ 11 ಪಂದ್ಯಗಳಲ್ಲಿ ಭಾರತ ಎಂಟನ್ನು ಗೆದ್ದಿದೆ. 34 ಗೋಲು ಸಿಡಿಸಿದೆ. ಬಿಟ್ಟುಕೊಟ್ಟದ್ದು 14 ಗೋಲು ಮಾತ್ರ. ಟೋಕಿಯೋದಲ್ಲೇ ನಡೆದ 2019ರ ಎಫ್ಐಎಚ್‌ ಟೆಸ್ಟ್‌ನಲ್ಲಿ ಕೊನೆಯ ಸಲ ನ್ಯೂಜಿಲ್ಯಾಂಡನ್ನು ಭಾರತ ಮಣಿಸಿತ್ತು.

ವನಿತೆಯರಿಗೆ ಡಚ್‌ ಸವಾಲು
ಸತತ 2ನೇ ಒಲಿಂಪಿಕ್ಸ್‌ ಕಾಣುತ್ತಿರುವ ವನಿತೆಯರಿಗೆ ಆರಂಭದಲ್ಲೇ ಡಚ್ಚರ ಕಠಿನ ಸವಾಲು ಎದುರಾಗಿದೆ. ಆದರೆ ರಿಯೋ ಬಳಿಕ ರಾಣಿ ರಾಮ್‌ಪಾಲ್‌ ಬಳಗ ಹಂತ ಹಂತವಾಗಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಲೇ ಹೋಗಿರುವುದು ಉಲ್ಲೇಖನೀಯ. 2016ರ ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ, 2017ರ ಏಶ್ಯ ಕಪ್‌ ಗೆದ್ದಿದೆ. 2018ರ ಏಶ್ಯಾಡ್‌ನ‌ಲ್ಲಿ ಬೆಳ್ಳಿ ಜಯಿಸಿದೆ. ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಸಲ ಕ್ವಾರ್ಟರ್‌ ಫೈನಲ್‌ ತಲುಪಿದ್ದೆಲ್ಲ ವನಿತೆಯರ ಸಾಧನೆ.

ಟಾಪ್ ನ್ಯೂಸ್

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.