ಮುಂಬೈನ ಅರ್ಧದಷ್ಟು ಮಕ್ಕಳಲ್ಲಿ ಪ್ರತಿಕಾಯ ಸೃಷ್ಟಿ : ಸೀರೋ ಸರ್ವೇಯಿಂದ ಈ ಮಾಹಿತಿ ಬಹಿರಂಗ
Team Udayavani, Jun 28, 2021, 9:35 PM IST
ನವ ದೆಹಲಿ: ಮುಂಬೈನ ಶೇ.50ರಷ್ಟು ಮಕ್ಕಳ ದೇಹದಲ್ಲಿ ಈಗಾಗಲೇ ಕೊರೊನಾ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಸೃಷ್ಟಿಯಾಗಿವೆ ಎಂಬ ಮಾಹಿತಿಯು ಸೀರೋ ಸರ್ವೇಯಿಂದ ಹೊರಬಿದ್ದಿದೆ.
ಮೂರನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆಯು (ಬಿಎಂಸಿ) ಮುಂಬೈನಾದ್ಯಂತ 1ರಿಂದ 18 ವರ್ಷದೊಳಗಿನವರ ಸೀರೋ ಸರ್ವೇ ನಡೆಸಿದ್ದು, ಅರ್ಧದಷ್ಟು ಮಂದಿಯಲ್ಲಿ ಪ್ರತಿಕಾಯ ಸೃಷ್ಟಿಯಾಗಿರುವ ವಿಚಾರ ತಿಳಿದು ಬಂದಿದೆ.
ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, 2,176 ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಬಿವೈಎಲ್ ನಾಯರ್ ಆಸ್ಪತ್ರೆ ಮತ್ತು ಕಸ್ತೂರ್ಬಾ ಮಾಲಿಕ್ಯೂಲರ್ ಡಯಾಗ್ನಾಸ್ಟಿಕ್ ಲ್ಯಾಬೊರೇಟರಿ ಈ ಸಮೀಕ್ಷೆ ನಡೆಸಿದೆ. ಅದರಂತೆ, ಶೇ.50ಕ್ಕೂ ಹೆಚ್ಚು ಮಕ್ಕಳಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದ್ದು, ಅವರ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿರುವುದು ಗೊತ್ತಾಗಿದೆ.
ಸಮಿತಿಗೆ ಮಾಹಿತಿ:
ಮೇ ತಿಂಗಳಲ್ಲಿ ಒಟ್ಟಾರೆ ಸೋಂಕಿತರ ಪೈಕಿ ಶೇ.10.31ರಷ್ಟು ಮಂದಿಯಲ್ಲಿ ಕೊರೊನಾ ಸೋಂಕಿನ ಕಳವಳಕಾರಿ ರೂಪಾಂತರಿ ಪ್ರಕರಣಗಳು ಕಂಡುಬಂದಿದ್ದವು. ಜೂನ್ 20ರ ವೇಳೆಗೆ ಈ ಪ್ರಮಾಣ ಶೇ.51ಕ್ಕೇರಿತ್ತು ಎಂದು ಸಂಸದೀಯ ಸಮಿತಿಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೀಟಾ ಬಲಿಷ್ಠ:
ಈ ನಡುವೆ, ಕೊರೊನಾದ ಬೀಟಾ ರೂಪಾಂತರಿಯ ವಿರುದ್ಧ ಈಗಿರುವ ಲಸಿಕೆಗಳು ಪರಿಣಾಮಕಾರಿಯಾಗಿಲ್ಲ ಎಂದು ಬೋಸ್ಟನ್ನ ಮಕ್ಕಳ ಆಸ್ಪತ್ರೆಯ ಸಂಶೋಧಕರು ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ವೈರಾಣುವಿನ ಸ್ಪೈಕ್ ಪ್ರೊಟೀನ್ನ ಅಧ್ಯಯನ ನಡೆಸಿದಾಗ, ಬೀಟಾ ವಿರುದ್ಧ ಲಸಿಕೆ ಕಡಿಮೆ ಪರಿಣಾಮ ಬೀರಿದ್ದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :ವಿಧಾನ ಸಭಾ ಚುನಾವಣೆಯೇ ನಮ್ಮ ಮುಖ್ಯ ಗುರಿ : ಮಾಯಾವತಿ
ಸಮಸ್ಯೆ ಇತ್ಯರ್ಥಕ್ಕೆ ಮನವಿ:
ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಐರೋಪ್ಯ ಒಕ್ಕೂಟಕ್ಕೆ ಪ್ರವೇಶ ನಿರಾಕರಿಸಿರುವ ಸುದ್ದಿಗೆ ಸಂಬಂಧಿಸಿ ಸೀರಂ ಇನ್ ಸ್ಟಿಟ್ಯೂಟ್ ಸಿಇಒ ಅಡಾರ್ ಪೂನಾವಾಲ ಪ್ರತಿಕ್ರಿಯಿಸಿದ್ದಾರೆ. ಐರೋಪ್ಯ ಒಕ್ಕೂಟಕ್ಕೆ ಪ್ರಯಾಣಿಸುವ ಭಾರತೀಯರಿಗೆ ಸಮಸ್ಯೆ ಎದುರಾಗಿರುವ ವಿಚಾರ ಗಮನಕ್ಕೆ ಬಂದಿದ್ದು, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದಿದ್ದಾರೆ.
40,845 ಬ್ಲ್ಯಾಕ್ ಫಂಗಸ್ ಪ್ರಕರಣ
ದೇಶದಲ್ಲಿ ಈವರೆಗೆ 40,845 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಜತೆಗೆ, ಈ ಫಂಗಸ್ ನಿಂದ ಮೃತಪಟ್ಟವರ ಸಂಖ್ಯೆ 3,129ಕ್ಕೇರಿದೆ ಎಂದಿದ್ದಾರೆ. ಇದೇ ವೇಳೆ, ಡೆಲ್ಟಾ ಪ್ಲಸ್ ರೂಪಾಂತರಿಯು ಲಸಿಕೆಯ ಪರಿಣಾಮಕಾರಿತ್ವದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಅಥವಾ ಈ ರೂಪಾಂತರಿ ವಿರುದ್ಧ ಲಸಿಕೆ ಕೆಲಸ ಮಾಡಲ್ಲ ಎಂಬುದು ಇನ್ನೂ ಸಾಬೀತಾಗಿಲ್ಲ ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷ ವಿ.ಕೆ. ಪೌಲ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ