ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ


Team Udayavani, Sep 27, 2021, 6:00 AM IST

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಪ್ರಧಾನಿ ಮೋದಿ ಅವರ ಬಹುನಿರೀಕ್ಷಿತ ಅಮೆರಿಕ ಭೇಟಿ ಮುಕ್ತಾಯ ಗೊಂಡಿದೆ. ಜೋ ಬೈಡೆನ್‌ ಅಮೆರಿಕ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಆ ದೇಶಕ್ಕೆ ಪ್ರವಾಸ ಕೈಗೊಂಡ‌ ಮೋದಿ ಅವರು ತಮ್ಮ ಭೇಟಿಯ ಉದ್ದಕ್ಕೂ ದ್ವಿಪಕ್ಷೀಯ ಸಂಬಂಧ ವೃದ್ಧಿಯ ಜತೆಜತೆಯಲ್ಲಿ ಭಯೋ ತ್ಪಾದನೆಯನ್ನು ಬೇರು ಸಹಿತ ಕಿತ್ತೂಗೆಯಲು ಜಾಗತಿಕ ಸಮುದಾಯ ಕೈಜೋಡಿಸಬೇಕಾದ ಅನಿವಾರ್ಯತೆಯನ್ನು ಬಲವಾಗಿ ಪ್ರತಿಪಾದಿ ಸಿದ್ದಾರೆ. ಈ ಕರೆಗೆ ಇತರ ರಾಷ್ಟ್ರಗಳ ನಾಯಕರು ಕೂಡ ಸಹಮತ ವ್ಯಕ್ತಪಡಿಸಿರುವುದು ಭಾರತದ ನಿಲುವಿಗೆ ಯಶಸ್ಸು ಲಭಿಸಿದಂತಾಗಿದೆ.

ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಜತೆಗಿನ ಭೇಟಿ, ಕ್ವಾಡ್‌ ಶೃಂಗ ಸಭೆ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲೂ ಭಯೋತ್ಪಾದನೆಯ ವಿಚಾರವನ್ನು ಪ್ರಸ್ತಾವಿಸಿ ವಿಶ್ವಶಾಂತಿಯ ದೃಷ್ಟಿಯಿಂದ ಉಗ್ರ ವಾ ದದ ಮೂಲೋತ್ಪಾಟನೆ ಅನಿವಾರ್ಯ ಎಂದು ಘಂಟಾಘೋಷವಾಗಿ ಸಾರಿದರು. ಇದೇ ವೇಳೆ ಭಯೋತ್ಪಾದನೆಗೆ ಉತ್ತೇಜನ, ನೆರವು ನೀಡುತ್ತಿರುವ ಪಾಕಿಸ್ಥಾನ, ತೀವ್ರಗಾಮಿ ನಡೆಯ ಮೂಲಕ ವಿಸ್ತರಣವಾದಿ ನಿಲುವಿಗೆ ಅಂಟಿಕೊಂಡಿರುವ ಚೀನದ ವಿರುದ್ಧವೂ ಪರೋಕ್ಷವಾಗಿ ವಾಗ್ಧಾಳಿ ನಡೆಸಿ ಆ ರಾಷ್ಟ್ರಗಳ ಮುಖಂಡರಿಗೆ ಎಚ್ಚರಿಕೆ ನೀಡಲು ಈ ವೇದಿಕೆಯನ್ನು ಸಮರ್ಥವಾಗಿ ಬಳಸಿಕೊಂಡರು.

ಅಮೆರಿಕ ಅಧ್ಯಕ್ಷ, ಉಪಾಧ್ಯಕ್ಷರೊಂದಿಗಿನ ಭೇಟಿ ವೇಳೆ ಮೋದಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ಭಾಷ್ಯ ಬರೆದಿದ್ದಾರೆ. ಜಾಗತಿಕ ಸಮಸ್ಯೆಗಳು ಮತ್ತವುಗಳ ಪರಿಹಾರೋಪಾಯಗಳ ಬಗೆಗೆ ವಿಸ್ತೃತ ಚರ್ಚೆ ನಡೆಸುವ ಜತೆಯಲ್ಲಿ ಉಭಯ ದೇಶಗಳ ನಡುವಣ ವ್ಯೂಹಾತ್ಮಕ ಸಂಬಂಧ, ವಾಣಿಜ್ಯ, ವ್ಯಾಪಾರ, ತಂತ್ರಜ್ಞಾನ, ರಕ್ಷಣೆ ಸಹಿತ ವಿವಿಧ ವಿಷಯಗಳ ಕುರಿತಂತೆ ಸಮಾಲೋಚನೆ ನಡೆಸಿ ಉಭಯ ದೇಶಗಳ ನಡುವಣ ಸಂಬಂಧವನ್ನು ಇನ್ನಷ್ಟು ವೃದ್ಧಿಸುವ ಭರವಸೆಯನ್ನು ಆ ನಾಯಕರಿಂದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಇದೇ ವೇಳೆ ನಡೆದ ಕ್ವಾಡ್‌ ಶೃಂಗದ ಪಾರ್ಶ್ವದಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮತ್ತು ಜಪಾನ್‌ ಪ್ರಧಾನಿ ಯೊಶಿಹಿಡೆ ಸುಗಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಮೋದಿ ಅವರು ತಂತ್ರಜ್ಞಾನಗಳ ವಿನಿಮಯ, ಉತ್ಪಾದನ ವಲಯ ಮತ್ತು ಕೌಶಲಾಭಿವೃದ್ಧಿಯಲ್ಲಿ ಹೊಸದಾಗಿ ಭಾಗೀದಾರಿಕೆ ಆದಿಯಾಗಿ ವಿವಿಧ ವಿಷಯಗಳ ಬಗೆಗೆ ಚರ್ಚಿಸಿದರು. ಇದೇ ವೇಳೆ ಈ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯವನ್ನು ಬಲಗೊಳಿಸುವ ಇಂಗಿತವನ್ನು ಈ ನಾಯಕರು ವ್ಯಕ್ತಪಡಿಸಿದ್ದು ಭಾರತದ ಮಟ್ಟಿಗೆ ಇದು ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.

ಇವೆಲ್ಲವುಗಳಿಗಿಂತ ಮುಖ್ಯವಾಗಿ ಪ್ರಧಾನಿ ಮೋದಿ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ಜಾಗತಿಕ ಕಂಪನಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಮಾಲೋಚನೆ ವೇಳೆ ಅವರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಅಡೋಬ್‌, ಕ್ವಾಲ್ಕಮ್‌, ಫ‌ಸ್ಟ್‌ ಸೋಲಾರ್‌, ಜನರಲ್‌ ಅಟಾಮಿಕ್ಸ್‌, ಬ್ಲ್ಯಾಕ್‌ಸ್ಟೋನ್‌ ಕಂಪೆನಿಗಳ ಸಿಇಒಗಳ ಜತೆ ಮಹತ್ವದ ಮಾತುಕತೆ ನಡೆಸಿದ ಮೋದಿ ಅವರು ದೇಶದಲ್ಲಿ ನವೋದ್ಯಮಗಳ ಸ್ಥಾಪನೆಗಾಗಿ ಹೂಡಿಕೆ ಮಾಡುವಂತೆ ಮುಕ್ತ ಆಹ್ವಾನ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಉದ್ಯಮ ರಂಗದ ದಿಗ್ಗಜರು ಭಾರತದಲ್ಲಿ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.