ಒನ್ ನೇಷನ್ ಒನ್ ಟ್ಯಾಕ್ಸ್ : ಅಧಿವೇಶನದಲ್ಲಿ ಕಾನೂನು ತರಲಾಗುವುದು : ಲಕ್ಷ್ಮಣ ಸವದಿ
Team Udayavani, Jan 28, 2020, 6:59 PM IST
ಬೆಂಗಳೂರು:ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ಟ್ಯಾಕ್ಸ್ ತರಲು ನಿರ್ಧರಿಸಿರುವುದರಿಂದ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹೆಚ್ಚು ಬೆಲೆಯುಳ್ಳ ವಾಹನಗಳ ನೋಂದಣಿ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಿ ಇಲ್ಲಿಗೆ ತರುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಲ್ಲೂ ಒಂದೇ ರೀತಿಯ ತೆರಿಗೆ ಪದ್ಧತಿ ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಕ್ರಮಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ಕಾನೂನು ರೂಪಿಸಿ ವಿಧಾನಮಂಡಲದ ಒಪ್ಪಿಗೆ ಪಡೆಯಲಿದೆ ಎಂದು ಹೇಳಿದರು.
ಒನ್ ನೇಷನ್ ಒನ್ ಟ್ಯಾಕ್ಸ್ ಪದ್ಧತಿ ಜಾರಿಗೆ ಬಂದರೆ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಕೊರತೆ ಆಗಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಶೇ.16, 18, ಹಾಗೂ 20 ಮೂರು ಸ್ಲಾéಬ್ಗಳಲ್ಲಿ ತೆರಿಗೆ ಹಾಕುತ್ತಿದೆ. ಕೇಂದ್ರ ಸರ್ಕಾರವು ಶೇ.8, 12, 10 ರಷ್ಟು ತೆರಿಗೆ ಹಾಕುತ್ತಿದೆ. ಹೀಗಾಗಿ, ಕೊರತೆಯಾಗಬಹುದು. ಆದರೆ, ಅದಕ್ಕೆ ಪರಿಹಾರೋಪಾಯ ಕಂಡು ಹಿಡಿಯಲಾಗುವುದು ಎಂದು ತಿಳಿಸಿದರು.
ಕೆಎಸ್ಆರ್ಸಿ ಹಾಗೂ ಬಿಎಂಟಿಸಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಅವರು, 1.30 ಲಕ್ಷ ಚಾಲಕರು ಹಾಗೂ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮನ್ನೂ ಸಕಅìರಿ ನೌಕರರು ಅಂತ ಪರಿಗಣಿಸಲು ಬೇಡಿಕೆ ಇದೆ. ಈ ಬಗ್ಗೆ ಸಮಿತಿ ರಚಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ