ಸಿಹಿಗೂ ಸೈ, ಸಾಂಬಾರಿಗೂ ಜೈ; ಇದು ಪೈನಾಪಲ್ ಪಾಕ ಲೋಕ!


ಶ್ರೀರಾಮ್ ನಾಯಕ್, Aug 13, 2020, 7:00 PM IST

pineapple–750

ಪೈನಾಪಲ್(ಅನಾನಸ್)ಕೇವಲ ಹಣ್ಣಿನ ರೂಪದಲ್ಲಿ ಅಥವಾ ಪಾನೀಯ ರೂಪದಲ್ಲಿ ಮಾತ್ರ ಉಪಯೋಗಿಸುತ್ತಾರೆ. ಅದರಿಂದ ವಿಶೇಷವಾದ ಅಡುಗೆ ಮತ್ತು ತಿಂಡಿ ಮಾಡಬಹುದೆಂದು ಅನೇಕರಿಗೆ ತಿಳಿದಿರಲಾರದು. ಹೇರಳವಾದ ಮಿಟಮಿನ್ ಸಿ, ಕಬ್ಬಿಣಾಂಶ, ನಾರಿನಂಶ ಹಾಗೂ ಕಡಿಮೆ ಕೊಬ್ಬಿನಾಂಶ ಹೊಂದಿರುವ ಪೈನಾಪಲ್ ಹಣ್ಣಿನಿಂದ ಹಲವಾರು ರೆಸಿಪಿ ಮಾಡಬಹುದು. ಕೇವಲ ಸಿಹಿಯೊಂದೇ ಅಲ್ಲ, ಅನ್ನಕ್ಕೆ ಮತ್ತು ಚಪಾತಿಗೆ ಹೊಂದುವ ರುಚಿಯಾದ ಪದಾರ್ಥಗಳನ್ನು ತಯಾರಿಸ ಬಹುದು. ಹಾಗಿದ್ದರೆ ಇನ್ನೇಕೆ ತಡ ಪೈನಾಪಲ್ ನಿಂದ ತಯಾರಿಸಬಹುದಾದ ಕೆಲವೊಂದು ರೆಸಿಪಿಗಳು ಇಲ್ಲಿವೆ…..

ಪೈನಾಪಲ್ ಕೇಸರಿ ಬಾತ್
ಬೇಕಾಗುವ ಸಾಮಗ್ರಿ
ಬಾಂಬೆ (ಚಿರೋಟಿ)ರವೆ 1ಕಪ್, ಸಕ್ಕರೆ 2 ಕಪ್, ಪೈನಾಪಲ್ ನ ತುರಿ 1ಕಪ್ , ತುಪ್ಪ  4 ಚಮಚ, ಹಾಲು 2 ಕಪ್, ಕೇಸರಿ ಬಣ್ಣ, ಏಲಕ್ಕಿ ಪುಡಿ ಸ್ವಲ್ಪ, ದ್ರಾಕ್ಷಿ, ಗೋಡಂಬಿ ಸ್ವಲ್ಪ.

ತಯಾರಿಸುವ ವಿಧಾನ
ಬಾಂಬೆ ರವೆಯನ್ನು ಸ್ವಲ್ಪ ತುಪ್ಪ ಹಾಕಿ ಪರಿಮಳ ಬರುವವರೆಗೆ ಹುರಿದಿಟ್ಟುಕೊಳ್ಳಿ. 2 ಕಪ್ ಹಾಲನ್ನು ಕುದಿಯಲು ಇಟ್ಟು ಅದಕ್ಕೆ ಕೇಸರಿ ಬಣ್ಣವನ್ನು ಹಾಕಿರಿ. ನಂತರ ಹುರಿದಿಟ್ಟ ರವೆಯನ್ನು ಹಾಕಿ. ರವೆ ಚೆನ್ನಾಗಿ ಬೆಂದ ನಂತರ ಸಕ್ಕರೆ , ಪೈನಾಪಲ್ ತುರಿ, ತುಪ್ಪವನ್ನು ಹಾಕಿರಿ. ಸ್ವಲ್ಪ ಹೊತ್ತು ಮುಚ್ಚಿಟ್ಟು ಸಣ್ಣ ಉರಿಯಲ್ಲಿ ಇಡಿ. ನಂತರ ಏಲಕ್ಕಿ ಪುಡಿ, ತುಪ್ಪದಿಲ್ಲಿ ಹುರಿದ ಗೋಡಂಬಿ, ದ್ರಾಕ್ಷಿಯನ್ನು ಹಾಕಿರಿ. ಬಿಸಿ ಬಿಸಿಯಾದ ಪೈನಾಪಲ್ ಕೇಸರಿ ಬಾತ್ ಸವಿಯಲು ಸಿದ್ಧ.

ಪೈನಾಪಲ್ ಮೆಣಸುಕಾಯಿ
ಬೇಕಾಗುವ ಸಾಮಗ್ರಿ
ಪೈನಾಪಲ್ 1 ಕಪ್, ಬೆಲ್ಲ ಸ್ವಲ್ಪ, ಒಣಮೆಣಸು 6 ರಿಂದ 8, ಉದ್ದಿನ ಬೇಳೆ 3 ಚಮಚ, ದನಿಯಾ 2 ಚಮಚ, ಎಳ್ಳು 3 ಚಮಚ, ಅರಶಿನ ಪುಡಿ ಸ್ವಲ್ಪ, ಹುಣಸೇ ಹುಳಿ ಒಂದು ಲಿಂಬೆ ಗಾತ್ರದಷ್ಟು, ಕರಿಬೇವು, ಎಣ್ಣೆ ಸ್ವಲ್ಪ, ತೆಂಗಿನ ಕಾಯಿ ತುರಿ 2ಕಪ್, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲು ಎಳ್ಳನ್ನು (ಎಣ್ಣೆ ಹಾಕದೇ)ಹುರಿಯಿರಿ. ದನಿಯಾ, ಕರಿಬೇವನ್ನು ಎಣ್ಣೆ ಹಾಕಿ ಹುರಿಯಿರಿ. ಎಲ್ಲವನ್ನು ಮಿಕ್ಸಿಗೆ ಹಾಕಿ ತೆಂಗಿನ ತುರಿಯೊಂದಿಗೆ ರುಬ್ಬಿಕೊಳ್ಳಿ. ಹುಣಸೇ ರಸ, ಉಪ್ಪು, ಅರಶಿನ ಪುಡಿ, ಬೆಲ್ಲವನ್ನು ಒಂದು ಪಾತ್ರೆಯಲ್ಲಿ ಹಾಕಿ ಕುದಿಯಲು ಇಡಿ. ಕುದಿಯುವ ಮಿಶ್ರಣಕ್ಕೆ ಪೈನಾಪಲ್ ಹೋಳುಗಳನ್ನು ಹಾಕಿ ಅನಂತರ ರುಬ್ಬಿಟ್ಟ ಮಸಾಲೆಯನ್ನು ಹಾಕಿ ಕುದಿಸಿ ಇದಕ್ಕೆ ಕರಿಬೇವು ಸೇರಿಸಿದ ಸಾಸಿವೆ ಒಗ್ಗರಣೆ ಹಾಕಿರಿ. ಪೈನಾಪಲ್ ಮೆಣಸಿನಕಾಯಿ ಸವಿಯಲು ಸಿದ್ಧ. ಆನ್ನಕ್ಕೆ ಮಾತ್ರವಲ್ಲದೆ ಚಪಾತಿ, ದೋಸೆಗಳಿಗೂ ಇದು ರುಚಿಕರ.

ಪೈನಾಪಲ್ ಸಾಸಿವೆ
ಬೇಕಾಗುವ ಸಾಮಗ್ರಿ
ಪೈನಾಪಲ್ 1ಕಪ್, ಬೆಲ್ಲ 2 ಚಮಚ, ತೆಂಗಿನ ತುರಿ ಅರ್ಧ ಕಪ್, ಸಾಸಿವೆ 2 ಚಮಚ, ಒಣಮೆಣಸು 3ರಿಂದ 5, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಸಣ್ಣಗೆ ಹೆಚ್ಚಿದ ಪೈನಾಪಲ್ ಹಣ್ಣಿನ ಹೋಳುಗಳಿಗೆ ಬೆಲ್ಲವನ್ನು ಬೆರೆಸಿಡಿ. ತೆಂಗಿನ ತುರಿಗೆ ಸಾಸಿವೆ ಹಾಗೂ ಒಣ ಮೆಣಸನ್ನು ಸೇರಿಸಿ ನುಣ್ಣಗೆ ರುಬ್ಬಿ. ಪೈನಾಪಲ್ ಹೋಳುಗಳಿಗೆ ಸೇರಿಸಿ. ಇದಕ್ಕೆ ರುಚಿಗೆ ಬೇಕಷ್ಟು ಉಪ್ಪು ಮತ್ತು ನೀರು ಸೇರಿಸಿ ಹದ ಮಾಡಿಕೊಳ್ಳಿ. ಈಗ ರುಚಿಕರವಾದ ಪೈನಾಪಲ್ ಸಾಸಿವೆ ಸವಿಯಲು ಸಿದ್ಧ. ಚಪಾತಿ, ಅನ್ನದ ಜೊತೆ ಸೇರಿಸಿ ಸವಿಯಬಹುದು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.