ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು
Team Udayavani, Jun 30, 2022, 1:24 PM IST
ಪಣಜಿ: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಶಿವಸೇನೆಯ 39 ಜನ ಬಂಡಾಯ ಶಾಸಕರು ಬುಧವಾರ ರಾತ್ರಿ ಗೋವಾಕ್ಕೆ ಆಗಮಿಸಿದ್ದಾರೆ. ಆದರೆ ದಾಬೋಲಿಂ ವಿಮಾನ ನಿಲ್ದಾಣದಿಂದ ಇಲ್ಲಿನ ತಾಜ್ ಹೊಟೇಲ್ಗೆ ಆಗಮಿಸುವಾಗ ಮಾಧ್ಯಮಗಳ ಕಣ್ಣು ತಪ್ಪಿಸಲು ಕಾರ್ಗೊ ಗೇಟ್ ಮೂಲಕ ತೆರಳಿದ್ದಾರೆ.
ದಾಬೋಲಿಂ ವಿಮಾನ ನಿಲ್ದಾಣದ ಹೊರಗೆ 30ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಸ್ಥಳೀಯ ಮಾಧ್ಯಮ ವರದಿಗಾರರು ಬುಧವಾರ ಮಧ್ಯಾಹ್ನದಿಂದಲೇ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಕಾಯುತ್ತಿದ್ದರು. ಆದರೆ ತಡ ರಾತ್ರಿಗೆ ಆಗಮಿಸಿದ ಈ ಬಂಡಾಯ ಶಾಸಕರನ್ನು ಭೇಟಿ ಮಾಡಲು ಮಾಧ್ಯಮಗಳಿಂದ ಸಾಧ್ಯವಾಗಲಿಲ್ಲ.
ಈ ಬಂಡಾಯ ಶಾಸಕರು ಪಣಜಿ ಸಮೀಪದ ದೋನಾಪಾವುಲ್ನ ತಾಜ್ ರೆಸಾರ್ಟಗೆ ಬಂದಿಳಿದಿದ್ದಾರೆ. ಶಾಸಕರಿಗಾಗಿ 74 ಕೊಠಡಿಗಳನ್ನು ಕಾಯ್ದಿರಿಸಲಾಗಿತ್ತು. ಇವರು ಮೊದಲು ಗುಜರಾತ್ಗೆ ತೆರಳಿದ್ದು, ಬಳಿಕ ಗುವಾಟಿ, ಗೋವಾಕ್ಕೆ ಆಗಮಿಸಿದ್ದಾರೆ. ಬಿಜೆಪಿ ಆಡಳಿತವಿರುವ ಈ ಮೂರು ರಾಜ್ಯಗಳಲ್ಲಿ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!