ಲಸಿಕೆಗೆ 18 ವರ್ಷ ಮೇಲ್ಪಟ್ಟವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ


Team Udayavani, May 25, 2021, 7:35 AM IST

ಲಸಿಕೆಗೆ 18+ ನವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ

ಹೊಸದಿಲ್ಲಿ: ನೀವು 18ರಿಂದ 44ರ ವಯೋಮಾನದವರಾ? ನಿಮ್ಮಲ್ಲಿ ಸ್ಮಾರ್ಟ್‌ ಫೋನ್‌ ಅಥವಾ ಇಂಟರ್ನೆಟ್‌ ಸಂಪರ್ಕ ಇಲ್ಲವೇ? ಹಾಗಿದ್ದರೆ ಲಸಿಕೆ ಪಡೆಯಲು ಕೋವಿನ್‌ ವೆಬ್‌ ಪೋರ್ಟಲ್‌ ನಲ್ಲಿ ನೋಂದಣಿ ಮಾಡಲೇಬೇಕೆಂದೇನೂ ಇಲ್ಲ. ನೇರವಾಗಿ ಸರಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಅಲ್ಲೇ ನೋಂದಣಿ ಮಾಡಿಕೊಳ್ಳಬಹುದು.

ಇಂಥದ್ದೊಂದು ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದೆ. ಮುಂಚಿತವಾಗಿಯೇ ಕೋವಿನ್‌ ನಲ್ಲಿ ನೋಂದಣಿ ಮಾಡಿಕೊಂಡವರಿಗೆ(18-44 ವಯೋಮಾನದವರು) ಲಸಿಕೆ ವಿತರಣೆ ಕೇಂದ್ರದಲ್ಲಿ ಮೊದಲಿಗೆ ಲಸಿಕೆ ವಿತರಿಸಲಾಗುತ್ತದೆ. ದಿನದ ಅಂತ್ಯದಲ್ಲಿ ಇನ್ನೂ ಲಸಿಕೆಯ ಡೋಸ್‌ಗಳು ಉಳಿದಿದ್ದರೆ ಅದನ್ನು “ನೋಂದಣಿ ಮಾಡದೇ ಬಂದವರಿಗೆ’ ನೀಡಲಾಗುತ್ತದೆ. ಇದರಿಂದ ಲಸಿಕೆ ಪೋಲಾಗುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ.

ಹೀಗಿದ್ದರೂ, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ನಿರ್ಧಾರವನ್ನು ಆಯಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಟ್ಟು ಬಿಡಲಾಗಿದೆ. ಜತೆಗೆ ಸದ್ಯಕ್ಕೆ ಸರಕಾರಿ ಲಸಿಕಾ ಕೇಂದ್ರಗಳಲ್ಲಿ ಮಾತ್ರವೇ ಈ ಸೌಲಭ್ಯವಿದ್ದು, ಖಾಸಗಿಯಲ್ಲಿ ಇರುವುದಿಲ್ಲ ಎಂದೂ ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. 45 ವರ್ಷ ದಾಟಿದವರಿಗೆ ಈಗಲೂ ಸ್ಥಳದಲ್ಲೇ ನೋಂದಣಿ ಮಾಡುವ ಅವಕಾಶವಿದೆ.

ಸ್ಪುಟ್ನಿಕ್‌ ವಿ ಲಸಿಕೆ ಉತ್ಪಾದನೆ ಶುರು
ಹೊಸದಿಲ್ಲಿ: ರಷ್ಯಾ ಸರಕಾರದ ರಷ್ಯನ್‌ ಡೈರೆಕ್ಟ್ ಇನ್ವೆಸ್ಟ್‌ಮೆಂಟ್‌ ಫ‌ಂಡ್‌ (ಆರ್‌ಡಿಐಎಫ್) ಮತ್ತು ದೇಶದ ಪ್ರಮುಖ ಔಷಧೋದ್ಯಮ ಸಂಸ್ಥೆ ಪನಾಸಿಯಾ ಬಯೋಟೆಕ್‌ ಸಹಭಾಗಿತ್ವದಲ್ಲಿ “ಸ್ಪುಟ್ನಿಕ್‌-ವಿ’ ಲಸಿಕೆಯ ಉತ್ಪಾದನೆ ಸೋಮವಾರ ಆರಂಭವಾಗಿದೆ. ಪ್ರತಿ ವರ್ಷ 10 ಕೋಟಿ ಡೋಸ್‌ಗಳನ್ನು ಹಿಮಾಚಲ ಪ್ರದೇಶದಲ್ಲಿ ರುವ ಪನೇಸಿಯಾ ಬಯೋಟೆಕ್‌ನ ಘಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ. ಈ ಬಗ್ಗೆ ಹೊಸದಿಲ್ಲಿಯಲ್ಲಿ ಸೋಮವಾರ 2 ಸಂಸ್ಥೆಗಳು ಘೋಷಣೆ ಮಾಡಿವೆ. ಅಲ್ಲಿ ಉತ್ಪಾದನೆ ಮಾಡಲಾಗುವ ಲಸಿಕೆಗಳನ್ನು ಗುಣಮಟ್ಟ ಪರೀಕ್ಷೆಗಾಗಿ ರಷ್ಯಾದ ಗಮಾಲೆಯಾ ಕೇಂದ್ರಕ್ಕೆ ರವಾನಿಸಲಾಗುತ್ತದೆ. ಕಳೆದ ತಿಂಗಳು ಈ ಬಗ್ಗೆ ಎರಡೂ ಸಂಸ್ಥೆಗಳೂ ಒಪ್ಪಂದ ಮಾಡಿಕೊಂಡಿದ್ದವು. ಇದಲ್ಲದೆ ಹೈದರಾಬಾದ್‌ನ ಡಾ|ರೆಡ್ಡೀಸ್‌ ಲ್ಯಾಬೊರೇಟರಿ ಮತ್ತು ರಾಯಚೂರಿನ ಶಿಲ್ಪಾ ಮೆಡಿ ಕೇರ್‌ “ಸ್ಪುಟ್ನಿಕ್‌-ವಿ’ ಉತ್ಪಾದಿಸುವ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿದ್ದವು.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.