ಕೋವಿಡ್ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ
ಕರ್ನಾಟಕದಲ್ಲೂ ಚಾಲನೆ; ಕೇರಳದಲ್ಲಿ ಈಗಾಗಲೇ ಯಶಸ್ವಿಯಾಗಿರುವ ವಿಧಾನ
Team Udayavani, Apr 26, 2020, 6:15 AM IST
ಬೆಂಗಳೂರು: ಕೋವಿಡ್ -19 ಸೋಂಕು ಪೀಡಿತರಿಗೆ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾ ಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಈ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಚಿವ ಡಾ| ಸುಧಾಕರ್, ರಾಜ್ಯಕ್ಕೆ ಇದು ಐತಿಹಾಸಿಕ ಕ್ಷಣ. ಕೋವಿಡ್ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ ಪರಿ ಣಾಮಕಾರಿಯಾಗುವುದು ಕಂಡುಬಂದಿದೆ.
ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕುಪೀಡಿತರು ಗುಣ ಮುಖರಾದರೆ ಅತ್ಯಂತ ಸಂತೋಷ ಎಂದರು.
ಇದರ ಕ್ಲಿನಿಕಲ್ ಪ್ರಯೋಗ ಆರಂಭವಾಗಿದೆ. ಕೋವಿಡ್ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ನೀಡುವ ಮೂಲಕ ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸಚಿವರು ಹೇಳಿದರು.
ಕೋವಿಡ್ -19ದಿಂದ ಗುಣ ಹೊಂದಿರುವವರು ಚಿಕಿತ್ಸೆಗೆ ಸಹಕರಿಸಬೇಕು. ಇಂಥವರು 2 ವಾರಗಳ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಪ್ಲಾಸ್ಮಾ ನೆರವು ನೀಡಬಹುದು ಎಂದು ಸಚಿವರು ಮನವಿ ಮಾಡಿಕೊಂಡರು.
ಕೇರಳದಲ್ಲಿ ಯಶಸ್ವಿ
ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಅನುಮತಿ ನೀಡುವಂತೆ ಕೋರಿ ಕೇಂದ್ರಕ್ಕೆ ಕರ್ನಾಟಕ ಸರಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವೈದ್ಯ ಡಾ| ವಿಶಾಲ್ ರಾವ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ಒದಗಿಸಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆ ಎಬೋಲಾ ಮತ್ತು ಸ್ವೆ„ನ್ ಫ್ಲೂನಂತಹ ಕಾಯಿಲೆಗಳ ವಿರುದ್ಧ ಯಶಸ್ವಿಯಾಗಿ ಉಪಯೋಗಿಸಲಾಗಿದೆ.
ಏನಿದು ಪ್ಲಾಸ್ಮಾ ಥೆರಪಿ?
ಈಗಾಗಲೇ ಕೋವಿಡ್ -19 ತಗುಲಿ ಗುಣಮುಖರಾಗಿರುವ ವ್ಯಕ್ತಿಗಳ ರಕ್ತದಲ್ಲಿ ಉತ್ಪತ್ತಿ ಯಾಗಿರುವ ಪ್ರತಿಕಾಯ ( ಆ್ಯಂಟಿ ಬಾಡಿ)ಗಳನ್ನು ತೆಗೆದು, ಅವನ್ನು ಹಾಲಿ ಸೋಂಕಿಗೀಡಾಗಿರುವ ರೋಗಿಯ ರಕ್ತಕ್ಕೆ ನೀಡುವುದು. ರೋಗಿಯ ದೇಹ ಸೇರಿದ ಈ ಪ್ರತಿಕಾಯಗಳು ಅಲ್ಲಿ ಹೊಸ ಪ್ರತಿಕಾಯ ಉತ್ಪಾದನೆಯನ್ನು ಹೆಚ್ಚಿಸಿ ಕೋವಿಡ್ -19 ನಿವಾರಣೆಯಲ್ಲಿ ಸಹಕರಿಸುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್