ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಸದ್ಯದಲ್ಲೇ ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್


Team Udayavani, May 25, 2021, 7:38 PM IST

ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಸದ್ಯದಲ್ಲೇ ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು : ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಸುಸಜ್ಜಿತವಾದ ವಾರ್ ರೂಮ್ ಅನುಷ್ಠಾನಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು ಜಾನುವಾರು ಸಾಕಾಣೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ನೀಡಲು ಸುಸಜ್ಜಿತವಾದ ವಾರ್ ರೂಮ್ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ತಯಾರಾಗಿದ್ದು ರೈತರು, ಜಾನುವಾರು ಸಾಕಾಣೆದಾರರು, ಪ್ರಾಣಿಪ್ರಿಯರು ಇದರ ಅನುಕೂಲ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾನುವಾರುಗಳ ಆರೋಗ್ಯ, ಸಾಕುವ ವಿಧಾನ, ಆರೋಗ್ಯ ಸಮಸ್ಯೆ, ತಕ್ಷಣಕ್ಕೆ ಚಿಕಿತ್ಸೆ, ಔಷಧೋಪಚಾರ ಇತ್ಯಾದಿಗಳ ಬಗ್ಗೆ ವಿಷಯ ತಜ್ಞರು ವಾರ್ ರೂಮ್ ಮೂಲಕ ಮಾಹಿತಿ ನೀಡಲಿದ್ದಾರೆ ಎಂದರು.

ವಾರ್ ರೂಮ್, ದಿನದ 24 X 7 ಕಾರ್ಯನಿರ್ವಹಿಸಲಿದ್ದು, ವಿಪತ್ತು ನಿರ್ವಹಣಾ ನಿಯಂತ್ರಣ ಕೇಂದ್ರವು (ವಾರ್ ರೂಮ್)  ಪಶುಸಂಗೋಪನೆ ಇಲಾಖೆಯ 4212 ಸಂಸ್ಥೆಗಳು, 2900 ಪಶುವೈದ್ಯರು ಮತ್ತು 2200 ಪಶುವೈದ್ಯಕೀಯ ಸಿಬ್ಬಂದಿ ಹೆಚ್ಚಿನ ಸೇವೆ ಒದಗಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ :ಮಧುಮೇಹಿಗಳಿಗೆ ಬ್ಲ್ಯಾಕ್ ಫಂಗಸ್ ಅಪಾಯಕಾರಿ..!? ಮುನ್ನೆಚ್ಚರಿಕಾ ಕ್ರಮಗಳೇನು..?

ಪ್ರತಿಕ್ರಿಯಾ ತಂಡವು ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸಲಿವೆ. ವಾರ್ ರೂಮ್ ಗೆ ಕರೆ ಬಂದ ಕೆಲವೆ ಗಂಟೆಗಳಲ್ಲಿ ತಂಡ ಮಾಹಿತಿ ಆಧಾರದ ಮೇಲೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಹಾರ ನೀಡಲಿದೆ ಎಂದರು.

ವಾರ್ ರೂಮ್ ವೈಶಿಷ್ಠ್ಯತೆಗಳು

– ದಿನದ 24 ಗಂಟೆ ಸೇವೆ ಲಭ್ಯವಾಗಲಿದೆ. ಟೋಲ್ ಫ್ರೀ ನಂಬರ್ ವ್ಯವಸ್ಥೆ ಒಳಗೊಂಡಿದೆ.
– ಪಶುಸಂಗೋಪನಾ ಕ್ಷೇತ್ರದಲ್ಲಿನ ಅಧುನಿಕ ವಿಧಾನಗಳ ಬಗ್ಗೆ ಈಮೇಲ್, ಹತ್ತಿರದ ಪಶುವೈದ್ಯ ಸಂಸ್ಥೆ, ಮುದ್ರಿತ ಪ್ರತಿ, ಆಡಿಯೋ ವಿಡಿಯೋ, ಸಾಮಾಜಿಕ ಜಾಲತಾಣಗಳ ಮೂಲಕ ರೈತರಿಗೆ ನಿರಂತರವಾಗಿ ಮಾಹಿತಿ ನೀಡುವುದು.
– ಇಲಾಖೆಯಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಳ್ಳುವ ರೈತರ ಮೊಬೈಲ್ ಗೆ ಪಶುಗಳಿಗೆ ನೀಡಲಾಗುವ ಲಸಿಕೆ, ರೋಗೊದ್ರೇಕ ಸಾಧ್ಯತೆ ಬಗ್ಗೆ ಮಾಹಿತಿ ನೀಡುವುದು.
– ಜಾನುವಾರುಗಳಿಗೆ ಚಿಕಿತ್ಸೆ ಅವಶ್ಯಕತೆ ಇದ್ದ ರೈತರ ವಾರ್ ರೂಮ್ ಸಂಪರ್ಕಿಸಿದಾಗ ಹತ್ತಿರದ ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಿವುದು.
– ಬೀಡಾಡಿ ದನ ಹಾಗೂ ಇತರೆ ಪ್ರಾಣಿಗಳ ಬಗ್ಗೆ ಸಾರ್ವಜನಿಕರು ನೀಡುವ ದೂರನ್ನು ಆಧರಿಸಿ ಹತ್ತಿರದ ಪಶುವೈದ್ಯರು ಚಿಕಿತ್ಸೆ ನೀಡುವಂತೆ ನೋಡಿಕೊಳ್ಳುವುದು.
– ಇಲಾಖೆಯಿಂದ ಅನುಷ್ಟಾನಗೊಳ್ಳುತ್ತಿರುವ ಯೋಜನೆಗಳ ವಿವರ, ಅವುಗಳನ್ನು ಪಡೆಯಲು ಬಳಸಬೇಕಾದ ಪ್ರಕ್ರಿಯೆ, ಡೈರಿ, ಹಂದಿ ಸಾಕಾಣಿಕೆ, ಮೇಕೆ, ಕೋಳಿ ಇತ್ಯಾದಿಗಳ ಸಾಕಾಣಿಕೆ ವಿವರ ನೀಡುವುದು.
– ಪ್ರಕೃತಿ ವಿಕೋಪದ ಸಂದರ್ಭದಲ್ಲಿ ನೋಂದಾಯಿತ ರೈತರ ಮೋಬೈಲ್ ಗೇ ಎಸ್.ಎಮ್.ಎಸ್ ಅಲರ್ಟ್ ನೀಡುವುದು
– ವಿವಿಧ ಜಾನುವಾರುಗಳ ಮಾರುಕಟ್ಟೆ ಲಭ್ಯತೆ, ದರಗಳ ಕುರಿತು ಮಾಹಿತಿ ನೀಡುವುದು.
– ಸ್ಥಳಿಯ/ವಿದೇಶಿ ಪಶು ತಳಿಗಳ ಬಗ್ಗೆ ಮಾಹಿತಿ ನೀಡುವುದು.
– ಬ್ಯಾಂಕ್ ಗಳಿಂದ ಸಾಲದ ಸೌಲಭ್ಯದ ಮಾಹಿತಿ ನೀಡುವುದು
– ಮೇವಿನ ಉತ್ಪಾದನೆ, ಮೇವಿನ ಬೀಜಗಳ ಕಿಟ್ ಕುರಿತು ಮಾಹಿತಿ ನೀಡುವುದು.
– ತಂತ್ರಜ್ಞಾನ ಬಳಸಿ ಗೋಶಾಲೆಗಳ ನಿರ್ವಹಣೆ ಮತ್ತು ಮಾಹಿತಿ ನೀಡುವುದು.
– ಗೋಹತ್ಯೆ ಪ್ರತಿಬಂಧಕ ಕಾಯ್ದೆ ಅನುಷ್ಟಾನದ ಕುರಿತಾಗಿ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು.
– ಪಶುಸಂಜೀವಿನಿ, ಅಂಬುಲೇಟರಿ ಕ್ಲಿನಿಕ್ ಗಳನ್ನು ತಜ್ಞ ವೈದ್ಯರೊಂದಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು.
– ತಜ್ಞರೊಂದಿಗೆ ಜಾನುವಾರುಗಳ ಆರೋಗ್ಯ, ಆಹಾರ, ಔಷಧಿಗಳ ಕುರಿತು ಸಂವಹನ ನಡೆಸುವ ವ್ಯವಸ್ಥೆ
– ಚಿಕಿತ್ಸಾಲಯಗಳಲ್ಲಿ ವೈದ್ಯರ ಲಭ್ಯತೆಯನ್ನು ತಂತ್ರಜ್ಞಾನ ಆಧಾರಿತವಾಗಿ ತಿಳಿಸುವ ವ್ಯವಸ್ಥೆ.
– ಲಭ್ಯ ತಂತ್ರಜ್ಞಾನವನ್ನು ಬಳಸಿ ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ ಮಾಹಿತಿ ತಲುಪಿಸುವುದು ಹಾಗೂ ರೈತರಿಗೆ ಅವರ ಕುಂದುಕೊರತೆಗಳ ಬಗ್ಗೆ ದೂರವಾಣಿ ಮೂಲಕ ನೀಡುವ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸಿ ಸೂಕ್ತ ಪರಿಹಾರವನ್ನು ಒದಗಿಸುವುದು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.