ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ಬಂದೂಕು: ರೌಡಿ ಶೀಟರ್ ಸ್ಲಂ ಭರತ್ ಬಲಿ
ನಟ ಯಶ್ ಹತ್ಯೆಗೆ ಸಂಚು ರೂಪಿಸಿದ್ದ ರೌಡಿ ಶೀಟರ್ ಸ್ಲಂ ಭರತ್ ಸಿನಿಮಿಯಾ ರೀತಿಯಲ್ಲಿ ಪರಾರಿಯಾಗಿದ್ದ
Team Udayavani, Feb 27, 2020, 9:35 AM IST
ಬೆಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ಸ್ಲಂ ಭರತನನ್ನು ಇಂದು ಬೆಳಿಗ್ಗೆ ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ತಲೆಮರೆಸಿಕೊಂಡಿದ್ದ ಸ್ಲಂ ಭರತ ಉತ್ತರ ಪ್ರದೇಶದಲ್ಲಿ ಬಂಧಿಯಾಗಿದ್ದ. ಈತನನ್ನು ಬೆಂಗಳೂರಿಗೆ ಕರೆತರುವಾಗ ಪೊಲೀಸ್ ವಾಹನದ ಮೇಲೆ ಸಹಚರರು ದಾಳಿ ನಡೆಸಿದ್ದರು. ಸಹಚರರು ಪೊಲೀಸರ ಮೇಲ ಫೈರಿಂಗ್ ಆರಂಭಿಸಿದ್ದರು. ಈ ವೇಳೆ ಸ್ಲಂ ಭರತ ತಪ್ಪಿಸಿಕೊಂಡಿದ್ದ.
ಇಂದು ಮುಂಜಾನೆ ಐದು ಗಂಟೆ ವೇಳೆಗೆ ಹೆಸರಘಟ್ಟದ ಬಳಿ ಸ್ಲಂ ಭರತ್ ಇದ್ದ ಕಾರನ್ನುಗುರುತಿಸಲಾಗಿದೆ. ರಾಜಗೋಪಾಲ ನಗರ ಠಾಣೆ ಇನ್ಸ್ ಪೆಕ್ಟರ್ ಅವರು ಕಾರನ್ನು ಅಡ್ಡಗಟ್ಟಿದಾಗ ಸ್ಲಂ ಭರತ್ ಇನ್ಸ್ ಪೆಕ್ಟರ್ ಮೇಲೆ ಗುಂಡು ಹಾರಿಸಿದ್ದ. ಎರಡು ಗುಂಡು ಪೊಲೀಸ್ ಕಾರಿಗೆ ತಾಗಿದ್ದರೆ, ಒಂದು ಗುಂಡು ಇನ್ಸ್ ಪೆಕ್ಟರ್ ಹೊಟ್ಟೆಗೆ ತಗುಲಿದೆ. ಆದರೆ ಇನ್ಸ್ ಪೆಕ್ಟರ್ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಕೂಡಲೇ ಇನ್ನೊಬ್ಬ ಇನ್ಸ್ ಪೆಕ್ಟರ್ ಸ್ಲಂ ಭರತ್ ಮೇಲೆ ಗುಂಡು ಹಾರಿಸಿದ್ಧಾರೆ. ಗುಂಡು ತಗುಲಿದ ಭರತ ಸ್ಥಳದಲ್ಲಿ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭರತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಈ ಹಿಂದೆ ನಟ ಯಶ್ ಹತ್ಯೆಗೂ ಸ್ಲಂ ಭರತ ಸಂಚು ರೂಪಿಸಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ