ಮಾಜಿ ಸಚಿವ ಆಂಜನೇಯ ಮಾಡಿರುವ ಆರೋಪ ಸಾಬಿತಾದರೆ ರಾಜಕೀಯ ನಿವೃತ್ತಿ : ಸಚಿವ ಪ್ರಭು ಚವ್ಹಾಣ್

ಆರೋಪ ಸುಳ್ಳು ಎಂದು ಸಾಬಿತಾದರೆ ಮಾಜಿ ಸಚಿವ ಹೆಚ್. ಆಂಜನೇಯ ಬಹಿರಂಗವಗಿ ಕ್ಷಮೆ ಕೊರಲಿ

Team Udayavani, Sep 24, 2020, 5:16 PM IST

ಆರೋಪ ಸಾಬಿತಾದರೆ ರಾಜಕೀಯ ನಿವೃತ್ತಿ : ಆಂಜನೇಯ ಹೇಳಿಕೆಗೆ ಸಚಿವ ಪ್ರಭು ಚವ್ಹಾಣ್ ತಿರುಗೇಟು

ಬೆಂಗಳೂರು: ನನ್ನ ಜಾತಿ ಮತ್ತು ಜನ್ಮ ಸ್ಥಳದ ಕುರಿತು ಸಮಾಜಕಲ್ಯಾಣ ಇಲಾಖೆಯ ಮಾಜಿ ಸಚಿವ ಎಚ್. ಆಂಜನೇಯ ಅವರು ಚಿತ್ರದುರ್ಗದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಪಶು ಸಂಗೋಪನೆ, ವಕ್ಫ್ ಮತ್ತು ಹಜ್ ಖಾತೆ ಸಚಿವರಾದ ಪ್ರಭು ಚವ್ಹಾಣ್ ಅವರು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಆಂಜನೇಯ ಅವರಿಗೆ ನನ್ನ ಜಾತಿ, ಜನ್ಮದ ಮೂಲದ ಬಗ್ಗೆ ತಿಳಿಯಬೇಕಿದ್ದರೆ ಒಮ್ಮೆ ನನ್ನ ಕ್ಷೇತ್ರಕ್ಕೆ ಬಂದು ಸ್ವತಃ ವಾಸ್ತವ ಏನೆಂಬುದು ತಿಳಿದುಕೊಳ್ಳಲಿ. ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣಪತ್ರ ಪಡೆದಿರುವುದು ಸಾಬೀತಾದರೆ ಅದೇ ಕ್ಷಣ ರಾಜಕೀಯದಿಂದ ನಿವೃತ್ತಿ ಪಡೆಯುವೆ. ಒಂದು ವೇಳೆ ಇದು ಸುಳ್ಳು ಎಂದಾದರೆ ಅವರು ಬಹಿರಂಗವಾಗಿ ಕ್ಷಮೆ ಕೋರಲಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ :ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ: ಡಿ.ಕೆ ಶಿವಕುಮಾರ್

ನಾನು ಮೂಲತಃ ಕರ್ನಾಟಕದವನು. ನಾನು ಅಪ್ಪಟ ಕನ್ನಡಿಗ. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು. ನಾನು ಪರಿಶಿಷ್ಟ ಜಾತಿಯ(ಎಸ್.ಸಿ) ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆದರೆ ಆಂಜನೇಯ ಅವರು ವಾಸ್ತವ ಅರಿಯದೆ ಹಾಗೂ ಯಾರೋ ಕುತಂತ್ರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಂಬಿ ನಾನು ಮಹಾರಾಷ್ಟ್ರದವ ಎಂದು ಜಾತಿಗೆ ಸೇರಿದವನಲ್ಲ ಎಂದು ಆರೋಪಿಸಿದ್ದಾರೆ. ಪರಿಶಿಷ್ಟ ಸಮಾಜದ ಹಿರಿಯ ನಾಯಕರೆನಿಸಿಕೊಂಡ ಆಂಜನೇಯ ಅವರಿಂದ ಇಂತಹ ತಪ್ಪು ಹೇಳಿಕೆ ಬಂದಿರುವುದು ಅಚ್ಚರಿ ತಂದಿದೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ; ನಿರೂಪಕಿ ಅನುಶ್ರೀ ಗೂ ಸಿಸಿಬಿ ನೋಟೀಸ್

ನನ್ನ ಜಾತಿ ಹಾಗೂ ಜನ್ಮ ಸ್ಥಳದ ಕುರಿತು ಯಾವುದೇ ವಿವಾದವಿಲ್ಲ. ಆದರೆ ಕೆಲವರು ಮೇಲಿಂದ ಮೇಲೆ ಈ ವಿಷಯವನ್ನು ಕೆದಕಿ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮೂರನೇ ಸಲ ಔರಾದ್ ಕ್ಷೇತ್ರದ ಶಾಸಕನಾಗಿ, ಕಳೆದ ಒಂದು ವರ್ಷದಿಂದ ಸಚಿವನಾಗಿ ಮಾಡುತ್ತಿರುವಂತಹ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಈ ರೀತಿ ಸುಳ್ಳು ವಿಷಯ ಪ್ರಸ್ತಾಪಿಸಿ ನನಗೆ ಮಾನಸಿಕ ಹಿಂಸೆ ನೀಡಲು ಪ್ರಯತ್ನಿಸುತ್ತಿದ್ದಾರೆ. ನಾನು ಇದ್ಯಾವುದಕ್ಕೂ ಜಗ್ಗುವವನಲ್ಲ. ಜನಸೇವೆಯೇ ಜನಾರ್ಧನ ಸೇವೆ ಎಂದು ನಂಬಿ ಅವಿರತ ಕೆಲಸ ಮುಂದುವರಿಸಿದ್ದೇನೆ ಎಂದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.