ಕಾಲಹರಣಕ್ಕೆ ಕಡಿವಾಣ; ಸರಕಾರಿ ಸಿಬಂದಿ ಕಚೇರಿ ಬಿಡಲು ಅನುಮತಿ ಕಡ್ಡಾಯ
Team Udayavani, Feb 9, 2020, 6:45 AM IST
ಬೆಂಗಳೂರು: ಸರಕಾರಿ ನೌಕರರು ಕೆಲಸದ ವೇಳೆಯಲ್ಲಿ ಕಾಲಹರಣ ಮಾಡು ವುದನ್ನು ನಿಯಂತ್ರಿಸಲು ಆಡಳಿತ ಮತ್ತು ಸಿಬಂದಿ ಸುಧಾರಣೆ ಇಲಾಖೆ ಮುಂದಾಗಿದೆ.
ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಸಹಿತ ಜಿಲ್ಲಾ, ತಾಲೂಕು ಸರಕಾರಿ ಕಚೇರಿಗಳಲ್ಲಿ ಅಧಿ ಕಾರಿಗಳು ಮತ್ತು ಸಿಬಂದಿ ತಮ್ಮ ಸ್ಥಾನಗಳಲ್ಲಿ ಇರುವುದಿಲ್ಲ. ಟೀ, ಕಾಫಿ ಎಂದು ಕೆಲಸದ ವೇಳೆಯಲ್ಲಿ ಹೊರಗೆ ಹೋಗಿ ಅನಗತ್ಯ ಕಾಲಹರಣ ಮಾಡುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕಚೇರಿಗಳಲ್ಲಿ ಅಧಿಕಾರಿ ಅಥವಾ ಸಿಬಂದಿ ಹೊರಗೆ ಹೋಗಬೇಕಾದ ಸಂದರ್ಭ ಮೇಲಧಿ ಕಾರಿಗಳ ಪೂರ್ವಾನುಮತಿ ಪಡೆಯಬೇಕು. ಹೊರಗೆ ಹೋಗುವ ವೇಳೆ ಉದ್ದೇಶ ಮತ್ತು ಹಿಂದಿ ರುಗಿ ಬಂದ ವೇಳೆ ಸಹಿ ಮತ್ತು ದಿನಾಂಕದೊಂದಿಗೆ ಕಚೇರಿ ಪುಸ್ತಕದಲ್ಲಿ ನಮೂದು ಮಾಡಬೇಕು.
ಚಲನವಲನ ವಹಿಯಲ್ಲಿ ನಮೂದಿ ಸದೆ ಹೋದ ಅಧಿಕಾರಿ ಅಥವಾ ನೌಕರರು ಕಚೇರಿಯಿಂದ ಅನಧಿಕೃತ ಗೈರು ಹಾಜ ರಾದಂತೆ ಭಾವಿಸಲಾಗುವುದು. ಜತೆಗೆ ಕ್ರಮ ಕೈಗೊಳ್ಳಲಾಗುವುದು. ಮೇಲಧಿ ಕಾರಿಗಳು ಈ ಬಗ್ಗೆ ನಿಗಾ ವಹಿಸ ಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಮೇಲಧಿಕಾರಿಗಳು ಸಹ ವಿರಾಮ ವೇಳೆ ಹೊರತುಪಡಿಸಿ ಇತರ ವೇಳೆಯಲ್ಲಿ ಅಧಿಕಾರಿ, ಸಿಬಂದಿ ಅವರ ಸ್ಥಾನದಲ್ಲಿ ಕುಳಿತು ಕೆಲಸ ಮಾಡದಿರುವುದು ಗಮನಿಸಿದಾಗ ಸಂಬಂಧಪಟ್ಟ ಉನ್ನತ ಅಧಿಕಾರಿ ಗಮನಕ್ಕೆ ತರಬೇಕು. ಚಲನವಲನ ವಹಿಯಲ್ಲಿ ಬರೆಯದೆ, ಪೂರ್ವಾನುಮತಿ ಪಡೆಯದೆ ಹೋಗುವವರ ವಿರುದ್ಧ ನಿಗಾ ವಹಿಸಬೇಕು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!