ಉಪ ಚುನಾವಣೆಗೆ ಸಿದ್ಧತೆ: ಯಾರೇ ಬಂದರೂ ಸೇರಿಸಿಕೊಳ್ಳುತ್ತೇವೆ


Team Udayavani, Oct 12, 2019, 8:50 PM IST

Dinesh-Gundurao-545-A

ಬೆಂಗಳೂರು: ಚಳಿಗಾಲದ ಅಧಿವೇಶನ ಮುಕ್ತಾಯವಾಗುತ್ತಿರುವಂತೆ ಕಾಂಗ್ರೆಸ್‌ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಶನಿವಾರ 15 ಕ್ಷೇತ್ರಗಳ ಉಪ ಚುನಾವಣೆ ಸಿದ್ದತೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವೀಕ್ಷಕರ ಸಭೆಯನ್ನು ವಿಧಾನಸೌಧ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆಸಿದರು.

ಈಗಾಗಲೇ ಪಕ್ಷದ ವೀಕ್ಷಕರು ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಬಂದಿದ್ದರು. ಆದರೆ, ಚುನಾವಣೆ ಮುಂದೂಡಿಕೆಯಾಗಿದ್ದರಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸದೇ ಸ್ಥಗಿತಗೊಳಿಸಲಾಗಿತ್ತು.

ಈಗ ಡಿಸೆಂಬರ್‌ 5 ಕ್ಕೆ ಚುನಾವಣೆ ನಡೆಸಲು ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಈಗ ಮತ್ತೆ ಅನರ್ಹರ ಕ್ಷೇತ್ರಗಳಲ್ಲಿ ರಾಜಕೀಯ ಲೆಕ್ಕಾಚಾರಗಳು ಬದಲಾಗಿವೆ.

ಬಿಜೆಪಿಯವರು ಅನರ್ಹರ ಕ್ಷೇತ್ರಗಳಿಗೆ ಅವರಿಗೇ ಟಿಕೆಟ್‌ ನೀಡಲು ಮುಂದಾಗಿರುವುದರಿಂದ ಆ ಕ್ಷೇತ್ರಗಳಲ್ಲಿ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವರನ್ನು ಸಮಾಧಾನ ಮಾಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದರು. ಆದರೆ, ಕೆಲವರನ್ನು ನೇರವಾಗಿಯೇ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್‌ ನೀಡದಿದ್ದರೆ, ಪಕ್ಷೇತರ ಅಥವಾ ಬೇರೆ ಪಕ್ಷದ ಬಾಗಿಲು ಬಡಿಯುವುದಾಗಿ ಘೋಷಿಸಿದ್ದಾರೆ ಇದೆಲ್ಲವನ್ನೂ ಗಮನಿಸಿ ಕಾರ್ಯತಂತ್ರ ರೂಪಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಲಾಗಿದೆ.

ಬಿಜೆಪಿ ಪರಾಜಿತ ಅಭ್ಯರ್ಥಿಗಳ ಈ ನಡೆಯಿಂದ ಕಾಂಗ್ರೆಸ್‌ ಹದಿನೈದು ಕ್ಷೇತ್ರಗಳಲ್ಲಿ ಲೆಕ್ಕಾಚಾರ ಬದಲಾಯಿಸಿಕೊಂಡಿದ್ದು, ಬಿಜೆಪಿಯಿಂದ ಅಸಮಾಧಾನಗೊಂಡು ಪಕ್ಷಕ್ಕೆ ಸೇರ ಬಯಸುವವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅದೇ ಕಾರಣಕ್ಕೆ ಮತ್ತೂಂದು ಬಾರಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ, ಅಭಿಪ್ರಾಯ ಪಡೆಯಲು ನಾಯಕರು ನಿರ್ಧರಿಸಿದ್ದಾರೆ.

ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡ, ಹಿರೇಕೆರೂರು ಕ್ಷೇತ್ರದಲ್ಲಿ ಯು.ಬಿ. ಬಣಕಾರ್‌, ಕಾಗವಾಡ ಕ್ಷೇತ್ರದಲ್ಲಿ ರಾಜು ಕಾಗೆ, ಮಸ್ಕಿ ಕ್ಷೇತ್ರದಲ್ಲಿ ಬಸನಗೌಡ ತುರುವಿಹಾಳ್‌ ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಈಗ ಆ ಕ್ಷೇತ್ರಗಳಲ್ಲಿ ವೀಕ್ಷಕರು ಮತ್ತೂಂದು ಬಾರಿ ಪ್ರವಾಸ ಮಾಡಿ, ಆಯಾ ಜಿಲ್ಲಾ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಪಡೆಯುವಂತೆ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಒಂದು ವೇಳೆ, ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಅತೃಪ್ತರಾಗುವ ಟಿಕೆಟ್‌ ಆಕಾಂಕ್ಷಿಗಳಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡುವ ಬಗ್ಗೆ ಕಾಂಗ್ರೆಸ್‌ ಚಿಂತನೆ ನಡೆಸಿದ್ದು, ಸ್ಥಳೀಯವಾಗಿ ಕಾರ್ಯಕರ್ತರು ಹಾಗೂ ಜಿಲ್ಲೆಯ ಮುಖಂಡರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದು, ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆ ಮಾಡಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯ ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಕುರಿತು ವೀಕ್ಷಕರ ಜೊತೆ ಸಭೆ ನಡೆಸಿದ್ದೇವೆ. ವೀಕ್ಷಕರು ಮತ್ತೂಂದು ಬಾರಿ ಕ್ಷೇತ್ರಗಳಿಗೆ ತೆರಳಿ ಸ್ಥಳೀಯವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ ಒಂದು ರಾಜಕೀಯ ಪಕ್ಷವಾಗಿ ನಮ್ಮ ತತ್ವ ಸಿದ್ದಾಂತ ಒಪ್ಪಿಕೊಂಡು ಯಾರೇ ಪಕ್ಷಕ್ಕೆ ಬರುವುದಿದ್ದರೂ, ಅವರನ್ನು ಸೇರಿಸಿಕೊಳ್ಳಲು. ಈ ಬಗ್ಗೆ ಸ್ಥಳೀಯವಾಗಿ ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.