ಗೋಶಾಲೆಯ ತ್ಯಾಜ್ಯದಿಂದ ಗ್ಯಾಸ್ ಉತ್ಪಾದನೆ : ಸಚಿವ ಪ್ರಭು ಚವ್ಹಾಣ್


Team Udayavani, Dec 30, 2021, 8:49 PM IST

ಗೋಶಾಲೆಯ ತ್ಯಾಜ್ಯದಿಂದ ಗ್ಯಾಸ್ ಉತ್ಪಾದನೆ : ಸಚಿವ ಪ್ರಭು ಚವ್ಹಾಣ್

ಗುಜರಾತ್ : ಜಾಮನಗರದಲ್ಲಿರುವ ಸಿದ್ದಾರ್ಥ ವ್ಯಾಸ ಅವರ ಮ್ಯಾಕ್ಸಿಮ್ ಎನ್ವಿರಾನ್ಮೇಂಟಲ್ ಸಲ್ಯೂಷನ್ ಬಯೋ ಗ್ಯಾಸ ಘಟಕಕ್ಕೆ ಇಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಚರ್ಚೆ ನಡೆಸಿದರು. ಗುಜರಾತ ನಗರದ ತ್ಯಾಜ್ಯವನ್ನು ಹಾಗೂ ಸಿದ್ದಾರ್ಥ ಗೋಶಾಲೆಯಲ್ಲಿನ ತ್ಯಾಜ್ಯವನ್ನು ಬಳಸಿಕೊಂಡು ಗ್ಯಾಸ್ ಉತ್ಪಾದಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ನಗರದ ತ್ಯಾಜ ಬಳಕೆ ಮಾಡಿಕೊಂಡು ಗ್ಯಾಸ್ ಉತ್ಪತ್ತಿ ಮಾಡುತ್ತಿರುವುದರಿಂದ ನಗರದಲ್ಲಿ ಕಸದ ವಿಲೇವಾರಿ ಸರಿಯಾಗಿ ಆಗುತ್ತಿರುವುದು ಗಮನಾರ್ಹ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅಲ್ಲದೇ ಇಲ್ಲಿ ಉತ್ಪತ್ತಿಯಾಗುತ್ತಿರುವ ಗ್ಯಾಸ್ ಗುಜರಾತ್ ಗ್ರೀಡ್ ಗೆ ಸಹ ನೀಡುತ್ತಿರುವುದು ವಿಷೇಶ. ಜಾಮನಗರವನ್ನು ಸ್ವಚ್ಛವಾಗಿಸುವ ನಿಟ್ಟಿನಲ್ಲಿ ಸಿದ್ದಾರ್ಥ ವ್ಯಾಸ ಅವರ ಸಂಸ್ಥೆ ಬಹುದೊಡ್ಡ ಪಾತ್ರವಹಿಸಿದೆ ಅಲ್ಲದೆ ಕಸದ ವಿಲೇವಾರಿ ಸಹ ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕಸದಿಂದ ರಸದ ಪರಿಕಲ್ಪನೆ ಅತ್ಯಂತ ಅಚ್ಚುಕಟ್ಟಾಗಿ ಇಲ್ಲಿ ಅನುಷ್ಟಾನವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ನಮ್ಮಲ್ಲಿಯೂ ಈ ತರಹದ ಪ್ರಯತ್ನಗಳು ಆದಲ್ಲಿ ರಾಜ್ಯವನ್ನು ಮತ್ತಷ್ಟು ಸ್ವಚ್ಛವನ್ನಾಗಿಸಬಹುದು ಅಲ್ಲದೇ ತ್ಯಾಜ್ಯದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಆನಂದ ಬಾಬಾ ಗೋಶಾಲೆ, ರಾಜಕೋಟ್ ನಲ್ಲಿರುವ ಶ್ರೀಜಿ ಗೊಶಾಲೆಗೆ ಸಹ ಸಚಿವರು ಭೇಟಿ ನೀಡಿ ಗೋಶಾಲೆಯ ನಿರ್ವಹಣೆ ಕುರಿತು ಆಡಳಿತ ಮಂಡಳಿಯ ಸದಸ್ಯರ ಜೊತೆ ಚರ್ಚೆ ನಡೆಸಿದರು. ಗೋಶಾಲೆಗಳಲ್ಲಿ ಗೋಆಧಾರಿತ ಕೃಷಿ ಮತ್ತು ಗೋಉತ್ಪನ್ನಗಳ ಉತ್ಪಾದನೆ ಗುಜರಾತ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವುದು ಸಂತಸ ತಂದಿದೆ. ನಮ್ಮ ರಾಜ್ಯದಲ್ಲಿ ಸಹ ಎಲ್ಲ ಗೋಶಾಲೆಗಳು ಆತ್ಮ ನಿರ್ಭರವಾಗಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಅನುಸರಿಸಲು ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಗುಜರಾತ, ಉತ್ತರಪ್ರದೇಶ, ಮಹಾರಾಷ್ಟ್ರಾದಲ್ಲಿ ಗೋಶಾಲೆಗಳು ಬಯೋಗ್ಯಾಸ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿರುವುದು ನನ್ನ ಗಮನ ಸೆಳೆದಿದೆ ಎಂದು ಸಚಿವರು ತಿಳಿಸಿದ್ದಾರೆ. ಇದೇ ಮಾದರಿಗಳನ್ನು ರಾಜ್ಯದ ಖಾಸಗಿ ಮತ್ತು ಸರ್ಕಾರಿ ಗೋಶಾಲೆಗಳಲ್ಲಿ ಅಳವಡಿಸಿಕೊಳ್ಳಬಹುದಾದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೋಟ್ ನಲ್ಲಿರುವ ಕರುಣಾ ಫೌಂಡೇಶನ್ ನಿರ್ವಹಿಸುತ್ತಿರುವ ಪಶುಪಾಲನಾ ಸಹಾಯವಾಣಿ ಹಾಗೂ ಅಂಬುಲೆನ್ಸ್ ವೀಕ್ಷಣೆ ಮಾಡಲಾಯಿತು. ನಗರ ಪ್ರದೇಶದಲ್ಲಿ ತೊಂದರೆಗೀಡಾದ ಜಾನುವಾರಗಳನ್ನು ತೆಗೆದುಕೊಂಡು ಬರಲು ಲಿಫ್ಟಿಂಗ್ ಮಷೀನ್ ಸೇರಿದಂತೆ ಜಾನುವಾರಗಳ ತುರ್ತು ಚಿಕಿತ್ಸೆಗೆ ಬೇಕಾದ ಎಲ್ಲ ಪರಿಕರಗಳನ್ನು ಅಂಬುಲೆನ್ಸ್ ನಲ್ಲಿ ಒದಗಿಸಲಾಗಿದೆ ಕರ್ನಾಟಕದಲ್ಲಿ ಅನುಷ್ಟಾನಗೊಂಡಿರುವ ಪಶು ಸಂಜೀವಿನಿ ಮಾದರಿಯಲ್ಲಿಯೇ ಇದು ಕಾರ್ಯನಿರ್ವಹಿಸುತ್ತಿದೆ.

ಯಾವುದೇ ಜಾನುವಾರುಗಳು ಕಾಲು ಕಳೆದುಕೊಂಡು ನರಳುತ್ತಿದ್ದಾರೆ ಕರುಣಾ ಫೌಂಡೇಶನ್ ಮೂಲಕ ಅವುಗಳಿಗೆ ಕೃತಕವಾಗಿ ಕಾಲು ಅಳವಡಿಸಿ ಜಾನುವಾರುಗಳ ಮೂಕ ರೋದನೆಗೆ ಧ್ವನಿಯಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.