ದೋಸ್ತಿಗಳ ನಡುವೆ ಕದ್ದಾಲಿಕೆ ಕಂದಕ
ಜೆಡಿಎಸ್ ಪಕ್ಷಕ್ಕೆ ಮುಜುಗರ ತಂದ ಕಾಂಗ್ರೆಸ್ ನಡೆ
Team Udayavani, Aug 17, 2019, 6:00 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೊದಲೇ ಸೃಷ್ಟಿಯಾಗಿರುವ ಕಂದಕವನ್ನು ಈಗ ದೂರವಾಣಿ ಕದ್ದಾಲಿಕೆ ವಿಚಾರ ಮತ್ತಷ್ಟು ಹೆಚ್ಚುವಂತೆ ಮಾಡಿದ್ದು, “ಮಿತ್ರ’ರ ನಡುವೆ ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಉಪ ಮುಖ್ಯ ಮಂತ್ರಿ ಡಾ| ಜಿ. ಪರಮೇಶ್ವರ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸಹಿತ ಕಾಂಗ್ರೆಸ್ ನಾಯಕರೇ ಪ್ರಕರಣದ ತನಿಖೆಗೆ ಒತ್ತಾಯಿಸುತ್ತಿರುವುದರಿಂದ ಒಂದು ರೀತಿಯಲ್ಲಿ ಸಮ್ಮಿಶ್ರ ಸರಕಾರದ ನಾಯಕತ್ವ ವಹಿಸಿದ್ದ ಜೆಡಿಎಸ್ಗೆ ಇರಿಸು ಮುರಿಸು ಉಂಟು ಮಾಡಿದೆ.
ಎಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಪಕ್ಷದ ನಾಯಕರ ಬಗ್ಗೆಯೇ ವಿಶ್ವಾಸ ಇಲ್ಲದೆ ದೂರವಾಣಿ ಕದ್ದಾಲಿಕೆ ಮಾಡಿಸಿದ್ದರಾ ಎಂಬ ಅನುಮಾನ ಕಾಂಗ್ರೆಸ್ ನಾಯಕರಿಗೆ ಇದೆ. ಹೀಗಾಗಿಯೇ ತನಿಖೆ ಆಗಲಿ ಎಂದು ಆಗ್ರಹಿಸುತ್ತಿದ್ದಾರೆ. ಪ್ರಮುಖವಾಗಿ ಸಿದ್ದರಾಮಯ್ಯ ಅವರು ತನಿಖೆಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.
ಈಗ ಪ್ರಕರಣದ ಚೆಂಡು ರಾಜ್ಯ ಸರಕಾರದ ಅಂಗಳದಲ್ಲಿ ಬಿದ್ದಂತಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ ಹರಿದಿದೆ.
ಆದರೆ ಸರಕಾರದ ಮೂಲಗಳ ಪ್ರಕಾರ ಪ್ರಕರಣ ಇಲ್ಲಿಗೆ ಮುಕ್ತಾಯ ಮಾಡಲು ತೀರ್ಮಾನ ಮಾಡಲಾಗಿದೆ. ತೀರಾ ಒತ್ತಾಯ ಬಂದರೆ ಮಾತ್ರ ತನಿಖೆಗೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಡಿಕೆಶಿ ನಿರಾಕರಣೆ
ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದ ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದ ನಾಯಕರ ಹೇಳಿಕೆಗಳಿಗೆ ವಿರುದ್ಧವಾಗಿ ಹಿಂದಿನ ಸರಕಾರದಲ್ಲಿ ದೂರವಾಣಿ ಕದ್ದಾಲಿಕೆ ಆಗಿಲ್ಲ. ಬಿಜೆಪಿಯವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಹಿಂದೆ ಸರಿದ ಆಲೋಕ್
ದೂರವಾಣಿ ಕದ್ದಾಲಿಕೆ ಪ್ರಕರಣ ಬಹಿರಂಗಗೊಳ್ಳಲು ಕಾರಣವಾದ ವಿಚಾರದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತನಿಖೆಗೆ ಆದೇಶಿಸಿದ್ದರು. ಆದರೆ ತನಿಖೆಗೆ ನೇಮಕಗೊಂಡಿದ್ದ ಅಧಿಕಾರಿ ಹಿಂದೆ ಸರಿದಿದ್ದರು. ಇದರ ನಡುವೆ ಪೊಲೀಸ್ ಆಯುಕ್ತರ ಸ್ಥಾನದಿಂದ ತಮ್ಮನ್ನು ವರ್ಗಾವಣೆ ಮಾಡಿದ ಬಗ್ಗೆ ಸಿಎಟಿಗೆ ಮೊರೆ ಹೋಗಿದ್ದ ಆಲೋಕ್ ಕುಮಾರ್ ಅವರು ಅರ್ಜಿ ವಾಪಸ್ ಪಡೆದಿದ್ದಾರೆ. ಇದೆಲ್ಲವೂ ಪ್ರಕರಣ ತಣ್ಣಗಾಗಿಸುವ ಪ್ರಯತ್ನ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು