Parliament: ವಾಕ್ಸಮರಗಳ ನಡುವೆ ಇಂದು ಭವ್ಯ ಸಂಸತ್‌ ಉದ್ಘಾಟನೆ

ಉದ್ಘಾಟನೆಗೆ ಹಾಜರಾಗುತ್ತೇನೆಂದ ಗುಲಾಮ್‌ ಆಜಾದ್‌, ಗೈರು ಎಂದ ನಿತೀಶ್‌ ಕುಮಾರ್‌

Team Udayavani, May 28, 2023, 7:03 AM IST

new parliament with sengol

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭವ್ಯವಾಗಿ ನಿರ್ಮಾಣಗೊಂಡಿರುವ ನೂತನ ಸಂಸತ್‌ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರ 140ನೇ ಜನ್ಮದಿನದಂದೇ ಈ ಭವನ ಲೋಕಾರ್ಪಣೆಗೊಳ್ಳುತ್ತಿದೆ.

ಈ ಅದ್ಧೂರಿ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡರೂ, ಉದ್ಘಾಟನೆಯನ್ನು ಯಾರು ಮಾಡಬೇಕು ಎಂಬ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ಯುದ್ಧ ಮಾತ್ರ ನಿಂತಿಲ್ಲ. ಶನಿವಾರವೂ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪ ಮುಂದುವರಿದಿತ್ತು.

ಬಹಿಷ್ಕರಿಸಲ್ಲ ಎಂದ ಆಜಾದ್‌

ಸಂಸತ್‌ ಭವನ ಉದ್ಘಾಟನೆಯಿಂದ ದೂರವುಳಿಯಲು 20 ಪ್ರತಿಪಕ್ಷಗಳು ನಿರ್ಧರಿಸಿರುವಂತೆಯೇ, ದಿ ಡೆಮೋಕ್ರಾಟಿಕ್‌ ಪ್ರೊಗ್ರೆಸ್ಸಿವ್‌ ಆಜಾದ್‌ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್‌, ತಾವು ಕಾರ್ಯಕ್ರಮವನ್ನು ಬಹಿಷ್ಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ದಾಖಲೆ ಅವಧಿಯಲ್ಲಿ ನೂತನ ಸಂಸತ್‌ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಎಲ್ಲ ಪಕ್ಷಗಳೂ ಬಿಜೆಪಿ ಸರ್ಕಾರವನ್ನು ಶ್ಲಾ ಸಬೇಕು. ಆದರೆ, ಪ್ರತಿಪಕ್ಷಗಳು ಕಾರ್ಯಕ್ರಮವನ್ನೇ ಬಹಿಷ್ಕರಿಸುವುದಾಗಿ ಹೇಳುತ್ತಿವೆ. ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.

ಪರಮೋಚ್ಚ ಹುದ್ದೆಗೆ ಅವಮಾನ

ಸಂವಿಧಾನದ 79ನೇ ವಿಧಿಯ ಪ್ರಕಾರ, ರಾಷ್ಟ್ರಪತಿಗಳು, ರಾಜ್ಯಸಭೆ ಮತ್ತು ಲೋಕಸಭೆ ಮೂರೂ ಸೇರಿ ಸಂಸತ್‌ ರೂಪುಗೊಂಡಿದೆ. ರಾಷ್ಟ್ರಪತಿಯು ದೇಶದ ಪ್ರಥಮ ಪ್ರಜೆ ಮತ್ತು ದೇಶದ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್‌. ಹೀಗಿರುವಾಗ ಸಂಸತ್‌ ಭವನ ಉದ್ಘಾಟನೆಯಿಂದ ರಾಷ್ಟ್ರಪತಿಯವರನ್ನು ಹೊರಗಿಟ್ಟಿರುವುದು ಭಾರತದ ಪರಮೋಚ್ಚ ಹುದ್ದೆಗೆ ಮಾಡುವ ಅವಮಾನ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ನಾವು ಪ್ರಧಾನಿ ಮೋದಿಯವರನ್ನು ವಿರೋಧಿಸುತ್ತಿಲ್ಲ. ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳ ಕಡೆಗಣನೆಯನ್ನು ವಿರೋಧಿಸುತ್ತಿದ್ದೇವೆ ಎಂದೂ ಸುಳೆ ಸ್ಪಷ್ಟಪಡಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮಾತನಾಡಿ, “ಹೊಸ ಸಂಸತ್‌ ಭವನದ ಅಗತ್ಯವೇನಿತ್ತು? ಹಿಂದಿನ ಕಟ್ಟಡವೇ ಐತಿಹಾಸಿಕವಾಗಿತ್ತು. ಅಧಿಕಾರದಲ್ಲಿರುವ ಜನರು ಈ ದೇಶದ ಇತಿಹಾಸವನ್ನು ಬದಲಿಸುತ್ತಾರೆ ಎಂದು ನಾನು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದೇನೆ’ ಎಂದಿದ್ದಾರೆ.

ರಾಜಕೀಯ ಮಾಡಲೂ ಮಿತಿ ಬೇಕು:

20 ಪ್ರತಿಪಕ್ಷಗಳು ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಇದೊಂದು ದುರದೃಷ್ಟಕರ ಸಂಗತಿ. ರಾಜಕೀಯ ಮಾಡುವುದಕ್ಕೂ ಮಿತಿ ಬೇಕು. ಹೊಸ ಸಂಸತ್‌ ಭವನದ ಉದ್ಘಾಟನೆಯನ್ನು ಇಡೀ ದೇಶದ ಹಬ್ಬವೆಂಬಂತೆ ಆಚರಿಸಬೇಕು ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿರುವ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌, “ಕೆಲವು ವ್ಯಕ್ತಿಗಳಿಗೆ ಸಂಸತ್‌ ಭವನ ಪ್ರವೇಶಿಸುವುದಕ್ಕೆ ನಿರ್ಬಂಧವಿದೆ. ಈವರೆಗೆ ಇವರೆಲ್ಲ ಸದನಗಳ ಕಲಾಪ ಕೊಚ್ಚಿಹೋಗುವಂತೆ ಮಾಡಲು ನೆಪಗಳನ್ನು ಹುಡುಕುತ್ತಿದ್ದರು. ಈಗ ಸಂಸತ್‌ ಭವನ ಉದ್ಘಾಟನೆಯನ್ನೇ ಬಹಿಷ್ಕರಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಖರ್ಗೆ, ಕೇಜ್ರಿವಾಲ್‌ ವಿರುದ್ಧ ಎಫ್ಐಆರ್‌

ಸಂಸತ್‌ ಭವನ ಉದ್ಘಾಟನೆ ವಿಚಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯ ಬಗ್ಗೆ ಪ್ರಸ್ತಾಪಿಸಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ, ರಾಜಕೀಯ ಉದ್ದೇಶಕ್ಕಾಗಿ ಭಾರತ ಸರ್ಕಾರದ ಬಗ್ಗೆ ಅಪನಂಬಿಕೆ ಮೂಡಿಸುವ ಯತ್ನ ಆರೋಪವನ್ನು ಈ ನಾಯಕರ ವಿರುದ್ಧ ಹೊರಿಸಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.