ಜೂನ್ 6ಕ್ಕೆ ಕೇರಳ, ಕರ್ನಾಟಕಕ್ಕೆ ಮುಂಗಾರು
Team Udayavani, Jun 1, 2019, 6:00 AM IST
ಬೆಂಗಳೂರು: ಕೇರಳ ಮತ್ತು ಕರ್ನಾಟಕಕ್ಕೆ, ಒಂದೇ ದಿನ ಜೂ. 6ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾ ಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ. 6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗ ಲಿದ್ದು, ದ.ಭಾರತದಲ್ಲಿ ಶೇ. 97ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಘೋಷಿಸಿರುವಂತೆ ಜೂ.6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗಲಿದ್ದು, ದ.ಭಾರತದಲ್ಲಿ ಶೇ.97ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಜೂನ್ ಆರಂಭದಿಂದ ಸೆಪ್ಟಂಬರ್ ಅಂತ್ಯದವರೆಗೆ ನೈಋತ್ಯ ಮುಂಗಾರು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.8ರಷ್ಟು ಹೆಚ್ಚು ಕಡಿಮೆಯಾಗಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್, ಕಳೆದ ಬಾರಿಯಂತೆ ಈ ವರ್ಷವೂ ಕೇರಳ ಮತ್ತು ಕರ್ನಾಟಕಕ್ಕೆ ಒಂದೇ ದಿನ (ಜೂ.6) ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ. ಹಿಂದೆಯೂ ಹಲವು ಬಾರಿ ಕರ್ನಾಟಕ ಮತ್ತು ಕೇರಳದ ಕರಾವಳಿಗೆ ಒಂದೇ ದಿನ ಮುಂಗಾರು ಪ್ರವೇಶಿಸಿದ ಉದಾಹರಣೆಗಳಿದ್ದು, ಈ ಬಾರಿಯೂ ಮರುಕಳಿಸುವ ಸಾಧ್ಯತೆಯಿದೆ ಎಂದರು.
ಕೆಲವೆಡೆ ಭಾರೀ ಮಳೆ
ಮುಂದಿನ ಎರಡು ದಿನಗಳು ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ