ರಾಜಕಾರಣವೇ ಬೇರೆ- ಸಂಬಂಧಗಳೇ ಬೇರೆ : ಈಶ್ವರಪ್ಪ
Team Udayavani, Dec 12, 2019, 11:03 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯವಾಗಿದ್ದು, ಗುರುವಾರವೇ ಮನೆಗೆ ಮರಳಬೇಕಿತ್ತು. ಆದರೆ ಸೋಂಕು ತಗುಲಬಾರದು ಎಂಬ ಕಾರಣಕ್ಕೆ ಒಂದೆರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಇರುವವರಲ್ಲ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿದ್ದಾರಷ್ಟೇ. ರಾಜಕಾರಣ ಬೇರೆ, ಸಂಬಂಧಗಳು ಬೇರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ನನ್ನ ತಲೆ ಕಡಿದರೂ ನಾನು ಪಕ್ಷ ಬಿಡಲ್ಲ. ಹಾಗೆಯೇ ಸಿದ್ದರಾಮಯ್ಯ ಕೂಡ ಅವರ ಪಕ್ಷ ಬಿಡಲ್ಲ. ನನ್ನ ಪಕ್ಷದ ಬಗ್ಗೆ ಅವರೇನಾದರೂ ಹೇಳಿದರೆ ನಾನು ಸುಮ್ಮನಿರಲ್ಲ. ಅವರ ಪಕ್ಷದ ಬಗ್ಗೆ ನಾನು ಏನಾದರೂ ಹೇಳಿದರೂ ಅವರು ಸುಮ್ಮನಿರಲ್ಲ. ಆದರೆ ರಾಜಕೀಯ ಹೊರತುಪಡಿಸಿ ನಮ್ಮಲ್ಲಿ ಉತ್ತಮ ಮಾನವೀಯ ಸಂಬಂಧಗಳಿವೆ ಎಂದು ತಿಳಿಸಿದರು.
ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಕಿತ್ತಾಡುತ್ತಿದ್ದೆವು. ಬಳಿಕ ಒಟ್ಟಿಗೆ ಕುಳಿತು ಟೀ ಕುಡಿಯುತ್ತಿದ್ದೆವು. ನಾವು ಕಿತ್ತಾಡುವುದನ್ನು ನೋಡಿ ಈ ಜನ್ಮದಲ್ಲಿ ಇವರು ಮುಖ ನೋಡಲ್ಲ ಎಂದು ಎಲ್ಲ ಅಂದುಕೊಳ್ಳುತಿದ್ದರು. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಊಟಕ್ಕೆ ಅವರ ಪಕ್ಕದಲ್ಲೇ ಆಸನ ಹಾಕಿಸಿ ಕಾಯುತ್ತಿದ್ದರು ಎಂದು ಗುಣಗಾನ ಮಾಡಿದರು.
ಒಮ್ಮೆ ಸದನದಲ್ಲಿ ಮಾತಿನ ಚಕಮಕಿ ನಡೆದಿತ್ತು. ನಾನು ಅಂದಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಕೊಠಡಿಯಲ್ಲಿ ಕುಳಿತಿದ್ದೆ. ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬರುತ್ತಿದ್ದಂತೆ ನಾನು ಹೊರಡಲು ಎದ್ದೆ. ಆಗ ಈಶ್ವರಪ್ಪ ಕುಳಿತುಕೊಳ್ಳಿ, ಎಲ್ಲಿಗೆ ಹೋಗ್ತಿದ್ದೀರಿ ಎಂದು ಸಿದ್ದರಾಮಯ್ಯ ಹೇಳುತ್ತಲೇ ಒಟ್ಟಿಗೆ ಟೀ ಕುಡಿದೆವು. ಇವೆಲ್ಲವೂ ರಾಜಕಾರಣ ಹೊರತುಪಡಿಸಿ ಇರುವ ಸಂಬಂಧಗಳು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೊಂದಿಗೂ ಇಂತಹದ್ದೇ ಸಂಬಂಧವಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೊಡ್ಡವರು. ಅಲ್ಲಿಯವರೆಗೂ ನಾನು ಹೋಗಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ