ತಮ್ಮ ನೆಚ್ಚಿನ ವಿದ್ಯಾಪೀಠದ ಆವರಣದಲ್ಲಿ ಬೃಂದಾವನಸ್ಥರಾದ ವಿಶ್ವೇಶತೀರ್ಥರು

ಉಡುಪಿಯ ಅಷ್ಟಮಠ ಪರಂಪರೆಯ ಯತಿಶ್ರೇಷ್ಠರು ಇನ್ನು ನೆನಪು ಮಾತ್ರ…

Team Udayavani, Dec 29, 2019, 9:40 PM IST

Pejawara-Swamiji-07

ಚಿತ್ರ ಕೃಪೆ: ಸುಕುಮಾರ್ ಕೊಡವೂರು

ಬೆಂಗಳೂರು: ಇಂದು ಉಡುಪಿ ಪೇಜಾವರ ಮಠದಲ್ಲಿ ಹರಿಪಾದವನ್ನು ಸೇರಿದ ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ಪಂಚಪರ್ಯಾಯ ಸಾಧಕ ಶ್ರೀ ವಿಶ್ವೇಶತೀರ್ಥರನ್ನು ಅವರ ಅಂತಿಮ ಇಚ್ಛೆಯಂತೆ ಶ್ರೀಗಳ ನೆಚ್ಚಿನ ವಿದ್ಯಾಪೀಠದ ಆವರಣದಲ್ಲಿ ಬೃಂದಾವನಸ್ಥರನ್ನಾಗಿಸಲಾಯಿತು.

ಇದಕ್ಕೂ ಮೊದಲು ಉಡುಪಿಯ ಅಜ್ಜರಕಾಡಿನಲ್ಲಿ ಸಾರ್ವಜನಿಕ ದರ್ಶನ ಮುಗಿದ ಬಳಿಕ ಸೇನಾ ಹೆಲಿಕಾಫ್ಟರ್ ಮೂಲಕ ಶ್ರೀಗಳ ದೇಹವನ್ನು ಬೆಂಗಳೂರಿಗೆ ತರಲಾಯಿತು. ಮತ್ತು ಇಲ್ಲಿ ಬಸವನಗುಡಿಯಲ್ಲಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ಬಳಿಕ ಅಲ್ಲಿಂದ ಶ್ರೀಗಳನ್ನು ತೆರೆದ ವಾಹನದಲ್ಲಿ ವಿದ್ಯಾಪೀಠ ಆವರಣಕ್ಕೆ ತಂದು ಇಲ್ಲಿ ಶ್ರೀಗಳ ಬೃಂದಾವನಕ್ಕೆಂದು ಮೊದಲೇ ನಿಗದಿಪಡಿಸಿದ್ದ ಜಾಗದಲ್ಲಿ ಸನ್ಯಾಸಿ ಪದ್ಧತಿಯಂತೆ ಅಗತ್ಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು. ಇದಕ್ಕೂ ಮೊದಲು ಶ್ರೀಗಳಿಗೆ ಸರಕಾರಿ ಗೌರವವನ್ನು ಸಲ್ಲಿಸಲಾಯಿತು.

ಇವೆಲ್ಲಾ ಕಾರ್ಯಕ್ರಮಗಳು ನಡೆದ ಬಳಿಕ ವೈದಿಕ ವಿಧಿ ವಿಧಾನಗಳಿಗೆ ಅನುಸಾರವಾಗಿ ಶ್ರೀಗಳನ್ನು ಪದ್ಮಾಸನ ಭಂಗಿಯಲ್ಲಿ ಬೃಂದಾವನದಲ್ಲಿ ಕುಳ್ಳಿರಿಸಿ ಬಳಿಕ ಶ್ರೀಗಳು ನಿತ್ಯ ಜಪ-ತಪ, ಪೂಜಾ ಕಾರ್ಯಗಳಿಗೆ ಬಳಸುತ್ತಿದ್ದ ವಿಷ್ಣು ಸಾಲಿಗ್ರಾಮ, ಗಿಂಡಿ, ತುಳಸಿ ಮಾಲೆ, ಪೂಜಾ ಸಾಮಾಗ್ರಿಗಳನ್ನು ಶ್ರೀಗಳ ದೇಹದ ಜೊತೆಯಲ್ಲೇ ಇರಿಸಿ ಸಾಸಿವೆ, ಉಪ್ಪು ಹಾಗೂ ಹತ್ತಿಯಲ್ಲಿ  ಬೃಂದಾವನವನ್ನು ಮುಚ್ಚಲಾಯಿತು.

ವಿದ್ಯಾಪೀಠದ ದುಃಖತಪ್ತ ವಿದ್ಯಾರ್ಥಿಗಳು, ಬೋಧಕರು, ಮಠದ ಹಾಗೂ ಶ್ರೀಗಳ ಭಕ್ತವೃಂದ ಸಹಿತ ಹಲವಾರು ಗಣ್ಯರು ಹಾಗೂ ಸಾರ್ವಜನಿಕರು ಭಾರವಾದ ಹೃದಯದಿಂದ ‘ಯತಿ ಶ್ರೇಷ್ಠ’ರಿಗೆ ಅಶ್ರುಭರಿತ ನಮನಗಳನ್ನು ಸಲ್ಲಿಸಿದರು. ಇದರೊಂದಿಗೆ ಆಚಾರ್ಯ ಮಧ್ವರ ಯತಿ ಪರಂಪರೆಯಲ್ಲಿ ಬಂದ ಯತಿ ಶ್ರೇಷ್ಠರೊಬ್ಬರ ಮಹಾಪ್ರಸ್ಥಾನದೊಂದಿಗೆ ಉಡುಪಿ ಅಷ್ಟಮಠಗಳ ಇತಿಹಾಸದಲ್ಲಿ ಮಹಾಯತಿ ಪರಂಪರೆಯ ಯುಗವೊಂದು ಅಂತ್ಯಗೊಂಡಂತಾಗಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.