ಆದಾಯ ಸಂಗ್ರಹಕ್ಕೆ ಸ್ವಂತ ತೆರಿಗೆಯೊಂದೇ ಮಾರ್ಗ

ಜಿಎಸ್‌ಟಿ ಪರಿಹಾರ ಸ್ಥಗಿತ ಆತಂಕ ; 15 ಸಾವಿರ ಕೋ.ರೂ. ಹೆಚ್ಚುವರಿ ಅನುದಾನಕ್ಕೆ ಬೇಡಿಕೆ

Team Udayavani, Feb 27, 2022, 7:25 AM IST

ಆದಾಯ ಸಂಗ್ರಹಕ್ಕೆ ಸ್ವಂತ ತೆರಿಗೆಯೊಂದೇ ಮಾರ್ಗ

ಬೆಂಗಳೂರು: ಕೇಂದ್ರದ ತೆರಿಗೆ ಹಂಚಿಕೆ ಹಾಗೂ ಸಹಾಯಾನುಧಾನ ಕಡಿಮೆಯಾಗುತ್ತಿರುವುದು, ಜಿಎಸ್‌ಟಿ ಪರಿಹಾರ ಸ್ಥಗಿತದ ಆತಂಕ ಹಿನ್ನೆಲೆಯಲ್ಲಿ ಮುಂದಿನ ವರ್ಷ ರಾಜ್ಯದ ತೆರಿಗೆ ಹಾಗೂ ತೆರಿಗೆಯೇತರ ಬಾಬ್ತುಗಳಿಂದಲೇ ಹೆಚ್ಚು ವರಮಾನ ಸಂಗ್ರಹಿಸುವ ಸವಾಲು ಎದುರಾಗಿದೆ.

ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನ ಇಲಾಖೆ ಗಳಿಗೆ 2022-23ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಸಂಪನ್ಮೂಲ ಕ್ರೋಡೀ ಕರಿಸುವ ಟಾರ್ಗೆಟ್‌ ನೀಡಲು ಸರಕಾರ ನಿರ್ಧರಿಸಿದೆ.

ತೆರಿಗೆ ಹಾಗೂ ತೆರಿಗೆಯೇತರ ಆದಾಯದ ಮೂಲಕ ಪ್ರಸಕ್ತ ಆರ್ಥಿಕ ವರ್ಷಕ್ಕಿಂತ 7 ಸಾವಿರ ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಗುರಿ ನೀಡಲು ತೀರ್ಮಾನಿಸಲಾಗಿದ್ದು, ಆ ಪೈಕಿ ಅಬಕಾರಿ ಇಲಾಖೆಗೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಗುರಿ ನಿಗದಿ ಯಾಗಲಿದೆ ಎನ್ನಲಾಗಿದೆ.

2021-22ನೇ ಸಾಲಿನಲ್ಲಿ ತೆರಿಗೆ ಸಂಗ್ರಹ ಪ್ರಮಾಣ ಜನವರಿ ಅಂತ್ಯಕ್ಕೆ ಒಟ್ಟಾರೆ ಶೇ.86ರಷ್ಟು ಸಾಧನೆಯಾ ಗಿದ್ದು, ಮಾರ್ಚ್‌ ಅಂತ್ಯಕ್ಕೆ ಅಬಕಾರಿ ವಲಯದಿಂದ ಶೇ.100ರಷ್ಟು ಹಾಗೂ ಇತರ ವಲಯದಲ್ಲಿ ಶೇ.95ರ ವರೆಗೂ ಸಂಗ್ರಹದ ನಿರೀಕ್ಷೆಯಿದ್ದು, ಬಹುತೇಕ ನಿಗದಿತ ಗುರಿ ತಲುಪುವ ನಿರೀಕ್ಷೆಯಿದೆ.

ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ವರಮಾನ ಸಂಗ್ರಹಕ್ಕೆ ಟಾರ್ಗೆಟ್‌ ನೀಡಲೇಬೇಕಾದ ಅನಿವಾ ರ್ಯತೆ ಇದೆ. ಇಲ್ಲದಿದ್ದರೆ ಸಬ್ಸಿಡಿ, ಸಾಲದ ಕಂತು, ಬಡ್ಡಿ ಪಾವತಿ, ಹಾಲಿ ಯೋಜನೆಗಳ ಮುಂದುವರಿಕೆಗೆ ಹಣಕಾಸು ಹೊಂದಾಣಿಕೆ ಮಾಡು ವುದು ಕಷ್ಟವಾಗಲಿದೆ ಎಂದು ವಿತ್ತ ಇಲಾಖೆ ಮೂಲಗಳು ತಿಳಿಸುತ್ತವೆ.

ಹೆಚ್ಚಿನ ಅನುದಾನಕ್ಕೆ ಬೇಡಿಕೆ
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಇಲಾಖೆಗಳ ಅನುದಾನದಲ್ಲಿ ಶೇ.25ರಿಂದ 50ರ ವರೆಗೂ ಕಡಿತ ಮಾಡಲಾಗಿತ್ತು. ಈ ಬಾರಿ ಪ್ರತಿ ಇಲಾಖೆಗಳಿಂದ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಡಲಾಗಿದೆ.
ಪ್ರಮುಖವಾಗಿ ಜಲಸಂಪನ್ಮೂಲ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಕೃಷಿ ಮತ್ತು ತೋಟಗಾರಿಕೆ, ಕಂದಾಯ ಇಲಾಖೆಗಳಿಂದ 10 ರಿಂದ 15 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಬೇಡಿಕೆಯಿದೆ ಎನ್ನಲಾಗಿದೆ.

ಮುಂದಿನ ವರ್ಷ ಚುನಾವಣೆ ಇರುವುದರಿಂದ ಕ್ಷೇತ್ರಗಳಲ್ಲಿ ಬಾಕಿ ಇರುವ ಯೋಜನೆ ಗಳನ್ನು ಪೂರ್ಣಗೊಳಿಸಲು ಶಾಸಕರೂ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದು ಮುಖ್ಯಮಂತ್ರಿಗೆ ತಲೆನೋವಾ ಗಿದೆ. 2021-22ನೇ ಸಾಲಿನ ಬಜೆಟ್‌ನಲ್ಲಿ ಸ್ವಂತ ತೆರಿಗೆ ಹಾಗೂ ತೆರಿಗೆಯೇತರ ವಲಯದಿಂದ 1,16,764 ಕೋಟಿ ರೂ. ವರಮಾನ ನಿರೀಕ್ಷಿಸಲಾಗಿತ್ತು. ಜನವರಿ ಅಂತ್ಯಕ್ಕೆ 1,00,417.04 ಕೋಟಿ ರೂ. ಸಂಗ್ರಹವಾಗಿದೆ. ಈ ಪೈಕಿ ಅಬಕಾರಿ ವಲಯದಿಂದ 24,580 ಕೋಟಿ ರೂ. ಗುರಿ ಪೈಕಿ 22 ಸಾವಿರ ಕೋಟಿ ರೂ.ವರೆಗೂ ಸಂಗ್ರಹವಾಗಿದ್ದು ಶೇ.100ರಷ್ಟು ಗುರಿ ಸಾಧನೆ ನಿರೀಕ್ಷೆಯಿದೆ. ಹೀಗಾಗಿ, ಈ ಬಾರಿ 27,500 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿಗೂ ಸವಾಲು
2021-22ನೇ ಸಾಲಿನಲ್ಲಿ ಕೇಂದ್ರದ ತೆರಿಗೆ ಹಂಚಿಕೆ ಹಾಗೂ ಕೇಂದ್ರದ ಸಹಾಯಾನುಧಾನ ಕ್ರಮವಾಗಿ ಡಿಸೆಂಬರ್‌ ಅಂತ್ಯಕ್ಕೆ ಶೇ.67.68 ಹಾಗೂ 69.88ರಷ್ಟು ಮಾತ್ರ ಲಭಿಸಿದ್ದು, ಜಿಎಸ್‌ಟಿ ಪರಿಹಾರದಲ್ಲೂ ಕಡಿತವಾಗಿದೆ. ಇದರ ನಡುವೆ, 2017ರಿಂದ ಆರಂಭವಾಗಿರುವ ಜಿಎಸ್‌ಟಿ ಪರಿಹಾರ 2022ಕ್ಕೆ ಅಂತ್ಯಗೊಳ್ಳುವ ಆತಂಕವೂ ಇದೆ. ವಿಸ್ತರಣೆಗೆ ರಾಜ್ಯ ಸರಕಾರಗಳು ಮನವಿ ಮಾಡಿದೆಯಾದರೂ ಕೇಂದ್ರ ಸಮ್ಮತಿ ಸೂಚಿಸಿಲ್ಲ. ಹೀಗಾಗಿ, ಒಂದೊಮ್ಮೆ ಜಿಎಸ್‌ಟಿ ಪರಿಹಾರ ಸ್ಥಗಿತಗೊಂಡರೆ ಬಹುದೊಡ್ಡ ಹೊರೆ ಬೀಳಲಿದ್ದು, ಸಾಲಕ್ಕೆ ಶರಣಾಗಬೇಕಾಗುತ್ತದೆ. ಚೊಚ್ಚಲ ಬಜೆಟ್‌ ಮಂಡಿಸಲು ಸಜ್ಜಾಗುತ್ತಿರುವ ಬಸವರಾಜ ಬೊಮ್ಮಾಯಿ ಅವರಿಗೂ ಇದು ಸವಾಲಾಗಿದೆ.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.