ವಿರೋಧ ಪಕ್ಷದ ನಾಯಕರು ‘ಶೂನ್ಯ ರೂಪಿಗಳು’ : ಅಜಯ್ ಮಿಶ್ರಾ ಟೆನಿ
Team Udayavani, Aug 1, 2021, 12:38 PM IST
ನವ ದೆಹಲಿ : ಶೂನ್ಯ ರೂಪಿಗಳಾದ ವಿರೋಧ ಪಕ್ಷದ ನಾಯಕರನ್ನು, ಸಮಗ್ರವಾಗಿ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವ ಆಯಾಮದಲ್ಲಿಯೂ ಹೋಲಿಸುವುದಕ್ಕೆ ಸಾಧ್ಯವಿಲ್ಲವೆಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಅಜಯ್ ಮಿಶ್ರಾ ಟೆನಿ ಹೇಳಿದ್ದಾರೆ.
ಬರುವ ಲೋಕ ಸಭಾ ಚುನಾವಣೆಯನ್ನು ಎಲ್ಲಾ ಪ್ರತಿಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಎದುರಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಯತ್ನವನ್ನು ಸಚಿವರು ಹೀಗೆ ಜರಿದಿದ್ದಾರೆ.
ಇದನ್ನೂ ಓದಿ : ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು
ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಟೆನಿ, ಮಮತಾ ಬ್ಯಾನರ್ಜಿ ಹತಾಶರಾಗಿದ್ದಾರೆ. ಈಗ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಇದ್ದಾರೆ. ಇದೇ ಪ್ರಯತ್ನವನ್ನು ಕಳೆದ ಲೋಕ ಸಭಾ ಚುನಾವಣೆಯ ಸಂದರ್ಭದಲ್ಲಿಯೂ ಮಾಡಿದ್ದರು. ವಿಫಲವಾಗಿರುವುದು ನಿಮಗೆ ತಿಳಿದೇ ಇದೆ. ಈ ಬಾರಿಯೂ ಬ್ಯಾನರ್ಜಿಯವರದ್ದು ವಿಫಲ ಯತ್ನವಾಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸದೃಢವಾಗುತ್ತಿರುವುದರಿಂದ ಮಮತಾ ಬ್ಯಾನರ್ಜಿ ಭಯದಲ್ಲಿದ್ದಾರೆ. ಮುಂದಿನ ವಿಧಾನ ಸಭಾ ಮಮತಾ ಬ್ಯಾನರ್ಜಿಯವರಿಗೆ ಟಿಎಂಸಿಯಿಂದ ಬಿಜೆಪಿಯನ್ನು ರದುರಿಸುವ ಭಯವಿದೆ. ಅದೇ ಭಯದಿಂದಲೇ ಅವರು ದೆಹಲಿಗೆ ಬಂದಿದ್ದಾರೆ. ಮೈತ್ರಿಗೆ ಪರದಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನ ಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಪಾಲಾಗಿಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ