ಮೊಟೆತ್ತಡ್ಕದ ಎನ್‌ಆರ್‌ಸಿಸಿ ಮುಂಭಾಗ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣ


Team Udayavani, Feb 9, 2023, 9:46 AM IST

helipad

ಪುತ್ತೂರು: ಗ್ರಾಮಾಂತರ ಜಿಲ್ಲಾ ಕೇಂದ್ರದ ಕನಸಿನಲ್ಲಿರುವ ಪುತ್ತೂರಿನ ಬಹು ಬೇಡಿಕೆಯಾಗಿದ್ದ ಶಾಶ್ವತ ಹೆಲಿಪ್ಯಾಡ್‌ನ‌ ಕನಸು ನನಸಾಗುತ್ತಿದೆ. ಹೆಲಿಪ್ಯಾಡ್‌ ನಿರ್ಮಾಣ ಕಾರ್ಯವು ಮೊಟ್ಟೆತ್ತಡ್ಕದಲ್ಲಿ ಅನುಷ್ಠಾನದ ಹಂತದಲ್ಲಿದೆ. ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್‌ ಶಾ ಅವರು ಪ್ರಥಮ ಬಾರಿಗೆ ಪುತ್ತೂರು ಭೇಟಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಹೆಲಿಪ್ಯಾಡ್‌ ನಿರ್ಮಾಣದ ಯೋಜನೆಯು ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣಕ್ಕೆ ಬದಲಾವಣೆಗೊಂಡ ಪರಿಣಾಮ ಸುದೀರ್ಘ‌ ಕಾಲದ  ಬೇಡಿಕೆಯೊಂದು ಈಡೇರಲಿದೆ.

ಎಲ್ಲಿ ಜಾಗ?
ಮೊಟ್ಟೆತ್ತಡ್ಕ ಗೇರು ಸಂಶೋಧನ ನಿರ್ದೇಶನಾಲಯದ ಮುಂಭಾಗ ಸುಮಾರು 2.17 ಎಕ್ರೆ ಜಾಗವನ್ನು ಹೆಲಿಪ್ಯಾಡ್‌ಗೆಂದು ನಿಗದಿ ಮಾಡಲಾಗಿದೆ. ಹೆಲಿಪ್ಯಾಡ್‌ಗೆ ಮೀಸಲಿಡುವ ಮೊದಲು 1986ರಲ್ಲಿ ಗೇರು ಸಂಶೋಧನ ನಿರ್ದೇಶನಾಲಯಕ್ಕೆ ರಾಜ್ಯ ಸರಕಾರ ಈ ಜಾಗವನ್ನು ಮಂಜೂರು ಮಾಡಿತ್ತು. ಇದಕ್ಕೆ ನಿಗದಿಪಡಿಸಿದ್ದ ಮೊತ್ತವನ್ನು ಪಾವತಿಸಿಯೂ ಆಗಿತ್ತು. ಇದಾಗಿ ಕೆಲ ದಿನದಲ್ಲೇ, ಮಂಜೂರು ಮಾಡಿದ ಜಾಗ ಹೆಲಿಪ್ಯಾಡ್‌ಗೆ ನೀಡುವಂತೆ ಜಿಲ್ಲಾಡಳಿತ ತಿಳಿಸಿತು. ಈ ಹಿನ್ನೆಲೆಯಲ್ಲಿ ಡಿಸಿಆರ್‌ ನಿರ್ದೇಶಕ ಹಾಗೂ ಜಿಲ್ಲಾಧಿಕಾರಿ ನಡುವೆ ಒಪ್ಪಂದ ನಡೆಸಲಾಯಿತು. ಪರ್ಯಾಯ ಜಾಗ ನೀಡುವ ಷರತ್ತಿನ ಮೇಲೆ ಡಿಸಿಆರ್‌, ಜಿಲ್ಲಾಧಿಕಾರಿ ಮಾತಿಗೆ ಒಪ್ಪಿಗೆಯನ್ನು ಸೂಚಿಸಿತು. ಅದಾದ ಬಳಿಕ ಸಹಾಯಕ ಆಯುಕ್ತರು ಹೆಲಿಪ್ಯಾಡ್‌ಗೆ ಈ ಜಾಗ ಕಾದಿರಿಸಿ ಪ್ರಕ್ರಿಯೆ ನಡೆಸಲಾಯಿತು. ಆದರೆ ಡಿಸಿಆರ್‌ಗೆ ಪರ್ಯಾಯ ಜಾಗ ಒದಗಿಸಿದೆಯೇ ಅನ್ನುವ ಬಗ್ಗೆ ಯಾವುದೇ ಇಲಾಖೆ ಕೂಡ ಸ್ಪಷ್ಟ ಉತ್ತರ ನೀಡಿಲ್ಲ.

ಶಾಶ್ವತ ಹೆಲಿಪ್ಯಾಡ್‌ ಪುತ್ತೂರಿಗೆ ಶಾಶ್ವತ ಹೆಲಿಪ್ಯಾಡ್‌ ಬೇಕು ಎನ್ನುವ ಬೇಡಿಕೆಗೆ ಪೂರಕವಾಗಿ ಮೊಟ್ಟೆತ್ತಡ್ಕದಲ್ಲಿ ಹೆಲಿಪ್ಯಾಡ್‌ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಗೃಹ ಸಚಿವ ಅಮಿತ್‌ ಶಾ ಅವರು ಹೆಲಿಕಾಪ್ಟರ್‌ ಮೂಲಕ ಆಗಮಿಸಿ ಹೊಸ ಹೆಲಿಪ್ಯಾಡ್‌ನ‌ಲ್ಲಿ ಇಳಿದು ಪುತ್ತೂರು ನಗರಕ್ಕೆ ಬರಲಿದ್ದಾರೆ.

-ಸಂಜೀವ ಮಠಂದೂರು,ಶಾಸಕರು, ಪುತ್ತೂರು

2.17 ಎಕ್ರೆ ಜಾಗ ಮೊಟ್ಟೆತ್ತಡ್ಕದಲ್ಲಿ 2.17 ಎಕ್ರೆ ಜಾಗವು ಹೆಲಿಪ್ಯಾಡ್‌ ನಿರ್ಮಾಣಕ್ಕೆ ಕಾದಿರಿಸಲಾಗಿತ್ತು. ಈ ಹಿಂದೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಾಗ ಕಾದಿರಿಸುವ ಕಾರ್ಯ ಆಗಿತ್ತು.
-ರಮೇಶ್‌ ಬಾಬು, ತಹಶೀಲ್ದಾರ್‌, ಪುತ್ತೂರು

ಕಾಮಗಾರಿಗೆ ವೇಗ ಲೋಕೋಪಯೋಗಿ ಇಲಾಖೆಯ ನೇತೃತ್ವದಲ್ಲಿ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ತುರ್ತು ಕಾಮಗಾರಿ ಆಗಿರುವ ಕಾರಣ ಒಟ್ಟು ವೆಚ್ಚ ನಿರ್ಧರಿಸಿಲ್ಲ. ಗೃಹ ಸಚಿವರು ಈ ಹೆಲಿಪ್ಯಾಡ್‌ ಮೂಲಕ ಆಗಮಿಸಲಿರುವುದರಿಂದ ಕಾಮಗಾರಿಗೆ ವೇಗ ನೀಡಲಾಗಿದೆ.
-ಬಿ.ರಾಜರಾಮ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಪುತ್ತೂರು

ಹೆಲಿಪ್ಯಾಡ್‌ ಏಕೆ ಬೇಕು?
ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಬೇಕು ಎನ್ನುವ ಪ್ರಸ್ತಾವ ಸರಕಾರದ ಹಂತದಲ್ಲಿದೆ. ವಿವಿಧ ಕಾರಣಗಳಿಗಾಗಿ ರಾಜ್ಯ, ರಾಷ್ಟ್ರಮಟ್ಟದ ನಾಯಕರು ಪುತ್ತೂರಿಗೆ ಭೇಟಿ ನೀಡುತ್ತಿದ್ದು ಗಣ್ಯರು ಹೆಲಿಕಾಪ್ಟರ್‌ ಅನ್ನು ಅವಲಂಬಿಸುತ್ತಿದ್ದಾರೆ. ಈಗ ಪ್ರತೀ ಬಾರಿಯೂ ಫಿಲೋಮಿನಾ, ವಿವೇಕಾನಂದ ಕಾಲೇಜಿನ ಆಟದ ಮೈದಾನವನ್ನು ಬಳಸಿಕೊಳ್ಳುವ ಅನಿವಾರ್ಯ ಉಂಟಾಗುತ್ತದೆ. ಹೀಗಾಗಿ, ಶಾಶ್ವತ ಹೆಲಿಪ್ಯಾಡ್‌ಗೆ ಬೇಡಿಕೆ ಕೇಳಿ ಬಂದಿತ್ತು.

ನಿರ್ಮಾಣ ಕಾರ್ಯ ಬಿರುಸು

ಮುಕ್ರಂಪಾಡಿಯಿಂದ ಕೇವಲ ಒಂದು ಕಿ.ಮೀ. ದೂರದಲ್ಲಿ ಈ ಹೆಲಿಪ್ಯಾಡ್‌ ಜಾಗ ಇದೆ. ಫೆ. 11ರಂದು ಅಮಿತ್‌ ಶಾ ಪುತ್ತೂರು ಭೇಟಿಗೆ ದಿನ ನಿಗದಿ ಪಡಿಸಲಾಗಿದೆ. ಗೃಹ ಸಚಿವರ ಭೇಟಿಗಾಗಿ ತಾತ್ಕಾಲಿಕ ನೆಲೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಆಟದ ಮೈದಾನದಲ್ಲಿ ಹೆಲಿಪ್ಯಾಡ್‌ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಶಾಸಕರ ಸೂಚನೆ ಮೇರೆಗೆ ಸರಕಾರದಿಂದ ಹೆಲಿಪ್ಯಾಡ್‌ಗೆ ಕಾದಿರಿಸಿದ ಸ್ಥಳದಲ್ಲಿ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ತುರ್ತು ಕೆಲಸ ಆಗಿರುವ ಕಾರಣ ಒಟ್ಟು ಖರ್ಚು ಇನ್ನಷ್ಟೇ ಅಂತಿಮಗೊಳ್ಳಲಿದೆ. ಪಿಡಬ್ಲ್ಯುಡಿಯು ಇದರ ಕಾಮಗಾರಿಯ ನಿರ್ವಹಣೆ ಹೊಣೆ ಹೊತ್ತಿದೆ. ಕಾರು ಕಲಿಕೆಗೆ, ಆಟದ ಮೈದಾನವಾಗಿ, ವೇದಿಕೆಯಾಗಿ ಬಳಕೆಯಾಗುತ್ತಿದ್ದ ಜಾಗ ಇನ್ನೂ ಮುಂದೆ ಹೆಲಿಪ್ಯಾಡ್‌ ಆಗಿ ಗುರುತಿಸಿಕೊಳ್ಳಲಿದೆ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.