Watch: ಬಸ್ಕಿ ಹೊಡೆಯೊ ಶಿಕ್ಷೆ- ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿಯ ತಂದೆ!
ವಿದ್ಯಾರ್ಥಿಯ ತಂದೆಯನ್ನು ಶಾಲಾ ಆವರಣದಿಂದ ಹೊರ ಕಳುಹಿಸಲಾಗಿತ್ತು
Team Udayavani, Sep 20, 2023, 3:17 PM IST
ಕಾನ್ಪುರ್(ಉತ್ತರಪ್ರದೇಶ): ವಿದ್ಯಾರ್ಥಿಯೊಬ್ಬನಿಗೆ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದಕ್ಕಾಗಿ ಆಕ್ರೋಶಗೊಂಡ ತಂದೆ ತನ್ನ ಬೆಂಬಲಿಗರ ಗುಂಪಿನೊಂದಿಗೆ ಪ್ರಾಂಶುಪಾಲರ ಕೋಣೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆದ ಘಟನೆ ಕಾನ್ಪುರ್ ನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:UV Fusuion: ರಾಜ್ಯದ ಮೊದಲ ಆಸ್ಟ್ರೋ ಫಾರ್ಮ್: ಅತ್ಯುತ್ತಮ ಖಗೋಳ ಪ್ರವಾಸಿ ಕೇಂದ್ರ
ಶಾಲೆಯಲ್ಲಿ ಶಿಕ್ಷಕ ವಿದ್ಯಾರ್ಥಿಗೆ 50ಕ್ಕಿಂತಲೂ ಹೆಚ್ಚು ಬಾರಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದು, ಈ ಬಗ್ಗೆ ವಿದ್ಯಾರ್ಥಿ ಪೋಷಕರ ಬಳಿ ದೂರು ಹೇಳಿದ್ದ. ವರದಿಯ ಪ್ರಕಾರ, 5ನೇ ತರಗತಿ ವಿದ್ಯಾರ್ಥಿಗೆ 50ಕ್ಕಿಂತ ಹೆಚ್ಚು ಬಾರಿ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದ್ದರಿಂದ ಆತನ ತಂದೆ ತನ್ನ ಬೆಂಬಲಿಗರೊಂದಿಗೆ ಪ್ರಾಂಶುಪಾಲರ ಕಚೇರಿಗೆ ನುಗ್ಗಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಪ್ರಾಂಶುಪಾಲರ ಕೋಣೆಗೆ ಏಕಾಏಕಿ ನುಗ್ಗಿದ ವಿದ್ಯಾರ್ಥಿಯ ತಂದೆ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ ಹಾಗೂ ಶಾಲಾ ಪ್ರಾಂಶುಪಾಲರು ಕೂಡಾ ಕೋಣೆಯಲ್ಲಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆಯುತ್ತಿದ್ದಾಗ ವಿದ್ಯಾರ್ಥಿ ತಂದೆಯ ಜತೆಯಲ್ಲಿ ಬಂದಿದ್ದವರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ನಂತರ ಸೆಕ್ಯುರಿಟಿ ಬಂದಿದ್ದು, ವಿದ್ಯಾರ್ಥಿಯ ತಂದೆಯನ್ನು ಶಾಲಾ ಆವರಣದಿಂದ ಹೊರ ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
कानपुर: बसंत विहार स्थित साउथ सिटी पब्लिक स्कूल में बच्चे से उठक बैठक करवाने पर शिक्षक से नाराज परिजनों ने ऑफिस में घुस की मारपीट.!!
घटना का सीसीटीवी वीडियो आया सामने,हनुमंत विहार थाना अंतर्गत का मामला.!!#Kanpur #Crime #Schoolfight #gknews #basantvihar pic.twitter.com/1OHqxO2DwD
— Jr.Gaurav Kushwaha 🇮🇳 (@Gauravlivee) September 18, 2023
ಘಟನೆ ಬಗ್ಗೆ ಶಾಲಾ ಆಡಳಿತ ಮಂಡಳಿ ಹನುಮಂತ್ ವಿಹಾರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅದರಂತೆ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರು ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಿದ್ದು, ವಿದ್ಯಾರ್ಥಿಯ ತಂದೆ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ