“ಪೆಗಾಸಸ್” ಬಳಸಿ ಭಾರತದ ಪತ್ರಕರ್ತರು, ರಾಜಕಾರಣಿಗಳ ಫೋನ್ ಮೇಲೆ ನಿಗಾ!
ದೂರವಾಣಿ ಕದ್ದಾಲಿಕೆ ಮಾಡುವ ಅತ್ಯಾಧುನಿಕ ಗೂಡಚರ್ಯೆ ಉಪಕರಣಗಳನ್ನು ಮಾರಾಟ ಮಾಡಿತ್ತು.
Team Udayavani, Jul 19, 2021, 10:00 AM IST
ಹೊಸದಿಲ್ಲಿ: ಜಗತ್ತಿನ ಪ್ರಮುಖ ಪತ್ರ ಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡುವ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ. ಈ ಬಗ್ಗೆ “ದ ಗಾರ್ಡಿಯನ್’ ಮತ್ತು ಇತರ 16 ಮಾಧ್ಯಮ ಸಂಸ್ಥೆಗಳು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾಗಿದೆ.
ಇಸ್ರೇಲ್ನ ಗುಪ್ತಚರ ಸಂಸ್ಥೆ ಪೆಗಸಸ್ ಹ್ಯಾಕ್ ಮಾಡುವ ಮೂಲಕ ಇಂಥ ಪ್ರಯತ್ನ ನಡೆಸಲಾಗಿದೆ. ಭಾರತದಲ್ಲಿ ಕೂಡ ಸುಮಾರು 40 ಪತ್ರಕರ್ತರ ಮೇಲೆ ನಿಗಾ ಇರಿಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಭಾರತ ಸರಕಾರ ಸೇರಿದಂತೆ ಜಗತ್ತಿನ ಹತ್ತು ರಾಷ್ಟ್ರಗಳ ಸರಕಾರಗಳಿಗಾಗಿ ಈ ನಿಗಾ ಇರಿಸಲಾಗಿತ್ತು ಎಂದು ವರದಿಯಲ್ಲಿ ಹೇಳಿಕೊಳ್ಳಲಾಗಿದೆ. ಸುಮಾರು 50 ಸಾವಿರ ಫೋನ್ ನಂಬರ್ಗಳ ಮೇಲೆ ನಿಗಾ ಇರಿಸಲಾಗಿತ್ತು ಎಂದು “ದ ಗಾರ್ಡಿಯನ್’ ತನ್ನ ವರದಿಯಲ್ಲಿ ಹೇಳಿಕೊಂಡಿದೆ.
“ಕ್ಯಾಂಡಿರು’ ಎಂಬ ಹೆಸರಿನ ಸಂಸ್ಥೆ ಏಷ್ಯಾ, ಮಧ್ಯಪ್ರಾಚ್ಯ ದೇಶಗಳಲ್ಲಿರುವ ಸರಕಾರಗಳಿಗೆ ದೂರವಾಣಿ ಕದ್ದಾಲಿಕೆ ಮಾಡುವ ಅತ್ಯಾಧುನಿಕ ಗೂಡಚರ್ಯೆ ಉಪಕರಣಗಳನ್ನು ಮಾರಾಟ ಮಾಡಿತ್ತು.
ಬಿಜೆಪಿಯ ರಾಜ್ಯಸಭಾ ಸದಸ್ಯ ಡಾ|ಸುಬ್ರಮಣಿಯನ್ ಸ್ವಾಮಿ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿ, ಮೋದಿ ಸಚಿವ ಸಂಪುಟದ ಸದಸ್ಯರು, ಆರ್ಎಸ್ಎಸ್ ಮುಖಂಡರು, ಸುಪ್ರೀಂಕೋರ್ಟ್ನ ನ್ಯಾಯ ಮೂರ್ತಿಗಳು, ಪತ್ರಕರ್ತರ ಫೋನ್ ಕದ್ದಾಲಿಕೆ ನಡೆಸಲಾಗುತ್ತಿದ್ದ ಬಗ್ಗೆ ವಾಷಿಂಗ್ಟನ್ ಪೋಸ್ಟ್, ಲಂಡನ್ ಗಾರ್ಡಿಯನ್ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಲಿದೆ. ನನಗೆ ಪಟ್ಟಿ ಸಿಕ್ಕಿದರೆ ಪ್ರಕಟಿಸುವೆ ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ