ಪೇಜಾವರ ವಿಶೇಷ: ಈದ್‌ ಉಪಾಹಾರದ ಘಟನೆ; ವಿವಾದ ಸೃಷ್ಟಿಸುವುದಲ್ಲ, ಆಕಸ್ಮಿಕವಾಗಿ ಆಗುತ್ತವೆ


Team Udayavani, Dec 29, 2019, 11:26 AM IST

iftar

ಉಡುಪಿ ಶ್ರೀಕೃಷ್ಣಮಠದಲ್ಲಿ 2017ರ ಜೂನ್‌ 24ರಂದು ಮುಸ್ಲಿಮರಿಗೆ ಈದ್‌ ಉಪಾಹಾರವನ್ನು ಪರ್ಯಾಯ ಶ್ರೀಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಏರ್ಪಡಿಸಿದರು. ಇದು ವಿವಾದಕ್ಕೂ ಕಾರಣವಾಯಿತು. ಆದರೆ ಸ್ವಾಮೀಜಿಯವರು ಯಾವುದೇ ಕಾರಣಕ್ಕೂ ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ.

1970ರ ದಶಕದಲ್ಲಿ ದಲಿತರ ಕೇರಿಗೆ ತಾವು ಹೋದಾಗಲೂ ಭಾರೀ ಕೋಲಾಹಲ ಉಂಟಾಯಿತು. ಇದಕ್ಕೂ ಮೂರ್‍ನಾಲ್ಕು ವರ್ಷಗಳ ಹಿಂದೆ ಬಾಗಲಕೋಟೆಯಲ್ಲಿ ಮಾಧ್ಯಮದವರು ಕುರುಬರಿಗೆ ಮಂತ್ರ ದೀಕ್ಷೆ ಕೊಡುತ್ತೀರಾ ಎಂದು ಕೇಳಿದರು. ಕೊಡುವುದಿಲ್ಲ ಎನ್ನುವುದು ಸರಿಯೆ? ನಾವು ಅಪೇಕ್ಷೆಪಟ್ಟ ಎಲ್ಲರಿಗೂ  ಕೊಡುತ್ತೇವೆ. ಕುರುಬರಿಗೂ ಕೊಡುತ್ತೇವೆ ಎಂದೆ. ಹಿಂದೆಯೂ ಕೊಟ್ಟಿದ್ದೆವು, ಈಗಲೂ ಕೊಡುತ್ತಿದ್ದೇವೆ. ಆಗ ಭಾರೀ ಚರ್ಚೆಯಾಯಿತು. ಹೀಗಾಗಿ ವಿವಾದಗಳನ್ನು ನಾವಾಗಿ ತಂದುಕೊಳ್ಳುವುದಿಲ್ಲ. ಅದಾಗಿ ಆಗುತ್ತವೆ. ಈಗ ಈದ್‌ ಉಪಾಹಾರದ ಘಟನೆಯೂ ಹೀಗೆಯೇ. ಮತೀಯ ಸೌಹಾರ್ದತೆಗಾಗಿ ಕಾರ್ಯಕ್ರಮ ಏರ್ಪಡಿಸಿದೆ. ಅದೇ ದಿನ ಹಲವಾರು ದೂರವಾಣಿ ಕರೆಗಳು ಬಂದು ವಿರೋಧ ವ್ಯಕ್ತವಾಯಿತು. ಆಹ್ವಾನ ಕೊಟ್ಟ ಅನಂತರ ಆಗುವುದಿಲ್ಲ ಎನ್ನುವುದು ಸರಿಯಲ್ಲ. ಅದೂ ಕೂಡ ಭೋಜನ ಮಾಡುವ ಹಾಲ್‌ನ ಉಪ್ಪರಿಗೆಯಲ್ಲಿ ನಡೆದದ್ದು. ಕೃಷ್ಣಮಠದಲ್ಲಿ ಅನೇಕ ಕ್ರೈಸ್ತ ವಿದ್ಯಾರ್ಥಿಗಳೂ ಊಟ ಮಾಡಿಕೊಂಡು ಹೋಗುತ್ತಾರೆಂದು ಸಮಾಧಾನಪಡಿಸಿದ್ದೆ ಎಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದರು.

ಆ ಈದ್‌ ಗದ್ದಲವಾಗಲಿಲ್ಲ
ಹಿಂದೆ ಮೂರನೆಯ ಪರ್ಯಾಯದಲ್ಲಿ (1984-85) ಈದ್‌ ಸೌಹಾರ್ದ ಕೂಟ ಏರ್ಪಡಿಸಿದ್ದರು. ಆಗ ಇಷ್ಟು ವಿವಾದಗಳು ಆಗಲಿಲ್ಲ. ಅಂದು ಜನತಾದಳ ನಾಯಕ ಅಮರನಾಥ ಶೆಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಯಿತು. 2017ರಲ್ಲಿ ನಡೆದ ಕಾರ್ಯಕ್ರಮಕ್ಕಿಂತ ದೊಡ್ಡ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆದಿತ್ತು. ಹಿಂದುಗಳು, ಮುಸ್ಲಿಮರು ಸೇರಿ ಸುಮಾರು 500-1000 ಜನರು ಸೇರಿದ್ದರು. ಆಗಲೂ ಕೆಲವರು ಸಿಟ್ಟುಕೊಂಡು ಮಾತನಾಡಿ ಹೋಗಿದ್ದರು. ಪತ್ರಿಕೆಗಳಲ್ಲಿ ವಾದ ವಿವಾದಗಳು ಆಗಿರಲಿಲ್ಲ.

ಪರ-ವಿರೋಧ-ತಟಸ್ಥ
2017ರ ಈದ್‌ ಉಪಾಹಾರ ಕೂಟಕ್ಕೆ ಸಚಿವರಾಗಿದ್ದ ಯು.ಟಿ.ಖಾದರ್‌, ರಮಾನಾಥ ರೈ, ಆಂಜನೇಯ, ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕ ಜಗದೀಶ ಶೆಟ್ಟರ್‌, ಸಂಸದ ಪ್ರತಾಪಸಿಂಹ, ಕೆಪಿಸಿಸಿ ಅಧ್ಯಕ್ಷ ಡಾ|ಜಿ.ಪರಮೇಶ್ವರ್‌ ಬೆಂಬಲ, ಸಚಿವ ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ ವಿರೋಧ ಸೂಚಿಸಿದ್ದರು. ಸಿ.ಟಿ.ರವಿ ಮಧ್ಯಮಮಾರ್ಗದಲ್ಲಿ ಮಾತನಾಡಿದ್ದರು.

ಅದಕ್ಕೆ ವಿರೋಧ, ಇದಕ್ಕೆ ಪರ!
ತಮಾಷೆ ಎಂದರೆ ಸ್ವಾಮೀಜಿಯವರನ್ನು ಸದಾಕಾಲ ಮೂಲಭೂತವಾದಿಗಳೆಂದು ಕರೆಯುವವರು ಈದ್‌ ಕೂಟಕ್ಕೆ ಬೆಂಬಲ ಕೊಟ್ಟಿದ್ದರು. ಜಾತ್ಯತೀತವಾದಿಗಳು, ಸಾಹಿತಿಗಳು, ಪ್ರಗತಿಪರರು ಬೆಂಬಲ ನೀಡಿದ್ದರು. ಸಾಹಿತಿಗಳಾದ ಡಾ|ಸಿದ್ದಲಿಂಗಯ್ಯ, ಸಿದ್ದಯ್ಯನವರು ದೂರವಾಣಿ ನೀಡಿ ಬೆಂಬಲ ಸೂಚಿಸಿದ್ದರು. ಯುವಬ್ರಿಗೇಡ್‌ನ‌ ಚಕ್ರವರ್ತಿ ಸೂಲಿಬೆಲೆ, ಹಿಂದೂ ಜಾಗರಣ ವೇದಿಕೆಯವರು ಭೇಟಿಯಾಗಿ ಬೆಂಬಲ ಸೂಚಿಸಿದ್ದರೆ, ಶ್ರೀರಾಮಸೇನೆಯ ಪ್ರಮೋದ್‌ ಮುತಾಲಿಕ್‌ ವಿರೋಧ ಸೂಚಿಸಿದ್ದರು. ಆರೆಸ್ಸೆಸ್‌ನವರು ತಟಸ್ಥರಾಗಿದ್ದರು. ಮುಸ್ಲಿಮರಲ್ಲಿ ಅನೇಕರು ಸಂತಸ ವ್ಯಕ್ತಪಡಿಸಿದ್ದರು. ಬಿಜಾಪುರದಿಂದ ಒಬ್ಬರು ಧರ್ಮಗುರು ದೂರವಾಣಿ ಕರೆ ನೀಡಿ ಸಂತೋಷ ವ್ಯಕ್ತಪಡಿಸಿದ್ದರು.

ಹಿಂದು ಮತ್ತು ಮುಸ್ಲಿಮರಲ್ಲಿ ಸೌಹಾರ್ದ ಬೆಳೆದರೆ ಗೋಹತ್ಯೆಯಂತಹ ಅನೇಕ ಸಮಸ್ಯೆಗಳು ಬಗೆಹರಿಯುತ್ತವೆ. ಇದುವೇ ನಾವು ಮುಸ್ಲಿಮರಿಂದ ನಿರೀಕ್ಷಿಸುವುದು ಎಂದು ಸ್ವಾಮೀಜಿ ಹೇಳಿದ್ದರು. ಸ್ವಾಮೀಜಿ ಅಂತರಂಗದ ಉದ್ದೇಶ ಹೀಗಿತ್ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.