ಮತ್ತೆ ಆಪರೇಷನ್ ಕಮಲ ಸದ್ದು
ರಾಜೀನಾಮೆ ಸುಳಿವು ನೀಡಿದ ರಮೇಶ್ ಜಾರಕಿಹೊಳಿ
Team Udayavani, Apr 24, 2019, 6:09 AM IST
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಆಪರೇಷನ್ ಕಮಲದ ಸದ್ದು ರಿಂಗಣಿಸಿದ್ದು, ಕರ್ನಾಟಕದಲ್ಲಿ ಮತ್ತೂಂದು ಹೈಡ್ರಾಮಾ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.
ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್ನಲ್ಲಿ ಮತದಾನ ಮಾಡಿದ ಅನಂತರ, “ತಾಂತ್ರಿಕವಾಗಷ್ಟೇ ಕಾಂಗ್ರೆಸ್ನಲ್ಲಿದ್ದೇನೆ’ ಎಂದು ಹೇಳುವ ಮೂಲಕ ರಾಜೀನಾಮೆ ಸುಳಿವು ನೀಡಿರುವುದು ಆಪರೇಷನ್ ಶುರುವಾಗಿದೆ ಎಂಬುದಕ್ಕೆ ಪುಷ್ಟಿ ನೀಡಿದೆ. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೂ ರಮೇಶ್ ಜತೆ ನಾಗೇಂದ್ರ, ಮಹೇಶ್ ಕುಮಠಳ್ಳಿ ಸೇರಿ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದಿರುವುದೂ ಸರಕಾರದ ಆತಂಕಕ್ಕೆ ಕಾರಣವಾಗಿದೆ.
ಆದರೆ ಈ ಆಪರೇಷನ್ ಈಗಲೇ ನಡೆಯುತ್ತದೆಯೋ ಅಥವಾ ಮೇ 23ರ ಫಲಿತಾಂಶದ ಬಳಿಕ ನಡೆಯಲಿದೆಯೋ ಎಂಬ ಬಗ್ಗೆ ಗೊಂದಲಗಳಿವೆ. ಜತೆಗೆ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಇರುವುದರಿಂದ ಇವೆಲ್ಲ ಮುಗಿದ ಬಳಿಕ ಬಿಜೆಪಿ ಮತ್ತೂಂದು ಸುತ್ತಿನ ಆಪರೇಷನ್ ನಡೆಸಬಹುದು ಎಂದು ಬಿಜೆಪಿ ಆಂತರಿಕ ಮೂಲಗಳು ಹೇಳಿವೆ.
ಮತ್ತೂಂದೆಡೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಹೋದರ ಸತೀಶ್ ಜಾರಕಿಹೊಳಿ ಅವರು, ರಮೇಶ್ ಪಕ್ಷ ಬಿಟ್ಟುಹೋಗಲಿ ಪರವಾಗಿಲ್ಲ.
ಗೊಂದಲದಲ್ಲಿ ಸರಕಾರ ನಡೆಸುವುದು ಬೇಡ ಎಂಬ ಚಿಂತನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಪರಮೇಶ್ವರ್ ಮತ್ತು ಡಿ.ಕೆ.ಶಿ. ಅವರು ರಮೇಶ್ ಮನವೊಲಿಸುವ ಪ್ರಯತ್ನಯಲ್ಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕರಿಗೆ ಗಾಳ?
ಬಿಜೆಪಿ ಒಂದು ವೇಳೆ ಸರಕಾರ ಅಸ್ಥಿರಗೊಳಿಸಲು ಮುಂದಾದರೆ ಬಿಜೆಪಿಯ ಐವರು ಶಾಸಕರನ್ನು ತಮ್ಮತ್ತ ಸೆಳೆಯಲು ಸಿಎಂ ಕುಮಾರಸ್ವಾಮಿ ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದ ಐವರು ಶಾಸಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕಾಗಿಯೇ ಉಡುಪಿಯಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ದಿಢೀರನೇ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಈ ಬಗ್ಗೆ ದೇವೇಗೌಡ ಬಳಿಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ