ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್ ಲೀಟರ್ಗೆ 111.09 ರೂ.
ಗುರುವಾರವೂ ತೈಲ ದರ 35 ಪೈಸೆ ಹೆಚ್ಚಳವಾಗಿತ್ತು
Team Udayavani, Oct 16, 2021, 12:47 PM IST
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರುತ್ತಿದ್ದು, ಶುಕ್ರವಾರ ಮತ್ತೆ ತಲಾ 35 ಪೈಸೆ ಹೆಚ್ಚಳವಾಗಿದೆ. ಮುಂಬೈನಲ್ಲಿ ಲೀ. ಪೆಟ್ರೋಲ್ ಗೆ 111.09 ರೂ., ಡೀಸೆಲ್ಗೆ 101.78 ರೂ. ಆಗಿದೆ. ಬೆಂಗಳೂರಿನಲ್ಲಿ ಲೀ. ಪೆಟ್ರೋಲ್ಗೆ 108.80 ರೂ. ಆಗಿದ್ದು, ಡೀಸೆ ಲ್ಗೆ 99.63 ರೂ. ಆಗಿದೆ.
ಇದನ್ನೂ ಓದಿ:ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?
ಗುರುವಾರವೂ ತೈಲ ದರ 35 ಪೈಸೆ ಹೆಚ್ಚಳವಾಗಿತ್ತು. ಈ ಮೂಲಕ ಸೆಪ್ಟೆಂಬರ್ ಕೊನೆಯ ವಾರದ ಬಳಿಕ ಈವರೆಗೆ ಪೆಟ್ರೋಲ್ ದರದಲ್ಲಿ ಇದು 14ನೇ ಬಾರಿಯ ಏರಿಕೆಯಾಗಿದ್ದರೆ, ಡೀಸೆಲ್ ದರ 17 ಬಾರಿ ಏರಿಕೆ ಕಂಡಂತಾಗಿದೆ.
ಪಟಾಕಿ ನಿಷೇಧ ನಿರ್ಧಾರ ಮರು ಪರಿಶೀಲಿಸಿ: ಸ್ಟಾಲಿನ್
ಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿ ದೆಹಲಿ, ಒಡಿಶಾ, ರಾಜಸ್ಥಾನ ಹಾಗೂ ಹರ್ಯಾಣ ಸರ್ಕಾರಗಳು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ತಮಿಳು ನಾಡು ಸಿಎಂ ಎಂ.ಕೆ. ಸ್ಟಾಲಿನ್ ಮನವಿ ಮಾಡಿದ್ದಾರೆ.
ಪಟಾಕಿಗಳಿಗೆ ಸಂಪೂರ್ಣ ನಿಷೇಧ ಸಮಂಜಸವಲ್ಲ. ಇದು ಪಟಾಕಿ ತಯಾರಿಕಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ರಾಜ್ಯದ 8 ಲಕ್ಷ ಕಾರ್ಮಿಕರ ಬದುಕಿನ ಪ್ರಶ್ನೆ. ಪಟಾಕಿಗೆ ನಿಷೇಧ ಹೇರಿ ದರೆ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದೂ ಸ್ಟಾಲಿನ್ ಹೇಳಿದ್ದರೆ. ನಾಲ್ಕೂ ರಾಜ್ಯ ಗಳು ಹೊರಡಿಸಿರುವ ಪಟಾಕಿ ನಿಷೇಧ ಆದೇಶದ ಪ್ರತಿಯನ್ನು ಮಾಧ್ಯಮಗಳ ಮುಂದಿಟ್ಟು ಮಾತ ನಾಡಿದ ಅವರು, ಕೊರೊನಾದಿಂದಾಗಿ ಸಣ್ಣ ಕೈಗಾರಿಕೆ, ಗುಡಿಕೈಗಾರಿಕೆ ನಶಿಸಿ ಹೋಗಿದೆ. ನೀವು
ವಾಯುಮಾಲಿನ್ಯವನ್ನು ಗಮನದಲ್ಲಿಟ್ಟು ಕೊಂಡು ಈ ನಿರ್ಧಾರ ಕೈಗೊಂಡಿದ್ದೀರಿ ಎಂಬುದು ನನಗೆ ಅರ್ಥವಾಗುತ್ತದೆ. ಆದರೆ, ಬೇರೆ ರಾಜ್ಯಗಳೂ ನಿಮ್ಮಂತೆಯೇ ನಿರ್ಧಾರ ಕೈಗೊಂಡರೆ, ಇಡೀ ಪಟಾಕಿ ಉದ್ದಿಮೆಯೇ ಸ್ಥಗಿತಗೊಳ್ಳ ತ್ತದೆ. ಹೀಗಾಗಿ ದಯ ವಿಟ್ಟು ನಿಮ್ಮ ನಿರ್ಧಾರ ಮರು ಪರಿಶೀಲಿಸಿ ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ