ಜನಸಂಖ್ಯೆ ಆಧರಿಸಿ ಲಸಿಕೆ : ಕೇಂದ್ರದಿಂದ ವ್ಯಾಕ್ಸಿನ್‌ ವಿತರಣೆಗೆ ಮಾರ್ಗಸೂಚಿ


Team Udayavani, Jun 9, 2021, 8:35 AM IST

ಜನಸಂಖ್ಯೆ ಆಧರಿಸಿ ಲಸಿಕೆ : ಕೇಂದ್ರದಿಂದ ವ್ಯಾಕ್ಸಿನ್‌ ವಿತರಣೆಗೆ ಮಾರ್ಗಸೂಚಿ

ಹೊಸದಿಲ್ಲಿ : ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನಸಂಖ್ಯೆ, ಕೊರೊನಾ ಸೋಂಕಿನ ತೀವ್ರತೆ, ಜನರಿಗೆ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಪ್ರಗತಿ ಮತ್ತು ಲಸಿ ಕೆ ಪೋಲು ಆಧಾರದ ಮೇಲೆ ದೇಶಾದ್ಯಂತ ಲಸಿಕೆಯನ್ನು ಹಂಚಿಕೆ ಮಾಡಲಾಗುತ್ತದೆ.

ಸೋಮವಾರವಷ್ಟೇ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಶೇ. 75ರಷ್ಟು ಲಸಿಕೆಯನ್ನು ಕೇಂದ್ರ ಸರಕಾರವೇ ಖರೀದಿಸಿ ಹಂಚಿಕೆ ಮಾಡಲಿದೆ. ರಾಜ್ಯಗಳು ನೇರವಾಗಿ ಖರೀದಿ ಮಾಡುವಂತಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ.

ಈ ಮಾರ್ಗ ಸೂಚಿಗಳು ಜೂ. 21ರಂದು ಜಾರಿಯಾಗಲಿವೆ. ಸರಕಾರಿ ಮತ್ತು ಖಾಸಗಿ ಲಸಿಕೆ ಕೇಂದ್ರಗಳಲ್ಲೂ ಉಚಿತವಾಗಿ ಲಸಿಕೆ ಸಿಗಲಿದೆ. ಜನತೆ ಕೊ-ವಿನ್‌ ಆ್ಯಪ್‌ ಮೂಲಕ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಸ್ಥಳದಲ್ಲಿಯೇ ನೋಂದಣಿ ಅವಕಾಶವೂ ಇದೆ ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಹೊಸ ಮಾರ್ಗಸೂಚಿ ಪ್ರಕಾರ, ಆಯಾ ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ, ಹೆಚ್ಚು ಜನಸಂಖ್ಯೆ ಇರುವ ರಾಜ್ಯಗಳಿಗೆ ಹೆಚ್ಚು ಲಸಿಕೆ ದೊರೆಯಲಿದೆ. ಆದರೆ ಲಸಿಕೆ ವ್ಯರ್ಥ ಮಾಡಿದರೆ ಲಸಿಕೆ ಪೂರೈಕೆಯನ್ನು ಕಡಿತ ಮಾಡಲಾಗುತ್ತದೆ. ಹೀಗಾಗಿ ಲಸಿಕೆಯನ್ನು ಎಚ್ಚರದಿಂದ ಬಳಸಿಕೊಳ್ಳಬೇಕಿದೆ.

ಯಾವ ರಾಜ್ಯಕ್ಕೆ ಎಷ್ಟು ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಹೀಗಾಗಿ ಲಭ್ಯತೆಯ ಆಧಾರದಲ್ಲಿ ರಾಜ್ಯ ಸರಕಾರಗಳು ಜನರಿಗೆ ಲಸಿಕೆ ನೀಡಬಹುದು.

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ವರ್ಗಾವಣೆ ರಹಿತ ಎಲೆಕ್ಟ್ರಾನಿಕ್‌ ವೋಚರ್‌ ಬಳಸಲು ಪ್ರೋತ್ಸಾಹಿಸಲಾಗುವುದು ಎಂದು ಕೇಂದ್ರ ಸರಕಾರ ಇದೇ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ವೋಚರ್‌ ಗಳಿಗೆ ಆರ್‌ ಬಿಐ ಒಪ್ಪಿಗೆ ಇರಬೇಕು, ಆರ್ಥಿಕವಾಗಿ ಹಿಂದುಳಿದವರು ಈ ವೋಚರ್‌ ಬಳಸುವಂತೆ ಪ್ರೋತ್ಸಾಹಿಸಲಾಗುವುದು ಎಂದಿದೆ.

44 ಕೋಟಿ ಲಸಿಕೆಗೆ ಕೇಂದ್ರ ಬೇಡಿಕೆ
ದೇಶದ 18 ವರ್ಷ ತುಂಬಿದ ಎಲ್ಲರಿಗೂ ಉಚಿತ ಲಸಿಕೆ ಕೊಡುವ ಬಗ್ಗೆ ಘೋಷಿಸಿದ ಕೇಂದ್ರ ಸರಕಾರ, ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಗಾಗಿ ಉತ್ಪಾದಕ ಕಂಪೆನಿಗಳಿಗೆ ಬೇಡಿಕೆ ಸಲ್ಲಿಸಿದೆ. ಕೊವಿಶೀಲ್ಡ್‌ 25 ಕೋಟಿ ಡೋಸ್‌ ಮತ್ತು ಕೊವ್ಯಾಕ್ಸಿನ್‌ 19 ಕೋಟಿ ಡೋಸ್‌ಗೆ ಬೇಡಿಕೆ ಸಲ್ಲಿಸಲಾಗಿದೆ.

ಈ 44 ಕೋಟಿ ಡೋಸ್‌ಗಳನ್ನು ಆಗಸ್ಟ್‌ನಿಂದ ಡಿಸೆಂಬರ್‌ ನಡುವಣ ಅವಧಿಯಲ್ಲಿ ಸಂಸ್ಥೆಗಳು ಪೂರೈಸಬೇಕು ಎಂದು ಕೇಂದ್ರ ಸರಕಾರ ತಿಳಿಸಿದೆ. ಈಗಾಗಲೇ ಶೇ. 30ರಷ್ಟು ಹಣವನ್ನು ಭಾರತ್‌ ಬಯೊಟೆಕ್‌ ಮತ್ತು ಸೀರಂ ಇಂಟರ್‌ನ್ಯಾಶನಲ್‌ ಕಂಪೆನಿಗಳಿಗೆ ಮುಂಗಡವಾಗಿ ನೀಡಲಾಗಿದೆ ಎಂದೂ ಹೇಳಿದೆ.

ಇದರ ಜತೆಗೆ 30 ಕೋಟಿ ಬಯಾಲಜಿಕಲ್‌ ಇ ಲಸಿಕೆಗೂ ಕೇಂದ್ರ ಸರಕಾರ ಬೇಡಿಕೆ ಸಲ್ಲಿಸಿದ್ದು, ಇದು ಸೆಪ್ಟಂಬರ್‌ ವೇಳೆಗೆ ಲಭ್ಯವಾಗಲಿದೆ.

ಉಚಿತ ಲಸಿಕೆ, ಪಡಿತರ: 1.45 ಲಕ್ಷ ಕೋ.ರೂ. ವೆಚ್ಚ
ಪ್ರಧಾನಿ ಮೋದಿ ಘೋಷಿಸಿದ ಉಚಿತ ಲಸಿಕೆ ಮತ್ತು ನವೆಂಬರ್‌ ವರೆಗೆ ಉಚಿತ ಪಡಿತರ ಯೋಜನೆಯಿಂದಾಗಿ ಕೇಂದ್ರದ ಬೊಕ್ಕಸಕ್ಕೆ 1.45 ಲಕ್ಷ ಕೋ.ರೂ. ಹೊರೆ ಬೀಳಲಿದೆ. ಉಚಿತ ಲಸಿಕೆಗೆ 45 ಸಾವಿರದಿಂದ 50 ಸಾವಿರ ಕೋ.ರೂ. ವೆಚ್ಚವಾಗಲಿದೆ. ದೇಶದ 80 ಕೋಟಿ ಬಡವರಿಗೆ 5 ಕೆ.ಜಿ. ಅಕ್ಕಿ ಅಥವಾ ಗೋಧಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯ ನೀಡಲು 1.1 ಲಕ್ಷ ಕೋ.ರೂ. ವೆಚ್ಚವಾಗಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.