ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು


Team Udayavani, Jan 17, 2022, 1:35 AM IST

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಉಡುಪಿ: ನಗರದಲ್ಲಿ ಕಳ್ಳತನ ಪ್ರಕರಣಗಳು ದಿನೇ ದಿನೇ ವರದಿಯಾಗುತ್ತಿದ್ದು, ಈ ನಡುವೆ ಪರ್ಯಾಯೋತ್ಸವ ನಡೆಯುತ್ತಿರುವುದರಿಂದ ಶ್ರೀಕೃಷ್ಣ ಮಠದ ಪರಿಸರಕ್ಕೆ ಎಚ್‌ಡಿ ಗುಣಮಟ್ಟದ 63 ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಈ ಮೂಲಕ ಕಳ್ಳತನ ಸಹಿತ ಇತರ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಪೊಲೀಸ್‌ ಇಲಾಖೆಯಿಂದ ಸಕಲ ಕ್ರಮ ತೆಗೆದುಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, 5 ಡಿವೈಎಸ್‌ಪಿಗಳು, 47 ಪಿಎಸ್‌ಐ, 62 ಎಎಸ್‌ಐ, 529 ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗ‌ಳು, 93 ಮಹಿಳಾ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗ‌ಳು, 7 ಡಿಎಆರ್‌, 2 ಕೆಎಸ್‌ಆರ್‌ಪಿ ತುಕಡಿ, 1 ಕ್ವಿಕ್‌ ರೆಸ್ಪಾನ್ಸ್‌ ಟೀಮ್‌, 3 ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜಿಲ್ಲೆಯಷ್ಟೇ ಅಲ್ಲದೆ ಹೊರಜಿಲ್ಲೆ ಗಳಿಂದಲೂ ಪೊಲೀಸರು ಭದ್ರತೆಗಾಗಿ ಆಗಮಿಸಿದ್ದಾರೆ.

ರಥಬೀದಿಯೊಳಗೆ ಪೊಲೀಸ್‌ ಚೌಕಿ
ರಥಬೀದಿಯ ಶ್ರೀ ಕೃಷ್ಣಾಪುರ ಮಠದ ಬಲಬದಿಯಲ್ಲಿ ಪೊಲೀಸ್‌ ಚೌಕಿ ಮಾಡಲಾಗಿದೆ. ಇಲ್ಲಿ ಸಿಸಿಟಿವಿ ದೃಶ್ಯಾವಳಿಗಳೆಲ್ಲವನ್ನೂ ಪೊಲೀಸರು ಮಾನಿಟರಿಂಗ್‌ ಮಾಡಲಿದ್ದಾರೆ. ಪಾಳಿ ಅವಧಿಯಲ್ಲಿ ಪೊಲೀಸರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ರಥಬೀದಿ ಸಂಪರ್ಕಿಸುವ ಎಲ್ಲ ದ್ವಾರಗಳು, ವಾಹನ ನಿಲುಗಡೆ ಪ್ರದೇಶ, ಪರ್ಯಾಯೋತ್ಸವ ಮೆರವಣಿಗೆ ಹಾದು ಹೋಗುವ ಭಾಗಗಳು ಸಹಿತ ಎಲ್ಲೆಡೆ ಪೊಲೀಸರು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಂದು ಮೈದಾನದಲ್ಲಿ ಸಭೆ
ಪರ್ಯಾಯೋತ್ಸವ ಸಂದರ್ಭದಲ್ಲಿ ವಹಿಸಬೇಕಾಗಿರುವ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಗರದ ಚಂದು ಮೈದಾನದಲ್ಲಿ ಎಲ್ಲ ಪೊಲೀಸರಿಗೂ ರವಿವಾರ ಮಾಹಿತಿ ನೀಡಿದರು.

ಎಚ್ಚರಿಕೆ ಫ‌ಲಕ
ಉಡುಪಿ ಜಿಲ್ಲೆ ಸಹಿತ ನಗರ ಪೊಲೀಸ್‌ ಠಾಣೆಯ ಸಿಬಂದಿ ನಗರ, ಶ್ರೀಕೃಷ್ಣಮಠದ ಪರಿಸರದಲ್ಲಿ ಎಚ್ಚರಿಕೆ ಫ‌ಲಕಗಳನ್ನು ಅಳವಡಿಕೆ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸರಳಗಳ್ಳತನದ ಬಗ್ಗೆ ಎಚ್ಚರಿಕೆ ಸಂದೇಶ ಸಹಿತ ಮಕ್ಕಳು, ಬ್ಯಾಗ್‌, ಪರ್ಸ್‌ಗಳ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತಹ ಜಾಗೃತಿ ಫ‌ಲಕಗಳು ಶ್ರೀಕೃಷ್ಣ ಮಠ ಪರಿಸರದಲ್ಲಿ ರಾರಾಜಿಸುತ್ತಿವೆ.

ಎಲ್ಲೆಲ್ಲಿಸಿಸಿ ಕೆಮರಾ ಅಳವಡಿಕೆ ?
ಪರ್ಯಾಯೋತ್ಸವ ಮೆರವಣಿಗೆ ಹಾದುಹೋಗುವ ಮಾರ್ಗ, ಕಿನ್ನಿಮೂಲ್ಕಿಯಿಂದ ರಥಬೀದಿ ಪರಿಸರ ಸುತ್ತಮುತ್ತ, ಇಂದ್ರಾಳಿ, ಕಲ್ಸಂಕ, ಕುಕ್ಕಿಕಟ್ಟೆ ಸಹಿತ ಎಲ್ಲ ಪ್ರಮುಖ ಭಾಗಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಮೂಲಕ ಯಾರೂ ಕೂಡ ಸಿಸಿಟಿವಿ ಕಣ್ಣು ತಪ್ಪಿಸಿ ಪರಾರಿಯಾಗಲು ಸಾಧ್ಯವೇ ಇಲ್ಲ ಎಂಬಂತೆ ಭದ್ರತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

 

ಟಾಪ್ ನ್ಯೂಸ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.