ಕೈಗಾರಿಕೆ ಜಮೀನು ಮಾರಲು ಅವಕಾಶ
ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಚಿಂತನೆ
Team Udayavani, Jan 28, 2020, 6:50 AM IST
ಬೆಂಗಳೂರು: ಕೈಗಾರಿಕೋದ್ಯಮಿಗಳು ರೈತರಿಂದ ಖರೀದಿಸಿದ ಕೃಷಿ ಭೂಮಿಯಲ್ಲಿ ಏಳು ವರ್ಷಗಳಲ್ಲಿ ಉದ್ದೇಶಿತ ಕೈಗಾರಿಕೆ ಆರಂಭಿಸಲು ಇಲ್ಲವೇ ಆರಂಭಿಸಿದರೂ ಮುನ್ನಡೆಸಲು ಸಾಧ್ಯವಾಗದಿದ್ದರೆ ಆ ಭೂಮಿಯನ್ನು ಅದೇ ಉದ್ದೇಶಕ್ಕೆ ಇನ್ನು ಮುಂದೆ ಮತ್ತೂಬ್ಬರಿಗೆ ಮಾರಾಟ ಮಾಡಬಹುದು.
ಈ ಸಂಬಂಧ ಕರ್ನಾಟಕ ಕೈಗಾರಿಕಾ ಅಧಿನಿಯಮ 2002ರ ಕಲಂ 109ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಸರಕಾರ ಚಿಂತಿಸಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಏಳೆಂಟು ಮಸೂದೆಗಳ ಮಂಡನೆಗೆ ಸಿದ್ಧತೆ ನಡೆದಿದೆ. ಅದರಲ್ಲಿ ಉದ್ಯಮಿಗಳು ರೈತರಿಂದ ಖರೀದಿಸಿದ ಭೂಮಿಯನ್ನು 7 ವರ್ಷಗಳಲ್ಲಿ ಬಳಸ ಲಾಗದಿದ್ದರೆ ಮತ್ತೂಬ್ಬರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಮಸೂದೆ ಮಂಡನೆಗೆ ಚಿಂತಿಸಲಾಗಿದೆ ಎಂದು ಹೇಳಿದರು.
ಕೈಗಾರಿಕೋದ್ಯಮಿಗಳು ಕೈಗಾರಿಕಾ ಸ್ಥಾಪನೆಗೆ ಕೃಷಿ ಭೂಮಿಯನ್ನು ನೇರವಾಗಿ ಖರೀದಿಸಿದಾಗ ಭೂಪರಿವರ್ತನೆ ಸಹಿತ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತಿದೆ.
ಜಿಲ್ಲಾಧಿಕಾರಿಗಳ ಹಂತದಲ್ಲಿ 100 ಎಕರೆ, ಇಲಾಖೆ ಕಾರ್ಯದರ್ಶಿಗಳ ಹಂತದಲ್ಲಿ 200 ಎಕರೆ ಭೂಮಿ ಖರೀದಿಗೆ ಮಿತಿ ನಿಗದಿಪಡಿಸಿದ್ದು, ಅದಕ್ಕಿಂತ ಹೆಚ್ಚು ಭೂಮಿ ಖರೀದಿಗೆ ಸರಕಾರದ ಮಟ್ಟದಲ್ಲಿ ಒಪ್ಪಿಗೆ ಪಡೆಯುವ ವ್ಯವಸ್ಥೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ