ಆಮ್ಲಜನಕ ಸ್ಥಿತಿ ಗತಿಗಳ ಬಗ್ಗೆ ಪ್ರಧಾನಿ, ಗೃಹ ಸಚಿವರಿಂದಲೇ ಪರಿಶೀಲನೆ
Team Udayavani, Apr 28, 2021, 7:30 AM IST
ಹೊಸದಿಲ್ಲಿ : ದೇಶದಲ್ಲಿ ವೈದ್ಯ ಕೀಯ ಆಮ್ಲಜನಕ ಪೂರೈಕೆಯ ಮೇಲುಸ್ತು ವಾರಿ ಯನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ವತಃ ವಹಿಸಿದ್ದಾರೆ ಎಂದು ಕೇಂದ್ರ ಸರಕಾರ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅರಿಕೆ ಮಾಡಿಕೊಂಡಿದೆ. ಜತೆಗೆ ಆಮ್ಲಜನಕ ಪೂರೈಕೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳ ಲಾಗುತ್ತಿದೆ ಎಂದು ನ್ಯಾ| ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಸಲ್ಲಿಸಲಾಗಿರುವ 200 ಪುಟಗಳ ಅಫಿದವಿತ್ನಲ್ಲಿ ಉಲ್ಲೇಖೀಸಲಾಗಿದೆ.
ದೇಶದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆ ಯನ್ನು ಸರಾಗಗೊಳಿಸುವ ಕ್ರಮ ಪ್ರಗತಿ ಯಲ್ಲಿದೆ. ಕೊರೊನಾ ಪರಿ ಸ್ಥಿತಿ ಮಾತ್ರವಲ್ಲ, ಅದರ ಅನಂತರದ ದಿನಗಳ ಅಗತ್ಯಕ್ಕೂ ಒದಗುವಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದು ಸರಕಾರ ಹೇಳಿದೆ.
ಕೊರೊನಾ ನಿಯಂ ತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ವೋಚ್ಚ ನ್ಯಾಯಾ ಲಯವು ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಈ ಅಫಿದವಿತ್ ಸಲ್ಲಿಸಿದೆ.
ಕಾರಣ ಏನು?
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳ ಬೆಲೆಯಲ್ಲಿ ವ್ಯತ್ಯಾಸ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಇದರ ಹಿಂದಿನ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಲಸಿಕೆ ಮತ್ತು ಇತರ ಅಗತ್ಯ ಔಷಧೀಯ ವಸ್ತುಗಳ ದರ ನಿಗದಿಗೆ ಅಳವಡಿಸಿಕೊಂಡ ಆಧಾರ, ತರ್ಕಗಳೇನು? ಇಂಥ ರಾಷ್ಟ್ರೀಯ ಬಿಕ್ಕಟ್ಟಿನಲ್ಲಿ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ನ ಪಾತ್ರ ಈ ವೇಳೆ ನಿರ್ಣಾಯಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ರಾಜ್ಯಗಳಿಗೆ ಸೂಚನೆ
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಗೆ ಸಿದ್ಧತೆ ಹೇಗೆ ನಡೆದಿದೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಲಸಿಕೆ ನೀಡಿಕೆಗೆ ಸಂಬಂಧಿಸಿದ ಮೂಲ ಸೌಕರ್ಯಗಳ ಕುರಿತು ಮಾಹಿತಿ ನೀಡು ವಂತೆ ಎಲ್ಲ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ. ಲಸಿಕೆ, ಆಮ್ಲಜನಕ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ