ಪಿರಿಯಾಪಟ್ಟಣ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Mar 29, 2022, 7:39 PM IST
ಪಿರಿಯಾಪಟ್ಟಣ: ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ಕೇರಳ ಮೂಲದ ಕಾರು ಹಾಗೂ ಸ್ಥಳೀಯ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಷಡಕ್ಷರಿಸ್ವಾಮಿ ಅಲಿಯಾಸ್ ಮಂಜು (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ಮೇಲೂರು ಗ್ರಾಮದವರಾಗಿದ್ದು, ಕೆಲಸದ ನಿಮಿತ್ತ ಪಿರಿಯಾಪಟ್ಟಣಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಹಿಂದಿರುಗುವಾಗ ಸೀಗೂರು ಗ್ರಾಮದ ಬಳಿ ಬೆಟ್ಟದಪುರ ಕಡೆಯಿಂದ ಪಿರಿಯಾಪಟ್ಟಣಕ್ಕೆ ಹೋಗುತ್ತಿದ್ದ ಕೇರಳ ಮೂಲದ ಕಾರು ಬೈಕಿಗೆ ಮುಖಾಮುಖಿ ಡಿಕ್ಕಿಯಾಗಿದೆ, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ಕೇರಳ ಮೂಲದ ಕಾರಿನಲ್ಲಿ 5 ಜನ ವಿದ್ಯಾರ್ಥಿಗಳು ಬರುತ್ತಿದ್ದು, ಅತಿವೇಗವಾಗಿ ಅಜಾಗರೂಕತೆಯಿಂದ ಬಂದ ಕಾರಣದಿಂದ ಈ ಅಪಘಾತವಾಗಿದೆ ಎಂದು ಮೃತರ ಪತ್ನಿ ಮಣಿ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಅಪಘಾತವಾದ ಕಾರು ಹಾಗೂ ಚಾಲಕ ಮೊಹಮ್ಮದ್ ಫೈಜ್ ಹಾಗೂ ಅವರ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡಿದ ಸಿದ್ದರಾಮಯ್ಯ