ನಾಳೆ ನೂತನ ಸಚಿವರಾಗಿ 10 ಮಂದಿ ಪ್ರಮಾಣ ವಚನ


Team Udayavani, Feb 5, 2020, 10:31 PM IST

vidhana-soudha-750

ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿ ಸರಕಾರ ರಚನೆಗೆ ಕಾರಣರಾದ ಬಳಿಕ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದವರ ಪೈಕಿ ಮಹೇಶ್‌ ಕುಮಟಳ್ಳಿ ಹೊರತುಪಡಿಸಿ ಉಳಿದ 10 ಮಂದಿ ಗುರುವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಉಪಚುನಾವಣೆ ಫ‌ಲಿತಾಂಶ ಪ್ರಕಟವಾಗಿ ಎರಡು ತಿಂಗಳು ಕಳೆಯುವ ಹೊತ್ತಿಗೆ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ರಮೇಶ್‌ ಜಾರಕಿಹೊಳಿ, ಆನಂದ್‌ ಸಿಂಗ್‌, ಶ್ರೀಮಂತ ಪಾಟೀಲ್‌, ಶಿವರಾಮ ಹೆಬ್ಟಾರ್‌, ಬಿ.ಸಿ.ಪಾಟೀಲ್‌, ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜು, ಕೆ. ಗೋಪಾಲಯ್ಯ, ಡಾ| ಕೆ. ಸುಧಾಕರ್‌, ನಾರಾಯಣಗೌಡ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಗುರುವಾರ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಲಿದ್ದಾರೆ.

ಉಪಚುನಾವಣೆಯಲ್ಲಿ ಗೆದ್ದವರ ಪೈಕಿ 10 ಮತ್ತು ಮೂಲ ಬಿಜೆಪಿಯ ಮೂವರು ಸೇರಿದಂತೆ 13 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಬಿಎಸ್‌ವೈ ಚಿಂತಿಸಿದ್ದರು. ಆದರೆ ಸಿ.ಪಿ. ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವುದಕ್ಕೆ ಮೂಲ ಬಿಜೆಪಿಗರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ವರಿಷ್ಠರು, ಸದ್ಯಕ್ಕೆ ಉಪ ಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರೆ. ಹಾಗಾಗಿ ಎರಡನೇ ಸಂಪುಟ ವಿಸ್ತರಣೆಯಲ್ಲಿ ಮೂಲ ಬಿಜೆಪಿಗರಾರಿಗೂ ಸಚಿವ ಸ್ಥಾನ ಸಿಗದಂತಾಗಿದೆ.

ಈ ನಡುವೆ ಉಮೇಶ್‌ ಕತ್ತಿ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ತಮಗೂ ಮಂತ್ರಿಗಿರಿ ನೀಡುವಂತೆ ಮನವಿ ಮಾಡಿದರು. ಅನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಕತ್ತಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಖಚಿತ ಎಂದರಲ್ಲದೆ, ಕುಮಟಳ್ಳಿ ಅವರಿಗೆ ಸಚಿವರಲ್ಲದ ಬೇರೆ ಹೆಚ್ಚಿನ ಹೊಣೆ ನೀಡಲಾಗುವುದು ಎಂದರು.

ನೂತನ ಸಚಿವರಾಗಲಿರುವ 10 ಮಂದಿಗೂ ಮುಖ್ಯಮಂತ್ರಿ ಬಿಎಸ್‌ವೈ ಬುಧವಾರ ಖುದ್ದಾಗಿ ಕರೆ ಮಾಡಿ ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಆಹ್ವಾನ ನೀಡಿದ್ದಾರೆ. ಇದರಿಂದ ಸಂತಸಗೊಂಡ ಸಚಿವಾಕಾಂಕ್ಷಿಗಳು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಧನ್ಯವಾದ ಅರ್ಪಿಸಿದರು.

ಬುಧವಾರ ಸಿಎಂ ಬಿಎಸ್‌ವೈ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಬಳಿಕ ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್‌, ಸಿಎಂ ಖುದ್ದಾಗಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಸೂಚಿಸಿದ್ದಾರೆ. ನನ್ನ ಜೀವನದಲ್ಲಿ ಇದೊಂದು ಅವಿಸ್ಮರಣೀಯ ದಿನ. ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ. ನಾನು ಪೊಲೀಸ್‌ ಇಲಾಖೆಯಲ್ಲಿದ್ದ ಕಾರಣ ಗೃಹ ಖಾತೆ ಸಿಗಲಿದೆ ಎಂದು ಮಾತು ಕೇಳಿಬಂದಿದೆ. ಸಿಎಂ ನಿರ್ಧಾರಕ್ಕೆ ಬದ್ಧ ಎಂದರು.

ವರಿಷ್ಠರ ಸೂಚನೆಯಂತೆ ಖಾತೆ
ಉಪಚುನಾವಣೆಯಲ್ಲಿ ಗೆದ್ದವರ ಪೈಕಿ 10 ಮಂದಿ ಗುರುವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಖಾತೆ ಹಂಚಿಕೆಗಾಗಿ ಇನ್ನೂ ಕೆಲವು ದಿನ ಕಾಯಬೇಕಾಗುವ ಲಕ್ಷಣ ಕಾಣುತ್ತಿದೆ. ಬಹುತೇಕ ನೂತನ ಸಚಿವರು ಪ್ರಭಾವಿ ಖಾತೆಗಳಿಗೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ವರಿಷ್ಠರ ಸೂಚನೆಯಂತೆಯೇ ಖಾತೆ ಹಂಚಿಕೆ ಮಾಡಲು ಸಿಎಂ ನಿರ್ಧರಿಸಿದಂತಿದೆ. ದಿಲ್ಲಿ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಯಡಿಯೂರಪ್ಪ ದಿಲ್ಲಿಗೆ ತೆರಳಿ ಖಾತೆ ಹಂಚಿಕೆ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.