ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ದಕ್ಷಿಣ ಭಾರತದಲ್ಲಿ ಇಂದಿಗೂ ಸ್ನಾನವಾದ ಕೂಡಲೆ ಹೂವನ್ನು ಮುಡಿಯುವ ಸಂಪ್ರದಾಯವಿದೆ.

Team Udayavani, Sep 17, 2021, 3:30 PM IST

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ನಮಗೆಲ್ಲ ತಿಳಿದಿರುವ ಹಾಗೆ ಮಹಿಳೆಯರು ಸೌಂದರ್ಯ ಪ್ರಿಯರು ಅವರು ಒಂದಲ್ಲ ಒಂದು ರೀತಿಯ ಅಲಂಕಾರವನ್ನು ಮಾಡಿಕೊಳ್ಳುವುದರ ಮೂಲಕ ತನ್ನಲ್ಲಿನ ಸೌಂದರ್ಯಕ್ಕೆ ಇನ್ನೂ ಹೆಚ್ಚಿನ ಸೊಬಗನ್ನು ನೀಡುತ್ತಲೇ ಇರುತ್ತಾರೆ. ಅದರಂತಯೇ ಅವರು ಅಲಂಕಾರಕ್ಕಾಗಿ ಬಳಸುವ ಪ್ರತಿಯೊಂದು ಆಭರಣ, ವಸ್ತುಗಳು ತನ್ನದೇ ಆದ ಮಹತ್ವ ಮತ್ತು ಹಿನ್ನಲೆಯನ್ನು ಹೊಂದಿರುವುದನ್ನು ಗಮನಿಸಬಹುದಾಗಿದೆ. ಅದು ಬಳೆ, ಸರ, ಕಿವಿ ಓಲೆ, ಕಾಲ್ಗೆಜ್ಜೆ, ಸೊಂಟದ ಪಟ್ಟಿ, ಮುಗುತ್ತಿ ಹೀಗೆ ಇತ್ಯಾದಿ ಆಭರಣಗಳಿರಬಹುದು.

ಈ ಆಭರಣಗಳ ಜೊತೆ ಹೆಣ್ಣುಮಕ್ಕಳು ತುಂಬಾ ಇಷ್ಟಪಟ್ಟು ತನ್ನ ತಲೆಗೆ ಮುಡಿದುಕೊಳ್ಳುವ ಹೂವು ಮತ್ತು ಹೂವಿನ ಮಾಲೆಗೆ ತನ್ನದೇ ಆದ ಕೆಲವು ಹಿನ್ನಲೆ ಇರುವುದನ್ನು ಗಮನಿಸಬಹುದಾಗಿದೆ. ಈ ಹೂವು ಎನ್ನುವುದು ಎಲ್ಲಿ ಇರುತ್ತದೆಯೊ ಅಲ್ಲಿ ತನ್ನ ಛಾಪನ್ನು ಮೂಡಿಸಿಬಿಡುತ್ತದೆ. ಅದು ಗಿಡದ ಮೇಲೆ ಇರುವ ಹೂವಾಗಿರಬಹುದು, ದೇವರ ಮೇಲೆ ಹಾಕಿದ ಹೂವಾಗಿರಬಹುದು ಅಥವಾ ಜಡೆಗೆ ಮುಡಿದುಕೊಂಡ ಹೂವಾಗಿರಬಹುದು ಅದು ಎಲ್ಲಿ ಇರುತ್ತದೆಯೊ ಅಲ್ಲಿಂದಲೆ ಎಲ್ಲರ ಗಮನವನ್ನು ತನ್ನತ್ತ ಸೆಳೆಯುವ ಹಾಗೆ ಮಾಡಿಬಿಡುತ್ತದೆ. ಹಾಗೆ ಗಮನ ಸೆಳೆಯಲು ಒಂದು ಅದರ ಪರಿಮಳ ಕಾರಣವಾದರೆ ಇನ್ನೊಂದು ಅದರ ಸೌಂದರ್ಯವೇ ಕಾರಣ.

ಈ ಹೂವುಗಳನ್ನು ಹೆಣ್ಣುಮಕ್ಕಳು ತಲೆಯ ಜಡೆಗೆ ಮುಡಿದುಕೊಂಡರೆ ಅವರ ಮುಖದ ಮತ್ತು ಜಡೆಯ ಸೌಂದರ್ಯ ಇನ್ನೂ ಹೆಚ್ಚಾಗುತ್ತದೆ. ಮೊದ ಮೊದಲು ಹೆಣ್ಣು ಮಕ್ಕಳು ಕಡ್ಡಾಯವಾಗಿ ಜಡೆಗಳಿಗೆ ಹೂವುಗಳನ್ನು ಮುಡಿಯಲೇಬೇಕು ಎಂಬ ಸಂಪ್ರದಾಯವಿತ್ತು.ಅದರಲ್ಲಿಯು ಮದುವೆಯಾದ ಹೆಣ್ಣುಮಕ್ಕಳು ಸಾಮಾನ್ಯವಾಗಿ ತಮ್ಮ ಜಡೆಗಳಲ್ಲಿ ಹೂಗಳನ್ನು ಮುಡಿಯುತ್ತಿದ್ದರು. ಈ ಜಡೆಗಳಲ್ಲಿ ಮುಡಿಯುವ ಒಂದೊಂದು ಹೂವು ಒಂದೊಂದರ ಸಂಕೇತ ಎಂದು ಭಾವಿಸುತ್ತಿದ್ದರು. ದಕ್ಷಿಣ ಭಾರತದಲ್ಲಿ ಇಂದಿಗೂ ಸ್ನಾನವಾದ ಕೂಡಲೆ ಹೂವನ್ನು ಮುಡಿಯುವ ಸಂಪ್ರದಾಯವಿದೆ.

ಈ ಹೂವುಗಳಲ್ಲಿ ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಷ್ಟಪಡುವ ಹೂವೆಂದರೆ ಮಲ್ಲಿಗೆ, ಸಂಪಿಗೆ, ಗುಲಾಬಿ, ಜಾಜಿ, ಸೇವಂತಿ, ಡೇರೆ ಇತ್ಯಾದಿಗಳು. ಗುಲಾಬಿಯನ್ನು ಪ್ರೀತಿಯ ಸಂಕೇತವೆಂದು, ಮಲ್ಲಿಗೆಯನ್ನು ಸಮೃದ್ಧಿ ಮತ್ತು ಅದೃಷ್ಟದ ಸಂಕೇತವೆಂದು ಬಳಸಲಾಗುತ್ತದೆ. ಮತ್ತು ಹೂವುಗಳನ್ನು ಹೆಣ್ಣು ಮಕ್ಕಳು ಮುಡಿಯುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುತ್ತದೆ. ಮತ್ತು ಲಕ್ಷ್ಮಿ ದೇವಿ ಸದಾ ಮನೆಯಲ್ಲಿಯೇ ನೆಲೆಸಿರುತ್ತಾಳೆ ಎಂಬ ನಂಬಿಕೆಯು ಇದೆ.

ಆದರೆ ಇಂದು ನೈಸರ್ಗಿಕ ಹೂವುಗಳ ಜೊತೆ ಜೊತೆ ಪ್ಲಾಸ್ಟಿಕ್ ಹೂವುಗಳು ಮಾರಾಟಕ್ಕೆ ಸಿಗುತ್ತವೆ. ನೈಸರ್ಗಿಕವಾದ ಹೂಗಳು ಸಿಗದೆ ಇದ್ದಾಗ ಪ್ಲಾಸ್ಟಿಕ್ ಹೂಗಳನ್ನು ಕೂಡ ತಲೆಗೆ ಮುಡಿದುಕೊಳ್ಳುವವರನ್ನು ನೋಡಬಹುದಾಗಿದೆ. ಅದರಲ್ಲಿಯೂ ತುಂಬಾ ವೈವಿಧ್ಯ ಮಯವಾದ ಹೂವುಗಳನ್ನು ತಯಾರಿಸಲಾಗುತ್ತದೆ. ಆದರೆ ಎಷ್ಟೇ ಚಂದವಾಗಿ ಬಣ್ಣಹಚ್ಚಿ ಏನೇ ತಯಾರಿಸಿದರು ನೈಜ ಹೂವಿನ ಸುವಾಸನೆ ಪ್ಲಾಸ್ಟಿಕ್ ಹೂವಿನಲ್ಲಿ ಸಿಗಲಾರದು. ನಿಸರ್ಗದಿಂದ ಪಡೆದ ತಾಜಾ ಹೂವನ್ನು ಮೂಡಿದಾಗ ಸಿಗುವ ಖುಷಿ ಪ್ಲಾಸ್ಟಿಕ್ ಹೂವಿನಿಂದ ಸಿಗಲಾರದು.

*ಮಧುರಾ ಎಲ್ ಭಟ್ಟ
ಎಸ್ ಡಿ ಎಮ್ ಸ್ನಾತಕೋತ್ತರ ಕೇಂದ್ರ ಉಜಿರೆ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.