ದೇಶದ ಯಾವುದೇ ರಾಜಕೀಯ ಪಕ್ಷ ಗೋವಾದ ಚುನಾವಣೆಯಲ್ಲಿ ಸ್ಪರ್ಧಿಸಬಹುದು: ಪ್ರಮೋದ್ ಸಾವಂತ್
Team Udayavani, Nov 9, 2021, 2:39 PM IST
ಪಣಜಿ: ದೇಶದಲ್ಲಿನ ಯಾವುದೇ ರಾಜಕೀಯ ಪಕ್ಷವು ಗೋವಾಕ್ಕೆ ಬಂದು ಚುನಾವಣೆಯಲ್ಲಿ ಸ್ಫರ್ಧಿಸಬಹುದು, ಅವರಿಗೆ ಸ್ವಾಗತವಿದೆ. ಆದರೆ ಅವರು ಯೋಗ್ಯ ಮಾರ್ಗದಲ್ಲಿ ಗೋವಾಕ್ಕೆ ಪ್ರವೇಶಿಸಿ ಯೋಗ್ಯ ವರ್ತನೆಯನ್ನು ಇಟ್ಟುಕೊಳ್ಳುವುದು ಅಷ್ಟೇ ಮಹತ್ವದ್ದಾಗಿದೆ. ಗೋವಾಕ್ಕೆ ಬಂದು ಯಾವುದೇ ಪಕ್ಷವು ದಾದಾಗಿರಿ ಮಾಡಿದರೆ ಗೋವಾ ರಾಜ್ಯದ ಜನರು ಅದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಎಚ್ಚರಿಕೆ ನೀಡಿದ್ದಾರೆ.
ಗೋವಾದ ಬಾಂಬೋಲಿಂ ಬಳಿಯಿರುವ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಹಿಳಾ ಸಂವಾದ ಪರಿಷತ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು- ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರೀಕರ್ ರವರು ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಹಲವು ಯೋಜನೆಯನ್ನು ಜಾರಿಗೆ ತಂದಿದ್ದರು. ರಾಜ್ಯದ 1,30,000 ಜನ ಗೃಹಿಣಿಯರು ಪ್ರತಿ ತಿಂಗಳು ಗೃಹ ಆಧಾರ ಯೋಜನೆಯ ಅಡಿಯಲ್ಲಿ ಮಾಸಿಕ ಭತ್ತೆಯನ್ನು ಪಡೆಯುತ್ತಿದ್ದಾರೆ. ಇಷ್ಟೇ ಅಲ್ಲದೆಯೇ ದಯಾನಂದ ಸಾಮಾಜಿಕ ಸುರಕ್ಷಾ ಯೋಜನೆಯ ಅಡಿಯಲ್ಲಿಯೂ ಮಹಿಳೆಯರಿಗೆ ಲಾಭ ದೊರೆಯುತ್ತಿದೆ ಎಂದು ನುಡಿದರು.
ಇದನ್ನೂ ಓದಿ: ಅತಿ ಶೀಘ್ರದಲ್ಲಿ ಮಕ್ಕಳಿಗೆ ಲಸಿಕೆ ಸಾಧ್ಯತೆ : ಅರೋಗ್ಯ ಸಚಿವ ಸುಧಾಕರ್ ಹೇಳಿಕೆ
ಗೋವಾ ರಾಜ್ಯವು ಒಂದು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದೇ ರೀತಿ ವರ್ಷಕ್ಕೆ ಎರಡು ಬಾರಿ ಮಹಿಳಾ ಸಂವಾದ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ