ಭತ್ತದ ಬೆಂಬಲ ಬೆಲೆ ಹೆಚ್ಚಳ : ಪ್ರತೀ ಕ್ವಿಂಟಾಲ್ಗೆ 1,940 ರೂ. ಕೇಂದ್ರ ನಿರ್ಧಾರ
Team Udayavani, Jun 10, 2021, 7:20 AM IST
ಹೊಸದಿಲ್ಲಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಭತ್ತ, ಹತ್ತಿ, ಜೋಳ, ರಾಗಿ, ದ್ವಿದಳ ಧಾನ್ಯ ಸೇರಿದಂತೆ ಮುಂಗಾರು ಹಂಗಾಮಿನ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಲಾಗಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಬೆಳೆಯುವ ಭತ್ತಕ್ಕೆ 72 ರೂ. ಎಂಎಸ್ಪಿ ಹೆಚ್ಚಳ ಮಾಡಲಾಗಿದೆ. ಈ ಮೂಲಕ 2021-22ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ಭತ್ತದ ಬೆಲೆ 1,940 ರೂ.ಗಳಾಗಲಿವೆ. ಪ್ರಮುಖ ವಾಣಿಜ್ಯ ಬೆಳೆ ಹತ್ತಿಯ ಬೆಂಬಲ ಬೆಲೆಯನ್ನೂ ಹೆಚ್ಚಿಸಲಾಗಿದೆ. ಇದಕ್ಕೆ 211 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಈ ಮೂಲಕ ಕ್ವಿಂಟಾಲ್ ಹತ್ತಿಗೆ 5,726 ರೂ.ಗಳಾಗಿವೆ. ಹಾಗೆಯೇ ಮತ್ತೂಂದು ತಳಿಯ ಹತ್ತಿಯ ಎಂಎಸ್ ಪಿಯನ್ನೂ 200 ರೂ. ಹೆಚ್ಚಿಸಲಾಗಿದ್ದು, ಇದು ಪ್ರತಿ ಕ್ವಿಂಟಾಲ್ಗೆ 6,025 ರೂ.ಗಳಷ್ಟಾಗಿದೆ.
ಸಂಪುಟ ಸಭೆ ಅನಂತರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂಗಾರು ಹಂಗಾಮಿನ ಒಟ್ಟು 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂದರು. ಈ ಮೂಲಕ ರೈತರು ವೆಚ್ಚ ಮಾಡಿದ ಶೇ. 50ರಿಂದ 85ರಷ್ಟು ಹಣ ಈ ಕನಿಷ್ಠ ಬೆಂಬಲ ಬೆಲೆಯಿಂದಲೇ ಬರಲಿದೆ ಎಂದರು.
ಈ ಮಧ್ಯೆ ಸದ್ಯ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆಯೂ ಮಾತನಾಡಿದ ಅವರು, ಎಂಎಸ್ಪಿ ಈಗಲೂ ಇರುತ್ತದೆ, ಮುಂದೆಯೂ ಇರುತ್ತದೆ ಎಂದು ಸ್ಪಷ್ಟವಾಗಿ ಹೇಳಿದರು. ಹಾಗೆಯೇ ಈಗಲೂ ಎಂಎಸ್ಪಿ ದರ ಹೆಚ್ಚಿಸುತ್ತಿದ್ದೇವೆ, ಮುಂದೆಯೂ ಹೆಚ್ಚಳ ಮಾಡುತ್ತಾ ಹೋಗುತ್ತೇವೆ ಎಂಬ ಭರವಸೆಯನ್ನೂ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ