ಆಸ್ತಿ ನೋಂದಣಿಗೆ ಒಟಿಪಿ

ಆಸ್ತಿ ಪರಭಾರೆಯಲ್ಲಿ ಆಗುವ ಅಕ್ರಮ ತಡೆಗೆ ಪ್ರಯತ್ನ

Team Udayavani, Oct 24, 2019, 6:30 AM IST

q-37

ಬೆಂಗಳೂರು: ಓರ್ವರ ಆಸ್ತಿಯನ್ನು ಅವರಿಗೆ ಗೊತ್ತಿಲ್ಲದಂತೆ ಅಕ್ರಮವಾಗಿ ಮತ್ತೋರ್ವರಿಗೆ ಮಾರಾಟ ಮಾಡಿ ವಂಚಿಸುವುದಕ್ಕೆ ಕಡಿವಾಣ ಹಾಕಲು “ಒನ್‌ ಟೈಮ್‌ ಪಾಸ್‌ವರ್ಡ್‌ (ಒಟಿಪಿ)’ ಮೂಲಕ ಆಸ್ತಿ ಮಾರಾಟಗಾರರು ಹಾಗೂ ಖರೀದಿದಾರರಿಂದ ಖಾತರಿ ಪಡಿಸಿಕೊಳ್ಳುವ ವ್ಯವಸ್ಥೆ ಜಾರಿಗೆ ಮುದ್ರಾಂಕ ಮತ್ತು ನೋಂದಣಿ ಇಲಾಖೆ ಸಿದ್ಧತೆ ನಡೆಸಿದೆ.

ನಕಲಿ ದಾಖಲೆಗಳನ್ನು ಸಲ್ಲಿಸಿ ಆಸ್ತಿಗಳನ್ನು ಮಾರಾಟ ಮಾಡುವುದಕ್ಕೆ “ಬ್ರೇಕ್‌’ ಹಾಕಲು ಆಸ್ತಿಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ವೆಬ್‌ಸೈಟ್‌ನಲ್ಲಿ
ಅಪ್‌ಲೋಡ್‌ ಮಾಡಿದ ಬಳಿಕವಷ್ಟೇ ಆಸ್ತಿ ನೋಂದಣಿ ಯಾಗುವ ವ್ಯವಸ್ಥೆಯನ್ನು ಕಡ್ಡಾಯಗೊಳಿ ಸಲು ಸಜ್ಜಾಗಿದ್ದು , ಆ ಮೂಲಕ ದಾಖಲೆಗಳ ದೃಢೀಕರಣಕ್ಕೆ ಒತ್ತು ನೀಡಲು ಮುಂದಾಗಿದೆ.

ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ನಗರ, ಪಟ್ಟಣ ಪ್ರದೇಶಗಳತ್ತ ಜನ ವಲಸೆ ಹೋಗುವುದು ನಡೆಯುತ್ತಲೇ ಇದೆ. ಅದರಂತೆ ನಗರ, ಪಟ್ಟಣಗಳ ಜನಸಂಖ್ಯೆ ಹಾಗೂ ಗಾತ್ರವೂ ಹಿಗ್ಗುತ್ತಿದೆ. ಆ ಹಿನ್ನೆಲೆಯಲ್ಲಿ ಆಸ್ತಿ ನೋಂದಣಿ ಭರಾಟೆಯೂ ಜೋರಾಗಿದ್ದು, ಸರಕಾರಕ್ಕೂ ಉತ್ತಮ ಆದಾಯ ಸಂಗ್ರಹವಾಗುತ್ತಿದೆ. ರಾಜ್ಯಾದ್ಯಂತ ನಿತ್ಯ 10,000ಕ್ಕೂ ಹೆಚ್ಚು ಆಸ್ತಿ ನೋಂದಣಿಯಾಗುತ್ತಿದೆ. ಜತೆಗೆ ನಾನಾ ರೀತಿಯ ಅಕ್ರಮಗಳು ನಡೆಯುತ್ತಿದ್ದು, ಇದಕ್ಕೆ ಕಡಿ ವಾಣ ಹಾಕಲು ಇಲಾಖೆ ಒಂದಿಷ್ಟು ಸುಧಾರಿತ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಒಟಿಪಿ ಖಾತರಿ
ಅಕ್ರಮವಾಗಿ ಆಸ್ತಿ ಮಾರಾಟಕ್ಕೆ ಕಡಿವಾಣ ಹಾಕಲು ಒನ್‌ ಟೈಮ್‌ ಪಾಸ್‌ವರ್ಡ್‌ (ಒಟಿಪಿ) ಖಾತರಿ ವ್ಯವಸ್ಥೆ ತರಲು ಚಿಂತಿಸಿದೆ. ಈ ವ್ಯವಸ್ಥೆಯಲ್ಲಿ ಮಾರಾಟಗಾರರು ಹಾಗೂ ಖರೀದಿದಾರರಿಗೆ ಆಸ್ತಿ ನೋಂದಣಿ ಪ್ರಕ್ರಿಯೆ ಸಂದರ್ಭದಲ್ಲಿ “ಒಟಿಪಿ’ ಸಂದೇಶ ರವಾನೆಯಾಗುತ್ತದೆ. ಆ ಒಟಿಪಿ ಸಂಖ್ಯೆಯನ್ನು ಉಪ ನೋಂದಣಾಧಿಕಾರಿಗಳ ಮೂಲಕ ನಮೂದಿಸಿದರಷ್ಟೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಿಂದ ಅನಧಿಕೃತ ವ್ಯಕ್ತಿಗಳು ಅಕ್ರಮವಾಗಿ ಯಾರಧ್ದೋ ಆಸ್ತಿ ಮಾರಾಟ ಮಾಡುವು ದನ್ನು ತಪ್ಪಿಸಬಹುದು ಎಂಬುದು ಇಲಾಖೆಯ ವಿಶ್ವಾಸ.

ಶಿವಮೊಗ್ಗದಲ್ಲಿ ಪ್ರಾಯೋಗಿಕ ಜಾರಿ
ಆಸ್ತಿ ಮಾರಾಟಗಾರರು, ಖರೀದಿದಾರರಿಂದ ಒಟಿಪಿ ಖಾತ‌ರಿ ಹಾಗೂ ಆಸ್ತಿ ದಾಖಲೆಗಳ ಸ್ಕ್ಯಾನಿಂಗ್‌ ವ್ಯವಸ್ಥೆ ಶಿವಮೊಗ್ಗದಲ್ಲಿ ಪ್ರಾಯೋಗಿಕವಾಗಿ ಮೂರು ದಿನಗಳಿಂದ ಜಾರಿಯಾಗಿದೆ. ಈ ವ್ಯವಸ್ಥೆಯ ಸಾಧಕ- ಬಾಧಕ ಪರಿಶೀಲಿಸಿ ಪರಿಣಾಮಕಾರಿ ಎಂದು ಕಂಡುಬಂದರೆ ರಾಜ್ಯಾದ್ಯಂತ ವಿಸ್ತರಿಸಲು ಇಲಾಖೆ ಚಿಂತಿಸಿದೆ.

ದಾಖಲೆಗಳ ಸ್ಕ್ಯಾನಿಂಗ್‌
ಸದ್ಯ ಆಸ್ತಿ ನೋಂದಣಿ ಸಂದರ್ಭದಲ್ಲಿ ಆಸ್ತಿಗೆ ಸಂಬಂಧ ಪಟ್ಟ ದಾಖಲೆಗಳನ್ನು ಉಪ ನೋಂದಣಾಧಿಕಾರಿ ಹಂತದಲ್ಲಿ ಪರಿಶೀಲನೆ ನಡೆಸಿ ಬಳಿಕ ನೋಂದಣಿ ಮಾಡುವ ವ್ಯವಸ್ಥೆ ಇದೆ. ಆದರೆ ನಕಲಿ ದಾಖಲೆಗಳನ್ನು ಸಲ್ಲಿಸಿ ಅಕ್ರಮವಾಗಿ ಆಸ್ತಿ ಪರಭಾರೆ ಮಾಡಿರುವ ಪ್ರಕರಣಗಳು ಸಾಕಷ್ಟಿವೆ. ಈ ಹಿನ್ನೆಲೆಯಲ್ಲಿ ನೋಂದಣಿ ಸಂದರ್ಭದಲ್ಲಿ ಆಸ್ತಿಗೆ ಸಂಬಂಧಪಟ್ಟಂತೆ ಹಕ್ಕುಪತ್ರ, ಆಸ್ತಿ ತೆರಿಗೆ ಪಾವತಿ ರಸೀದಿ ಸಹಿತ ದಾಖಲೆಗಳನ್ನು ಉಪ ನೋಂದ ಣಾಧಿಕಾರಿ ಹಂತದಲ್ಲೇ ಪರಿಶೀಲಿಸಿ ಅವುಗಳ ಸಾಚಾತನ ಖಾತರಿಪಡಿಸಿಕೊಂಡು ಸ್ಕ್ಯಾನಿಂಗ್‌ ಮಾಡಿ ಅಪ್‌ಲೋಡ್‌ ಮಾಡಲಾಗುತ್ತದೆ. ಅನಂತರ ವಷ್ಟೇ ಆಸ್ತಿ ನೋಂದಣಿಯಾಗಲಿದ್ದು, ದಾಖಲೆ ಗಳಿಗೆ ಸಂಬಂಧಪಟ್ಟಂತೆ ಅಕ್ರಮಗಳಿಗೆ ಅವಕಾಶ ವಿಲ್ಲದಂತಾಗ ಲಿದೆ ಎಂಬುದು ಇಲಾಖೆ ನಿರೀಕ್ಷೆ.

ಆಸ್ತಿ ಮಾರಾಟ, ನೋಂದಣಿ ಪ್ರಕ್ರಿಯೆಯಲ್ಲಿನ ಅಕ್ರಮ ತಡೆಗೆ ಒಟಿಪಿ ಖಾತರಿ ಹಾಗೂ ದಾಖಲೆಗಳನ್ನು ಸ್ಕ್ಯಾನಿಂಗ್‌ ಮಾಡಿ ದಾಖಲಿಸುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ.
– ಡಾ| ಕೆ.ವಿ. ತ್ರಿಲೋಕ್‌ಚಂದ್ರ, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಮಹಾನಿರೀಕ್ಷಕ

- ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.