ಗುಜರಾತ್: ಬಾಲ್ಯದ ನೆನಪು- ಗುರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಗುಜರಾತ್ ಭೇಟಿಯಲ್ಲಿ ಗುಜರಾತ್ ಗೌರವ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Team Udayavani, Jun 10, 2022, 5:44 PM IST
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಜೂನ್ 10) ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗಾಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ವಡ್ನಾಗರ್ ನ ನವಸಾರಿಯಲ್ಲಿರುವ ತಮ್ಮ ಪ್ರಾಥಮಿಕ ಶಾಲೆಯ ನಿವೃತ್ತ ಗುರುಗಳನ್ನು ಭೇಟಿಯಾಗಿ ಕುಶಲೋಪರಿ ನಡೆಸಿರುವ ಫೋಟೊ ಇದಾಗಿದೆ.
ಇದನ್ನೂ ಓದಿ:ಪ್ರವಾದಿ ವಿರುದ್ಧ ಹೇಳಿಕೆ ಖಂಡಿಸಿ ದೇಶದೆಲ್ಲೆಡೆ ಪ್ರತಿಭಟನೆ: ಯುಪಿಯಲ್ಲಿ ಹಿಂಸಾಚಾರ
ತಮಗೆ ಬಾಲ್ಯದಲ್ಲಿ ವಿದ್ಯಾಭ್ಯಾಸ ನೀಡಿದ್ದ ಗುರುಗಳನ್ನು ಪ್ರಧಾನಿ ಮೋದಿ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿ, ಆಶೀರ್ವಾದ ಪಡೆದಿದ್ದಾರೆ. ನಿವೃತ್ತ ಶಿಕ್ಷಕರನ್ನು ಜಗದೀಶ್ ನಾಯಕ್ ಎಂದು ಗುರುತಿಸಲಾಗಿದೆ.
ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಎರಡು ಕೈಗಳನ್ನು ಜೋಡಿಸಿ ತಮ್ಮ ಗುರುಗಳಿಗೆ ನಮಸ್ಕರಿಸಿದ್ದು, ಈ ಸಂದರ್ಭದಲ್ಲಿ ನಿವೃತ್ತ ಗುರುಗಳು ತಮ್ಮ ಶಿಷ್ಯನ ತಲೆಯ ಮೇಲೆ ಕೈಯನ್ನಿಟ್ಟು ಆಶೀರ್ವದಿಸಿರುವುದು ಸೆರೆಯಾಗಿದೆ.
ನಮ್ಮಿಂದ ವಿದ್ಯೆ ಕಲಿತ ವಿದ್ಯಾರ್ಥಿಯೊಬ್ಬ ದೇಶದ ಪ್ರಧಾನಿ ಹುದ್ದೆಗೆ ಏರಿದ್ದು, ಅಷ್ಟೇ ಅಲ್ಲ ಖುದ್ದಾಗಿ ಬಂದು ಭೇಟಿಯಾಗಿ ಆಶೀರ್ವಾದ ಪಡೆದಿರುವುದು ಇದಕ್ಕಿಂತ ದೊಡ್ಡ ಖುಷಿ ಇನ್ನೇನಿದೆ ಎಂದು ನಿವೃತ್ತ ಶಿಕ್ಷಕ ಜಗದೀಶ್ ನಾಯಕ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಗುಜರಾತ್ ಭೇಟಿಯಲ್ಲಿ ಗುಜರಾತ್ ಗೌರವ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನವ್ ಸಾರಿಯ ಬುಡಕಟ್ಟು ಪ್ರದೇಶದ ಖಡ್ವೇಲ್ ನಲ್ಲಿನ ಅಂದಾಜು 3,050 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳ ಶಂಕು ಸ್ಥಾಪನೆ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ