ತೆಲಂಗಾಣ ಎನ್ ಕೌಂಟರ್ ಕೇಸ್; ಡಿ.9ರವರೆಗೆ ನಾಲ್ವರ ಶವಸಂಸ್ಕಾರಕ್ಕೆ ಹೈಕೋರ್ಟ್ ತಡೆ
ಎನ್ ಕೌಂಟರ್ ಸಂಬಂಧ ದಾಖಲಾದ ಅರ್ಜಿಯ ತುರ್ತು ವಿಚಾರಣೆ
Team Udayavani, Dec 7, 2019, 10:27 AM IST
ನವದೆಹಲಿ: ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ನಾಲ್ವರು ಆರೋಪಿಗಳು ಪೊಲೀಸರ ಎನ್ ಕೌಂಟರ್ ಗೆ ಶುಕ್ರವಾರ ಮುಂಜಾನೆ ಬಲಿಯಾಗಿದ್ದು, ಆರೋಪಿಗಳ ಶವಸಂಸ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿದ್ದು, ಡಿಸೆಂಬರ್ 8ರವರೆಗೆ ಶವವನ್ನು ಸುರಕ್ಷಿತವಾಗಿಡುವಂತೆ ಪೊಲೀಸರಿಗೆ ಆದೇಶ ನೀಡಿದೆ.
ಶುಕ್ರವಾರ ಮುಂಜಾನೆ ಘಟನೆ ನಡೆದ ಚಟ್ಟಾಪಲ್ಲಿ ಪ್ರದೇಶಕ್ಕೆ ಸ್ಥಳ ಮಹಜರು ನಡೆಸಲು ನಾಲ್ವರು ಆರೋಪಿಗಳನ್ನು ಕರೆದೊಯ್ದಿದ್ದ ಸಂದರ್ಭದಲ್ಲಿ ಪೊಲೀಸರ ರಿವಾಲ್ವರ್ ಕಸಿದುಕೊಂಡು ಹಲ್ಲೆ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲಾಗಿತ್ತು.
ಆರೋಪಿಗಳ ಎನ್ ಕೌಂಟರ್ ಸಂಬಂಧ ದಾಖಲಾದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ನ ದ್ವಿ ಸದಸ್ಯ ಪೀಠ, ಶವಗಳ ಮರಣೋತ್ತರ ಪರೀಕ್ಷೆಯ ವೀಡಿಯೋ ಮಾಡಿ ಅದನ್ನು ಶನಿವಾರ ಸಂಜೆಯೊಳಗೆ ರಿಜಿಸ್ಟ್ರಾರ್ ಗೆ ಸಲ್ಲಿಸಬೇಕೆಂದು ಸೂಚಿಸಿದೆ.
ಆರೋಪಿಗಳ ಮರಣೋತ್ತರ ಪರೀಕ್ಷೆಯ ವೀಡಿಯೋ ಮಾಡಿ ತೆಲಂಗಾಣ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಗೆ ಶನಿವಾರ ಸಂಜೆಯೊಳಗೆ ನೀಡಬೇಕೆಂದು ಮೆಹಬೂಬನಗರ್ ಜಿಲ್ಲಾ ನ್ಯಾಯಾಧೀಶರು ಆದೇಶ ಹೊರಡಿಸಿದ್ದು, ಸೋಮವಾರ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?