ಗಣೇಶನ ಮೂರ್ತಿ ಸ್ಥಾಪನೆಗೆ ಅನುಮತಿ ನೀಡೋದು ಸಿಎಂಗೆ ಬಿಟ್ಟಿದ್ದು : ಪ್ರಭು ಚವ್ಹಾಣ್
Team Udayavani, Aug 31, 2021, 8:00 PM IST
ಕೊಪ್ಪಳ: ರಾಜ್ಯದಲ್ಲಿ ಗಣೇಶ ಹಬ್ಬದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಅನುಮತಿ ನೀಡುವ ವಿಚಾರ ಸಿಎಂ ಅವರಿಗೆ ಬಿಟ್ಟಿದ್ದು, ಅವರು ಇಂಟಲಿಜೆಂಟ್ ಹಾಗೂ ಪವರ್ಪುಲ್ ಮುಖ್ಯಮಂತ್ತಿಯಾಗಿದ್ದಾರೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಬಹದ್ದೂಬಂಡಾ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ಗಣೇಶ ಮೂರ್ತಿ ಬಹಿರಂಗ ಸ್ಥಾಪನೆಯ ವಿಚಾರ ಮೇಲ್ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸಿಎಂ ಅವರೇ ಈ ಕುರಿತಂತೆ ನಿರ್ಧಾರ ಕೈಗೊಳ್ಳುತ್ತಾರೆ ಎಂದರಲ್ಲದೇ, ನಾನು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ಕುರಿತಂತೆ, ಗೋಶಾಲೆಗಳ ಅಭಿವೃದ್ಧಿ ಕುರಿತಂತೆ ಗೋವುಗಳ ರಕ್ಷಣೆಯ ಕುರಿತಂತೆ ಎಲ್ಲಡೆಯೂ ಕಾಳಜಿ ವಹಿಸಿದ್ದೇನೆ ಎಂದರು.
ಸದಾಶಿವ ಆಯೋಗದ ವರದಿಯನ್ನು ನಾವು ಒಪ್ಪುವುದಿಲ್ಲ. ಕಳೆದ ೨೦ ವರ್ಷಗಳಿಂದಲೂ ಇದೆಲ್ಲವೂ ನಡೆದಿದೆ. ಈ ಆಯೋಗದ ವರದಿಯು ಅಸಂವಿಧಾನಿಕವಾಗಿದೆ. ಹಾಗಾಗಿ ನಾವು ಅದನ್ನು ಒಪ್ಪುವುದಿಲ್ಲ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಕೊರಮ, ಕೊರಚ ಹಾಗೂ ಲಂಬಾಣಿ ಸಮಾಜಕ್ಕೆ ಅನ್ಯಾಯವಾಗುವುದಿಲ್ಲ ಎನ್ನುವ ವಿಶ್ವಾಸ ನಮಗಿದೆ ಎಂದರು.
ತಾಂಡಾಗಳು ಕಂದಾಯ ಗ್ರಾಮಗಳಾಗಬೇಕು ಎಂದು ಎರಡು ವರ್ಷದ ಹಿಂದೆಯೇ ಆದೇಶವಾಗಿದೆ. ಆದರೆ ರಾಜ್ಯದಲ್ಲಿ ತಾಂಡಾಗಳು ಕಂದಾಯ ಗ್ರಾಮಗಳಾಗದೇ ಇರುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವೆನು. ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವಂತೆಯೂ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡುವೆನು ಎಂದರು.
ಇದನ್ನೂ ಓದಿ :ಬಾಹ್ಯಾಕಾಶ ನಿಲ್ದಾಣದಲ್ಲಿ ಬಿರುಕು : 2025ರ ಹೊತ್ತಿಗೆ ಕಳಚಿ ಬೀಳುವ ಅಪಾಯ ; ರಷ್ಯಾ ಎಚ್ಚರಿಕೆ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದೇವೆ. ಕೆಲವು ಮುಸ್ಲಿಂ ಮುಖಂಡರು ಕೋರ್ಟ್ಗೆ ಪಿಐಎಲ್ ಹೋಗಿದ್ದಾರೆ. ಕೋರ್ಟ್ನಲ್ಲಿ ಇಯರಿಂಗ್ ಇತ್ತು. ನಾವು ಈ ಕೇಸ್ನಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಮುಂದಿನ ದಿನದಲ್ಲಿ ಯಾವುದೇ ಗೋವು ಕಸಾಯಿಖಾನೆಗೆ ಹೋಗದಂತೆ ಕ್ರಮ ಕೈಗೊಳ್ಳಿದ್ದೇವೆ ಎಂದರು.
ಸಚಿವರ ಶೂ ಆಪ್ತನು ಕೈಯಲ್ಲಿ ಹಿಡಿದು ತಂದ !
ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಬಳಿ ಹಾತಿರಾಮ್ ಸ್ವಾಮೀಜಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದ ಬಳಿಕ ಶೂ ಧರಿಸಲು ಅವರ ಆಪ್ತ ನೋರ್ವನಿಂದ ಶೂ ಧರಿಸಿದ್ದು ಹಲವು ಚರ್ಚೆಗೆ ಎಡೆಮಾಡಿ ಕೊಟ್ಟಿತು. ಓರ್ವ ಸಚಿವರಾಗಿ ಆಪ್ತನ ಕೈಯಲ್ಲಿ ಶೂ ತರಿಸಿದ್ದು ನಿಜಕ್ಕೂ ಟೀಕೆಗೆ ಎಡೆಮಾಡಿ ಕೊಟ್ಟಿತು.
ಮಂತ್ರಿ ಉಳಿಯೋದೇ ಕಷ್ಟವೆಂದ ಸಚಿವ !
ಕೊಪ್ಪಳ ತಾಲೂಕಿನ ಬಹದ್ದೂಬರಂಡಿ ಬಳಿ ಹಾತಿರಾಮ್ ಸ್ವಾಮೀಜಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಭೇಟಿ ನೀಡಿ ಸಮಾಧಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ವೇಳೆ ಸ್ಥಳೀಯ ಸ್ವಾಮೀಜಿಗಳು ಸಚಿವರ ಹೆಸರಲ್ಲಿ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿ ಬಳಿಕ ಸಚಿವ ಪ್ರಭು ಚವ್ಹಾಣ್ ಅವರು ಮುಂದೆ ಉನ್ನತ ಸ್ಥಾನಕ್ಕೇರಲಿ, ಉಪ ಮುಖ್ಯಮಂತ್ರಿಯಾಗಲಿ, ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದರು. ಈ ವೇಳೆ ಸಚಿವ ಚವ್ಹಾಣ್ ಅವರು ಈಗ ಮಂತ್ರಿ ಸ್ಥಾನ ಉಳಿಸಿಕೊಳ್ಳುವುದೇ ಕಷ್ಟವಿದೆ. ಇನ್ನೆಲ್ಲಿ ಡಿಸಿಎಂ, ಸಿಎಂ ಆಗೋದು ಎಂದು ಹಾಸ್ಯ ಚಟಾಕಿ ಒಡೆದಿದ್ದು ಎಲ್ಲರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ