ಬಾಂಗ್ಲಾದೇಶ: ಹೋಳಿ ಸಂಭ್ರಮದ ನಡುವೆ ರಾಧಾಕಾಂತ ದೇವಸ್ಥಾನ ಧ್ವಂಸ, ಲೂಟಿ
ಹಾಜಿ ಶಫಿವುಲ್ಲಾ ಸುಮಾರು 200 ಜನರ ಗುಂಪಿನ ನೇತೃತ್ವ ವಹಿಸಿರುವುದಾಗಿ ವರದಿ ಹೇಳಿದೆ
Team Udayavani, Mar 18, 2022, 12:55 PM IST
ಢಾಕಾ: ದೇಶಾದ್ಯಂತ ಬಾಲಿವುಡ್ ನ ದ ಕಾಶ್ಮೀರ್ ಫೈಲ್ಸ್ ಸಿನಿಮಾ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದ್ದು, ಮತ್ತೊಂದೆಡೆ ಬಾಂಗ್ಲಾದೇಶದ ಢಾಕಾದಲ್ಲಿರುವ ಇಸ್ಕಾನ್ ನ ರಾಧಾಕಾಂತ ದೇವಾಲಯವನ್ನು ಸುಮಾರು 200 ಜನರ ಗುಂಪೊಂದು ಧ್ವಂಸಗೊಳಿಸಿ, ಲೂಟಿಗೈದಿರುವ ಘಟನೆ ಗುರುವಾರ (ಮಾರ್ಚ್ 17) ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕ್ರೀಡಾಂಗಣದಲ್ಲಿ ಸಿಕ್ಕ ಬ್ರಾಸ್ ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ
ಢಾಕಾದ ವಾರಿಯ ಲಾಲ್ ಮೋಹನ್ ಸಾಹಾ ಬೀದಿಯಲ್ಲಿರುವ ಇಸ್ಕಾನ್ ನ ರಾಧಾಕಾಂತ ದೇವಸ್ಥಾನವನ್ನು ಧ್ವಂಸಗೊಳಿಸಿದ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿ ವಿವರಿಸಿದೆ.
ಹಾಜಿ ಶಫಿವುಲ್ಲಾ ಸುಮಾರು 200 ಜನರ ಗುಂಪಿನ ನೇತೃತ್ವ ವಹಿಸಿರುವುದಾಗಿ ವರದಿ ಹೇಳಿದೆ. ಭಾರತದ ಇಸ್ಕಾನ್ ನ ಉಪಾಧ್ಯಕ್ಷ ರಾಧಾರಮಣ್ ದಾಸ್, ಈ ಘಟನೆಯನ್ನು ಖಂಡಿಸಿದ್ದಾರೆ. ಹೋಳಿ ಮತ್ತು ದೋಲ್ ಯಾತ್ರೆ ನಡೆಯುವ ಸಂದರ್ಭದಲ್ಲಿಯೇ ದೇವಾಲಯ ಧ್ವಂಸಗೊಳಿಸಿರುವ ಘಟನೆ ನಡೆದಿರುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಬಾಂಗ್ಲಾದೇಶದ ನಾನೌರ್ ದಿಘೀ ಲೇಕ್ ಸಮೀಪದ ಕೊಮಿಲ್ಲಾ ನಗರದಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಕುರಾನ್ ಅನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪರಿಣಾಮ ನಡೆದ ಹಿಂಸಾಚಾರದಲ್ಲಿ ಮೂವರು ಮಂದಿ ಸಾವಿಗೀಡಾಗಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ