ರಾಜಕೀಯ, ಆರ್ಥಿಕ ಅಸ್ಪೃಶ್ಯತೆ ಇಂದಿಗೂ ಜೀವಂತ: ಆಯನೂರು ಮಂಜುನಾಥ್‌


Team Udayavani, Mar 12, 2020, 8:46 PM IST

ರಾಜಕೀಯ, ಆರ್ಥಿಕ ಅಸ್ಪೃಶ್ಯತೆ ಇಂದಿಗೂ ಜೀವಂತ: ಆಯನೂರು ಮಂಜುನಾಥ್‌

ವಿಧಾನ ಪರಿಷತ್‌ : ಸಂವಿಧಾನ ಜಾರಿಗೆ ಬಂದು ಏಳು ದಶಕ ಕಳೆದರೂ ರಾಜಕೀಯ ಹಾಗೂ ಆರ್ಥಿಕ ಅಸ್ಪೃಶ್ಯತೆ ಇಂದಿಗೂ ಜೀವಂತವಾಗಿದೆ ಎಂದು ಬಿಜೆಪಿ ಸದಸ್ಯ ಆಯನೂರು ಮಂಜುನಾಥ್‌ ಕಳವಳ ವ್ಯಕ್ತಪಡಿಸಿದರು.

ಸಂವಿಧಾನದ ಮೇಲಿನ ಚರ್ಚೆಯ ವೇಳೆ ವಿಷಯ ಮಂಡಿಸಿದ ಅವರು, ರೂಢಿಯಾಗಿ ಬಂದಿರುವ ಅಸ್ಪೃಶ್ಯತೆ ಸಮಾಜಕ್ಕೆ ಮಾರಕವಾಗಿದೆ. ರಾಜಕೀಯ ಹಾಗೂ ಆರ್ಥಿಕ ರೂಪದಲ್ಲಿ ಇಂದಿಗೂ ಆಸ್ಪೃಶ್ಯತೆ ಆಚರಣೆ ನಡೆಯುತ್ತಿದೆ. ಹಣವಿದ್ದ ವ್ಯಕ್ತಿಗೆ ಗೌರವ ಸಿಗುತ್ತಿದೆ. ಬಡವ-ಶ್ರೀಮಂತನೆಂಬ ತಾರತಮ್ಯ ಮಿತಿ ಮೀರುತ್ತಿದೆ. ಹಣವಿದ್ದವರು ಗಾಂಧಿನಗರ, ಕೆಳವರ್ಗ ಅಥವಾ ಬಡವರಿಗೆ ಬಾಪೂಜಿ ನಗರ ಎಂದು ನಾವೇ ಪ್ರತ್ಯೇಕಿಸಿದ್ದೇವೆ. ರಾಜಕೀಯದಲ್ಲೂ ಇದು ಜೀವಂತವಾಗಿದೆ ಎಂದರು.

ಕಾನೂನನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದೇವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವು ಕಾನೂನಿನ ಪುಸ್ತಕವಲ್ಲ, ಸಮಾಜ ಸುಧಾರಣೆಯ ಮಹನ್‌ ಗ್ರಂಥ. ಪ್ರತಿಯೊಬ್ಬ ವ್ಯಕ್ತಿಗೂ ಧರ್ಮಾಧಾರಿತವಾಗಿ ಅಥವಾ ಜಾತಿ ಆಧಾರಿತವಾಗಿ ಬದುಕ ಬಹುದು. ಆದರೆ, ಸರ್ಕಾರಗಳು ಧರ್ಮ, ಜಾತಿ ಮೀರಿ ನಡೆಯಬೇಕು ಎಂಬುದನ್ನು ಸ್ಪಷ್ಟ ಶಬ್ಧಗಳಲ್ಲಿ ಉಲ್ಲೇಖೀಸಲಾಗಿದೆ. ಅಂಬೇಡ್ಕರ್‌ ಅವರು ದಲಿತ ನಾಯಕರಲ್ಲ ಮತ್ತು ಕೇವಲ ದಲಿತರಿಗಾಗಿ ಸಂವಿಧಾನ ನೀಡಿಲ್ಲ. ಬದಲಾಗಿ ಸರ್ಕಾರಗಳು, ಜನ ಸಾಮಾನ್ಯರು ಹೇಗಿರಬೇಕು ಎಂಬುದನ್ನು ದೂರದೃಷ್ಟಿತ್ವ ಹೊಂದಿಕೊಂಡು ರೂಪಿಸಿದ್ದಾರೆ ಮತ್ತು ಸರ್ಕಾರಗಳನ್ನು ನಿಯಂತ್ರಿಸುವ ಶಕ್ತಿಯೂ ಇದಕ್ಕೆ ಇದೆ ಎಂದರು.

ಸ್ವಾಯತ್ತ ಸಂಸ್ಥೆಗಳ ಹಿತ ಕಾಪಾಡಿ :
ಸಿಬಿಐ, ಇಡಿ ಸಹಿತವಾಗಿ ಸ್ವಾಯುತ್ತ ಸಂಸ್ಥೆಗಳನ್ನು ಕಾಪಾಡದಿದ್ದರೆ ಪ್ರಜಾತಂತ್ರ ವ್ಯವಸ್ಥೆ ನಾಶವಾಗುತ್ತದೆ. ಪ್ರಜಾಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಪೂರಕವಾಗಿವೆ. ಆದರೆ, ಒಂದು ಅಂಗದ ಅಧಿಕಾರವನ್ನು ಮತ್ತೂಂದು ಅಂಗ ಆಕ್ರಮಿಸಲು ಸಾಧ್ಯವಿಲ್ಲ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಓಟ್‌ಗೆ ಮೌಲ್ಯ ಬಂದಿದೆ. ಮನುಷ್ಯರಿಗೆ ಮೌಲ್ಯ ಬಂದಿದೆಯಾ? ದಲಿತರ ಕೇರಿಗಳಿಗೆ ಲೋಟ ಹಿಡಿದುಕೊಂಡು ಹೋಗುವ ರಾಜಕಾರಣಿಗಳು ಇದ್ದಾರೆ. ಇದು ಸಂವಿಧಾನದ ಆಶಯ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ಗೆ ಮಾಡುವ ಅವಮಾನ ಎಂದು ವಿಷಾದಿಸಿದರು.

ಇತ್ತೀಚೆಗೆ ನ್ಯಾಯಾಂಗ ಲಕ್ಷ್ಮಣ ರೇಖೆ ದಾಟಿ ಅಧಿಕಾರ ಚಲಾಯಿಸುತ್ತಿದೆ. ರಾಜಕಾರಣಿಗಳು, ಅಧಿಕಾರಿಗಳ ಮೇಲೆ ಅಧಿಕಾರ ಚಲಾಯಿಸುತ್ತಿದ್ದೇವೆ. ಸಂವಿಧಾನ ರಚನೆಯಾಗಿ 70 ವರ್ಷ ಕಳೆದರೂ ಸಮರ್ಥವಾದ ಒಂದು ಕಾನೂನು ರೂಪಿಸಲು ಅಸಮರ್ಥರಾಗಿದ್ದೇವೆ. ಪ್ರತಿ ಬಾರಿ ಕಾನೂನಿಗೆ ತಿದ್ದುಪಡಿ ಮಾಡುತ್ತೇವೆ. ಆದರೆ, ಸಂವಿಧಾನವನ್ನು ಯಾವ ಮಾದರಿಯಲ್ಲಿ ರಚಿಸಿರಬಹುದು ಮತ್ತು ಅವರ ಜ್ಞಾನ ಎಂತಹದ್ದು ಎಂಬುದನ್ನು ಇದರಿಂದ ಊಹಿಸಬಹುದು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.