ಸಂಸತ್ಗೆ ಅನುಭವ ಮಂಟಪ : ಬಜೆಟ್ ಅಧಿವೇಶನ ವೇಳೆ ಅನಾವರಣ
Team Udayavani, Dec 16, 2019, 6:15 AM IST
ಕಲಬುರಗಿ: ವಿಶ್ವದಲ್ಲಿಯೇ ಮೊದಲ ಬಾರಿ, ಹನ್ನೆರಡನೇ ಶತಮಾನದಲ್ಲಿ ನಡೆದ ಬಸವಾದಿ ಶರಣರ ಅನುಭವ ಮಂಟಪದ ಕಲಾಕೃತಿ ಸಂಸತ್ನಲ್ಲಿ ಬಜೆಟ್ ಅಧಿವೇಶನ ಇಲ್ಲವೆ ಅದಕ್ಕೂ ಮುನ್ನ ಅಳವಡಿಕೆಯಾಗಲಿದೆ. ಈ ಕಲಾಕೃತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಆಗಲಿದೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಂಸತ್ ಆವರಣದೊಳಗೆ ಅನುಭವ ಮಂಟಪ ಕಲಾಕೃತಿ ಅಳವಡಿಕೆಗೆ ಅನುಮತಿ ನೀಡಿದ್ದು, ಸದ್ಯದಲ್ಲೇ ಅಳವಡಿಕೆಗೆ ದಿನಾಂಕ ಗೊತ್ತುಪಡಿಸುವುದಾಗಿ ತಿಳಿಸಿದ್ದಾರೆ. ನಾಡೋಜ ಪುರಸ್ಕೃತ, ರೂಪಧರ್ ಪ್ರಶಸ್ತಿ ವಿಜೇತ ಕಲಬುರಗಿಯ ಡಾ| ಜೆ.ಎಸ್. ಖಂಡೇರಾವ್ 2 ವರ್ಷಗಳಿಂದ ಈ ಕಲಾಕೃತಿ ರಚಿಸುತ್ತಿದ್ದಾರೆ. 12ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ಅಲ್ಲಮ ಪ್ರಭು ಅಧ್ಯಕ್ಷತೆಯಲ್ಲಿ ನಡೆದ ಬಸವಾದಿ ಶರಣರ ಅಧಿವೇಶನ ಅಂದರೆ ಅನುಭವ ಮಂಟಪ ದೃಶ್ಯ ಕಣ್ಣೆದುರಿಗೆ ಬರುವ ರೀತಿಯಲ್ಲಿ ಕಲಾಕೃತಿ ರೂಪುಗೊಂಡಿದೆ. ವಿವಿಧ ಸಾಮಾಜಿಕ ಸ್ತರಗಳಿಂದ ಬಂದ ಕಾಯಕ ಜೀವಿ ಶರಣರ ಪ್ರತಿನಿಧಿಗಳಾದ 770 ಅಮರಗಣಂಗಳು ಅನುಭವ ಮಂಟಪದಲ್ಲಿ ಸೇರಿ ಜೀವನ ದರ್ಶನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುತ್ತಿದ್ದ, ಶರಣ- ಶರಣೆಯರೆಲ್ಲರೂ ಪಾಲ್ಗೊಂಡ ಅಪರೂಪದ ದೃಶ್ಯವನ್ನು ಖಂಡೇರಾವ್ ಕಲಾಕುಂಚದಲ್ಲಿ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ