ಮತ್ತೆ ಕೆಕೆಆರ್ ತಂಡವನ್ನು‌ ಸೇರಿಕೊಳ್ಳಲಿದ್ದಾರೆಯೇ ಪ್ರವಿಣ್‌ ತಾಂಬೆ


Team Udayavani, Sep 13, 2020, 7:00 PM IST

ಮತ್ತೆ ಕೆಕೆಆರ್ ತಂಡವನ್ನು‌ ಸೇರಿಕೊಳ್ಳಲಿದ್ದಾರೆಯೇ ಪ್ರವಿಣ್‌ ತಾಂಬೆ

ಕೋಲ್ಕತಾ: ಅತೀ ಹಿರಿಯ ಕ್ರಿಕೆಟಿಗ ಪ್ರವೀಣ್‌ ತಾಂಬೆ ಮತ್ತೆ ಕೋಲ್ಕತಾ ನೈಟ್‌ರೈಡರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದರೆ ಆಟಗಾರನಾಗಿ ಅಲ್ಲ, ಸಹಾಯಕ ಸಿಬಂದಿಯಾಗಿ.

ತಂಡಕ್ಕೆ ತಾಂಬೆ ಅವರಂಥ ಹಿರಿಯರ ಮಾರ್ಗದರ್ಶನದ ಅಗತ್ಯವನ್ನು ಮನಗಂಡು ಫ್ರಾಂಚೈಸಿಯ ಸಿಇಒ ವೆಂಕಿ ಮೈಸೂರ್‌ ಈ ನಿರ್ಧಾರಕ್ಕೆ ಬಂದಿದ್ದಾರೆ.

2020ರ ಐಪಿಎಲ್‌ ಹರಾಜಿನಲ್ಲಿ 48 ವರ್ಷದ ಪ್ರವೀಣ್‌ ತಾಂಬೆ ಅವರನ್ನು ಕೆಕೆಆರ್‌ 20 ಲಕ್ಷ ರೂ.ಗೆ ಬಿಡ್‌ ಮಾಡಿ ಖರೀದಿಸಿತ್ತು. ಆದರೆ ವಿದೇಶಿ ಕ್ರಿಕೆಟ್‌ ಲೀಗ್‌ನಲ್ಲೂ ಪಾಲ್ಗೊಳ್ಳುತ್ತಿರುವ ಕಾರಣ ಅವರಿಗೆ ಬಿಸಿಸಿಐ ಐಪಿಎಲ್‌ ನಿಷೇಧ ಹೇರಿತ್ತು. ಕೇವಲ ನಿವೃತ್ತ ಕ್ರಿಕೆಟಿಗರಷ್ಟೇ ವಿದೇಶಿ ಲೀಗ್‌ಗಳಲ್ಲಿ ಆಡಬಹುದೆಂಬುದು ಬಿಸಿಸಿಐ ನಿಯಮವಾಗಿದೆ.

ಸಿಪಿಎಲ್‌ನಲ್ಲಿ ಆಟ
ಬಳಿಕ ಪ್ರವೀಣ್‌ ತಾಂಬೆ “ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌’ನಲ್ಲಿ ಟ್ರಿನ್‌ಬಾಗೊ ನೈಟ್‌ರೈಡರ್ (ಟಿಕೆಆರ್‌) ತಂಡವನ್ನು ಪ್ರತಿನಿಧಿಸಿದರು. ಸಿಪಿಎಲ್‌ನಲ್ಲಿ ಆಡಿದ ಮೊದಲ ಭಾರತೀಯನೆಂಬ ಹಿರಿಮೆಗೂ ಪಾತ್ರರಾದರು. ಕೈರನ್‌ ಪೊಲಾರ್ಡ್‌ ನಾಯಕತ್ವದ ಟಿಕೆಆರ್‌ ತಂಡವೇ ಚಾಂಪಿಯನ್‌ ಆಗಿ ಹೊರಹೊಮ್ಮಿತು. ವಯಸ್ಸನ್ನೂ ಮೀರಿ ಗಮನಾರ್ಹ ಪ್ರದರ್ಶನ ನೀಡಿದ ತಾಂಬೆ ಈಗ ಕೆಕೆಆರ್‌ ಸಿಇಒ ಅವರ ಗಮನ ಸೆಳೆದಿದ್ದಾರೆ.

“ತಾಂಬೆ ಅವರ ಸಕಾರಾತ್ಮಕ ಚಿಂತನೆ, ಜೀವನ ಉತ್ಸಾಹವೆಲ್ಲ ಟಿಕೆಆರ್‌ ಕ್ರಿಕೆಟಿಗರ ಮೇಲೆ ಉತ್ತಮ ಪರಿಣಾಮ ಬೀರಿದೆ. ಅವರ ಫೀಲ್ಡಿಂಗ್‌, ಬೌಲಿಂಗ್‌ ಕೂಡ ಯಾವುದೇ ಯುವ ಆಟಗಾರರಿಗೆ ಕಡಿಮೆ ಇರಲಿಲ್ಲ. ಅವರ ಈ ಉತ್ಸಾಹ ನಮ್ಮ ಆಟಗಾರರಿಗೂ ಸ್ಫೂರ್ತಿ ಆಗಬೇಕಿದೆ. ಹೀಗಾಗಿ ತಾಂಬೆ ಕೆಕೆಆರ್‌ ತಂಡೊಂದಿಗೆ ಇರಲಿದ್ದಾರೆ’ ಎಂಬುದಾಗಿ ವೆಂಕಿ ಮೈಸೂರ್‌ ಹೇಳಿದರು.

41ರಲ್ಲಿ ಪದಾರ್ಪಣೆ
ಪ್ರವೀಣ್‌ ತಾಂಬೆ 2013ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಐಪಿಎಲ್‌ ಪದಾರ್ಪಣೆ ಮಾಡಿದ್ದರು. ಆಗಲೇ ಅವರಿಗೆ 41 ವರ್ಷವಾಗಿತ್ತು. 33 ಪಂದ್ಯಗಳಿಂದ 28 ವಿಕೆಟ್‌ ಹಾರಿಸಿದ್ದು ತಾಂಬೆ ಸಾಧನೆ. 2016ರಲ್ಲಿ ಗುಜರಾತ್‌ ಲಯನ್ಸ್‌ ತಂಡವನ್ನು ಪ್ರತಿನಿಧಿಸಿದ ಬಳಿಕ ಐಪಿಎಲ್‌ನಿಂದ ದೂರ ಉಳಿದಿದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.